ಅಜಯ್ ದೇವಗನ್, ಸುದೀಪ್ ಕನ್ನಡ-ಹಿಂದಿ ಭಾಷೆ ವಿವಾದಕ್ಕೆ ಅವರೇ ಅಂತ್ಯ ಹಾಡಿದ್ದಾರೆ. ಕನ್ನಡ ಭಾಷೆ ಬಗ್ಗೆ ನನ್ನ ನಿಲುವು ಏನು ಎಂದು ಸಂಸತ್ ಭಾಷಣದಲ್ಲೆ ಗೊತ್ತಾಗುತ್ತೆ. ಈ ಬಗ್ಗೆ ನಾನು ಹೆಚ್ಚು ಮಾತನಾಡಬೇಕಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಪ್ರತಿಕ್ರಿಯಿಸಿದ್ದಾರೆ.
ಜಿಲ್ಲೆಯ ಮದ್ದೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಂಸದೆ ಸುಮಲತಾ, ರಾಜ್ಯದಲ್ಲಿ ಎದ್ದಿರುವ ಗಲಭೆ, ಗೊಂದಲ ನಡುವೆ ಈ ಹೊಸ ವಿವಾದ ಬೇಡ. ಒಂದು ರಾಷ್ಟ್ರ ಭಾಷೆ ಅನ್ನೊ ಪ್ರಶ್ನೆಯೆ ಬರಲ್ಲ. ಉತ್ತರ ಭಾರತದಲ್ಲಿ ಹಿಂದಿ ಪ್ರಾಮುಖ್ಯತೆ ಇದೆ. ಕರ್ನಾಟಕದಲ್ಲಿ ಕನ್ನಡಕ್ಕೆ ಪ್ರಾಮುಖ್ಯತೆ ಇದೆ. ನಮ್ಮ ಭಾಷೆಗೆ ಧಕ್ಕೆಯಾದ್ರೆ ಯಾರು ಕೂಡ ಸುಮ್ಮನೆ ಇರಲ್ಲ. ಇದು ನಮ್ಮ ಸ್ವಾಭಿಮಾನ. ಸ್ವಾಭಿಮಾನಕ್ಕೆ ಧಕ್ಕೆಯಾದ್ರೆ ಯಾರು ಸುಮ್ಮನೆ ಇರಲ್ಲ. ನಮ್ಮ ಭಾಷೆಗೆ ನಮ್ಮದೆ ಆದಂತಹ ಗೌರವ ಇದೆ. ನಾವು ಎಲ್ಲಾ ಭಾಷೆಯನ್ನ ಗೌರವಿಸುತ್ತೇವೆ. ಆದ್ರೆ ನಮ್ಮ ಭಾಷೆಗೆ ಧಕ್ಕೆಯಾದ್ರೆ ಯಾರು ಸುಮ್ಮನೆ ಇರಲ್ಲ ಎಂದು ಗುಡುಗಿದ್ದಾರೆ.
ನಟ ಕಿಚ್ಚ ಸುದೀಪ್ ಹಾಗೂ ಬಾಲಿವುಡ್ ನಟ ಅಜಯ್ ದೇವಗನ್ ನಡುವಿನ ‘ರಾಷ್ಟ್ರ ಭಾಷೆ’ ಕುರಿತ ಟ್ವೀಟ್ ಮಾತುಕತೆ ಇದೀಗ ದೊಡ್ಡಮಟ್ಟದ ಚರ್ಚೆಗೆ ನಾಂದಿ ಹಾಡಿದೆ. ದೇಶಾದ್ಯಂತ ಅನೇಕರು ಸುದೀಪ್ಗೆ ಬೆಂಬಲ ಸೂಚಿಸಿದ್ದು, ಹಲವರು ಅಜಯ್ ದೇವಗನ್ ಪರ ನಿಂತಿದ್ದಾರೆ. ಇಬ್ಬರೂ ಸ್ಟಾರ್ ನಟರೂ ಈ ವಿಚಾರದ ಮಾತುಕತೆಯನ್ನು ಅಲ್ಲಿಗೆಯೇ ನಿಲ್ಲಿಸೋಣ ಎಂದು ಹೇಳಿದ್ದರೂ ಕೂಡ ಟ್ವಿಟರ್ನಲ್ಲಿ ಈ ಕುರಿತ ಹಲವು ಅಂಶಗಳು ಟ್ರೆಂಡಿಂಗ್ನಲ್ಲಿ ಕಾಣಿಸಿಕೊಂಡಿವೆ.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy