ಬೆಂಗಳೂರು: ಹಿರಿಯ ಗಾಯಕ ಹಾಗೂ ಪ್ರಾಧ್ಯಾಪಕ ಡಾ.ರಾಜಶೇಖರ ಮನಸೂರ ಅವರು ಭಾನುವಾರ ಬೆಂಗಳೂರಿನಲ್ಲಿ ನಿಧನರಾದರು.
ಅವರಿಗೆ 79 ವರ್ಷ ವಯಸ್ಸಾಗಿತ್ತು. ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಪಂ. ಮಲ್ಲಿಕಾರ್ಜುನ ಮನಸೂರ ಅವರ ಪುತ್ರರಾಗಿರುವ ಡಾ. ರಾಜಶೇಖರ ಮನಸೂರ ಅವರು ಜೈಪುರ ಅತ್ರೌಲಿ ಘರಾಣೆ ಸಂಗೀತದ ಮೇರು ಗಾಯಕರಾಗಿದ್ದರು.ಇಂಗ್ಲೆಂಡ್ ನಲ್ಲಿ ಶಿಕ್ಷಣ ಪೂರೈಸಿ ಕರ್ನಾಟಕ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾಗಿದ್ದರು.
ಆಲ್ ಇಂಡಿಯಾ ರೇಡಿಯೊದ ಉನ್ನತ ಶ್ರೇಣಿಯ ಕಲಾವಿದರಾಗಿದ್ದ ಇವರು ಬಹಳಷ್ಟು ಪ್ರಮುಖ ವೇದಿಕೆಯಲ್ಲಿ ಕಛೇರಿ ನೀಡಿದ್ದಾರೆ. ಇವರ ಗಾಯನದ ಧ್ವನಿಮುದ್ರಿಕೆಗಳನ್ನು ಭೋಪಾಲ್ ನಲ್ಲಿರುವ ಇಂದಿರಾಗಾಂಧಿ ರಾಷ್ಟ್ರೀಯ ಮನುಕುಲ ಸಂಗ್ರಹಾಲಯದಲ್ಲಿ ಸಂಗ್ರಹಿಸಿಡಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5