ಹಿರಿಯೂರು: ವಿಶ್ವದಾದ್ಯಂತ ಮಂಗಳವಾರ ರಂಜಾನ್ ಹಾಗೂ ಬಸವಜಯಂತಿ ಹಬ್ಬಗಳನ್ನು ಬಹಳ ವಿಜೃಂಭಣೆಯಿಂದ ನಡೆಸಲಾಯಿತು. ಕಳೆದ ಎರಡು ವರ್ಷಗಳಿಂದ ಓಮಿಕ್ರೋನ್ ಹಾಗೂ ಕೊರೊನಾ ಸಾಂಕ್ರಾಮಿಕ ಕಾಯಿಲೆಗಳಿಂದ ಸ್ಥಬ್ದಗೊಂಡಿದ್ದ ಹಬ್ಬ ಈ ವರ್ಷ ಸಡಗರ ಸಂಭ್ರಮದಿಂದ ನಡೆಯಿತು.
ಹಿರಿಯೂರು ನಗರದ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ವಿಶೇಷ ಪ್ರಾರ್ಥನೆ ನಡೆಸಿದರು. ಇದೇ ವೇಳೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಸೋಮಶೇಖರ್ ಬಿ. ಅವರು ರಂಜಾನ್ ಹಬ್ಬದಲ್ಲಿ ಭಾಗಿಯಾಗಿ ಮುಸ್ಲಿಂ ಬಾಂಧವರಿಗೆ ಶುಭಾಶಯ ತಿಳಿಸಿದರು.
ರಂಜಾನ್ ಹಬ್ಬದ ಪ್ರಯುಕ್ತ ಮುಸ್ಲಿಮರಿಗೆ ಸೋಮಶೇಖರ್ ಬಿ. ಅವರ ಅಭಿಮಾನಿಗಳು ಕುಡಿಯಲು ತಂಪಾದ ಪಾನಿಯಗಳು , ನೀರು, ಮಜ್ಜಿಗೆ ಗಳನ್ನು ನೀಡುವ ಮೂಲಕ ಸಾಮರಸ್ಯದ ಸಂದೇಶ ಸಾರಿದರು.
ಇದೇ ಸಂದರ್ಭದಲ್ಲಿ ನಮ್ಮ ತುಮಕೂರು ಮಾಧ್ಯಮದ ಮೂಲಕ ಮಾತನಾಡಿದ ಕಾಂಗ್ರೆಸ್ ಪಕ್ಷದ ಮುಖಂಡರಾದ ಚಂಗಿರಿ ಅಕ್ರಮ್ , ಕಳೆದ ಚುನಾವಣೆಯಲ್ಲಿ ಸೋಮಶೇಖರ್ ಬಿ. ಅವರು ಸೋಲನ್ನು ಕಂಡಿದ್ದು ನಿಜಕ್ಕೂ ಸಹ ಬೇಸಾರದ ಸಂಗತಿಯಾಗಿದೆ . ಆದರೆ ಇದೀಗ 2023ರಲ್ಲಿ ಬರುವಂತಹ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಹಿರಿಯೂರು ತಾಲ್ಲೂಕಿನ ಶಾಸಕರಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ, ಹಿರಿಯೂರು ತಾಲ್ಲೂಕಿನ ಎಲ್ಲಾ ಮುಸ್ಲಿಂ ಭಾಂಧವರು ಹಾಗೂ ಎಲ್ಲಾ ಜಾತಿಯ ಬಾಂಧವರು ಸಹ ಸೋಮಶೇಖರ್ ಬಿ ಅವರ ಪರವಾಗಿ ಕೆಲಸ ನಿರ್ವಹಿಸಿ , ಅವರನ್ನು ಹಿರಿಯೂರು ತಾಲ್ಲೂಕಿನ ಶಾಸಕರಾಗಿ ಬರಲು ಅತಿ ಹೆಚ್ಚಿನ ರೀತಿಯಲ್ಲಿ ಶ್ರಮಿಸಬೇಕಾಗಿದೆ ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಸೋಮಶೇಖರ್ ಬಿ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರು ಹಾಗೂ ಕಾಡುಗೊಲ್ಲ ಜನಾಂಗದ ಮುಖಂಡರಾದ ಸಿ .ಬಿ.ಪಾಪಣ್ಣ, ನಿಜಲಿಂಗಪ್ಪ, ಕನ್ವಿರ್, ಶಿಕ್ಷಕರಾದ ಅಂಜುಮ್ ಮಜಾಹಿದ್, ಚಂಗಿರಿ ಅಕ್ರಮ್, ಫೈರೋಜ್, ಚಮನ್ ಷರೀಫ್ ಆದಿವಾಲ, ಸೂರ್ಯೋದಯ ಸ್ಟುಡಿಯೋ ಅಬ್ದುಲ್ ಕರೀಂ, ಕಾರ್ಮಿಕ ವಿಭಾಗದ ಶಿವಕುಮಾರ್ ವಿ., ಡಾ.ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾಧ್ಯಕ್ಷರಾದ ರಾಮಚಂದ್ರಪ್ಪ, ತಾಲ್ಲೂಕು ಅಧ್ಯಕ್ಷರಾದ ರಾಘವೇಂದ್ರ, ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್ಯಕರ್ತರು , ಮುಖಂಡರುಗಳು ಹಾಗೂ ಎಲ್ಲಾ ಮುಸ್ಲಿಂ ಭಾಂಧವರು ಸಹ ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್. ಹಿರಿಯೂರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5