ಚಿತ್ರದುರ್ಗ: ಜಿಲ್ಲೆಯ ಬಸವಕೇಂದ್ರ ಮುರುಘಾಮಠದಿಂದ ಕೊಡ ಮಾಡುವಂತ ಪ್ರತಿಷ್ಠಿತ 2021ನೇ ಸಾಲಿನ ಬಸವಶ್ರೀ ಪ್ರಶಸ್ತಿಯನ್ನು, ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಇಂದು ಪ್ರದಾನ ಮಾಡಲಾಗುತ್ತದೆ.
ಬಸವ ಜಯಂತಿಯ ದಿನವಾದ ಇಂದು, ಚಿತ್ರದುರ್ಗದ ಅನುಭವ ಮಂಟಪದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಡಾ.ಶಿವಮೂರ್ತಿ ಮುರುಘಾ ಶರಣರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಮಾಜಿ ಸಿಎಂ ಸಿದ್ಧರಾಮಯ್ಯ, ಕೃಷಿ ಸಚಿವ ಬಿ.ಸಿ ಪಾಟೀಲ್, ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿ, ನಟ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಮುಖ್ಯ ಅತಿಥಿಗಳಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮುರುಘಾ ಶ್ರೀಗಳು ಮರಣೋತ್ತರವಾಗಿ ಪುನೀತ್ ರಾಜ್ ಕುಮಾರ್ ಅವರಿಗೆ ಬಸವಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದು, ರಾಜ್ ಕುಟುಂಬ ಪ್ರಶಸ್ತಿಯನ್ನು ಸ್ವೀಕರಿಸಲಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5