nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕಬಳ್ಳಾಪುರ: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ; ನವವಿವಾಹಿತೆ ದುರ್ಮರಣ, ಪತಿಗೆ ಗಂಭೀರ ಗಾಯ

    December 21, 2025

    ಯಾವ ಶಕ್ತಿಯಿಂದಲೂ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

    December 21, 2025

    ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮುಂದಿನ ವಾರ 24ನೇ ಕಂತಿನ ಹಣ ಬಿಡುಗಡೆ!

    December 21, 2025
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕಬಳ್ಳಾಪುರ: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ; ನವವಿವಾಹಿತೆ ದುರ್ಮರಣ, ಪತಿಗೆ ಗಂಭೀರ ಗಾಯ
    • ಯಾವ ಶಕ್ತಿಯಿಂದಲೂ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ
    • ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮುಂದಿನ ವಾರ 24ನೇ ಕಂತಿನ ಹಣ ಬಿಡುಗಡೆ!
    • ಕೊರಟಗೆರೆ ಇತಿಹಾಸದಲ್ಲೇ ಮೊದಲ ಬಾರಿಗೆ ಲೋಕ ಕಲ್ಯಾಣಕ್ಕಾಗಿ ಶ್ರೀನಿವಾಸ ಕಲ್ಯಾಣೋತ್ಸವ
    • ಮೇಲನಹಳ್ಳಿ ತ್ಯಾಜ್ಯ ಘಟಕಕ್ಕೆ ಗ್ರಾಮಸ್ಥರ ತೀವ್ರ ವಿರೋಧ: ತಹಶೀಲ್ದಾರ್ ಭೇಟಿ
    • ಕರ್ನಾಟಕ ಒಲಂಪಿಕ್ 2025: ಕ್ರೀಡಾಪಟುಗಳ ಬೆನ್ನಿಗೆ ನಿಂತ ಸರ್ಕಾರ; ಪದಕ ಗೆದ್ದರೆ ಕೋಟಿ ಕೋಟಿ ನಗದು ಸಂಭಾವನೆ
    • ಪಾವಗಡ ತಾಲ್ಲೂಕಿನಲ್ಲಿ ಪಲ್ಸ್ ಪೋಲಿಯೋ ಅಭಿಯಾನ: 17 ಸಾವಿರ ಮಕ್ಕಳಿಗೆ ಲಸಿಕೆ ಗುರಿ
    • ಸಂತಪುರದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » PSI ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಹೂ’ಕುಂಡ’ಲಿ ರಹಸ್ಯ!
    Uncategorized May 4, 2022

    PSI ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಹೂ’ಕುಂಡ’ಲಿ ರಹಸ್ಯ!

    By adminMay 4, 2022No Comments2 Mins Read
    ips

    545 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮ ಬಗೆದಷ್ಟು ಬಯಲಾಗ್ತಿದೆ. ಇಷ್ಟು ದಿನ ಜ್ಞಾನಜ್ಯೋತಿ ಶಾಲೆಯ ಸುತ್ತಲೂ ಗಿರಕಿ ಹೊಡೆಯುತ್ತಿದ್ದ ಸಿಐಡಿ ಅಧಿಕಾರಿಗಳು ಮತ್ತೊಂದು ರಹಸ್ಯ ಬಿಚ್ಚಿಟ್ಟಿದ್ದಾರೆ. ಕಿಂಗ್‌ಪಿನ್‌ ಆರ್‌ಡಿ ಪಾಟೀಲ್‌ ಅಕ್ರಮದ ಬಗ್ಗೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾನೆ. ಆತನ ಹೇಳಿಕೆ ಆಧರಿಸಿ ಹೊರಟಿದ್ದ ಸಿಐಡಿ ಅಧಿಕಾರಿಗಳು ‘ಹೂಕುಂಡಲಿ’ ರಹಸ್ಯವನ್ನು ಭೇದಿಸಿದ್ದು, ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಂತಾಗಿದೆ.

    ಅಕ್ರಮದ ಕೇಂದ್ರ ಬಿಂದು ಆಗಿದ್ದ ಜ್ಞಾನ ಜ್ಯೋತಿ ಶಾಲೆಯಲ್ಲಿನ ಅಕ್ರಮದ ತನಿಖೆ ನಡೆಸುವ ವೇಳೆ ಸಿಐಡಿ ಅಧಿಕಾರಿಗಳಿಗೆ ಸ್ಫೋಟಕ ಮಾಹಿತಿಯೊಂದು ಲಭ್ಯವಾಗಿದೆ. ಕಲಬುರಗಿಯ ಇನ್ನೊಂದು ಕಾಲೇಜಿನ ಅಕ್ರಮವನ್ನು ಕಿಂಗ್‌ಪಿನ್ ಆರ್‌ಡಿ ಪಾಟೀಲ್‌ ಬಾಯ್ಬಿಟ್ಟಿದ್ದಾನೆ. ನಗರದ MS ಇರಾನಿ ಕಾಲೇಜ್‌ನಲ್ಲಿ ನಡೆದ ಅಕ್ರಮದ ಬಗ್ಗೆ ಇಂಚಿಂಚೂ ಮಾಹಿತಿಯನ್ನು ಸಿಐಡಿ ಅಧಿಕಾರಿಗಳ ಮುಂದೆ ಹೇಳಿದ್ದಾನೆ. ಕಿಂಗ್‌ಪಿನ್‌ ಆರ್‍ಡಿ ಪಾಟೀಲ್ ತನ್ನ ಅಡಿಟರ್ ಮೂಲಕ ಪರಿಚಯವಾದ ಕಲಬುರಗಿಯ ರಾಜಾಪುರ ಬಡಾವಣೆಯ ನಿವಾಸಿ ಪ್ರಭು ಅನ್ನೋ ಅಭ್ಯರ್ಥಿಗೆ ಬ್ಲೂಟೂತ್ ಮೂಲಕ ಎಂ.ಎಸ್.ಇರಾನಿ ಕಾಲೇಜ್‌ನಲ್ಲಿ ಪರೀಕ್ಷೆ ಬರೆಸಿರುವುದಾಗಿ ಸತ್ಯ ಕಕ್ಕಿದ್ದಾನೆ. ಇನ್ನು ಈ ಬಗ್ಗೆ ಸಿಐಡಿ ಡಿವೈಎಸ್ಪಿ ಪ್ರಕಾಶ್ ರಾಠೋಡ್ ಕಲಬುರಗಿಯ ಸ್ಟೇಷನ್ ಬಜಾರ್ ಠಾಣೆಗೆ ದೂರು ಸಲ್ಲಿಸಿದ್ದಾರೆ.


    Provided by
    Provided by

    ಪ್ರಕಾಶ್ ರಾಠೋಡ್ ದೂರಿನನ್ವಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ದೂರು ದಾಖಲಾಗ್ತಿದ್ದಂತೆ ಪೊಲೀಸರು ಆರ್‌ಡಿ ಪಾಟೀಲ್‌ನ ಅಡಿಟರ್ ಚಂದ್ರಕಾಂತ್ ಕುಲಕರ್ಣಿ, ಅಭ್ಯರ್ಥಿ ಪ್ರಭು ಮತ್ತು ಪ್ರಭು ತಂದೆ ಶರಣಪ್ಪ ಮೂವರನ್ನು ಬಂಧಿಸಿದ್ದಾರೆ. ಇನ್ನೂ ಅಕ್ರಮದಲ್ಲಿ ಬಂಧಿತನಾಗಿರುವ ಅಭ್ಯರ್ಥಿ ಪ್ರಭು ಪರೀಕ್ಷೆ ಬರೆದ ಕಾಲೇಜಿಗೆ ಕರೆದೊಯ್ದು ವೇಳೆ ತಾನು ಮಾಡಿದ್ದ ಕೃತ್ಯದ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾನೆ. ಪರೀಕ್ಷೆಯ ಮುನ್ನಾ ದಿನವೇ ಪರೀಕ್ಷಾ ಕೇಂದ್ರದ ಒಳಗಿರುವ ಹೂವಿನ ಕುಂಡದಲ್ಲಿ ಬ್ಲೂಟೂತ್ ಬಚ್ಚಿಟ್ಟು, ಪರೀಕ್ಷೆ ದಿನ ಬೆಳಗ್ಗೆ ಬೇಗ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ ಕುಂಡದಲ್ಲಿರುವ ಬ್ಲೂಟೂತ್ ತೆಗೆದುಕೊಂಡು ಬಾತ್‌ರೂಮ್‌ಗೆ ಹೋಗಿ ಒಳ ಉಡುಪಿನಲ್ಲಿ ಬ್ಲೂಟೂತ್ ಇಟ್ಟುಕೊಂಡಿದ್ದನಂತೆ.

    ತದನಂತರ ಪರೀಕ್ಷಾ ಕೇಂದ್ರದ ಒಳಗೆ ಹೋಗಿ ಬ್ಲೂಟೂತ್ ಆನ್ ಮಾಡಿಕೊಂಡು ಅಕ್ರಮವಾಗಿ ಪರೀಕ್ಷೆ ಬರೆದಿರೋದಾಗಿ ಅಕ್ರಮದ ಹಿಂದಿನ ರಹಸ್ಯವನ್ನು ಬಿಚ್ಚಿಟ್ಟಿದ್ದಾನೆ. ಇಲ್ಲಿ ಇನ್ನೊಂದು ವಿಶೇಷ ಅಂದ್ರೆ ಮಗನನ್ನು ಪಿಎಸ್‌ಐ ಮಾಡೋಕೆ ಪ್ರಭು ತಂದೆ ಶರಣಪ್ಪ 50 ಲಕ್ಷ ರೂ. ನೀಡಿರೋ ಮಾಹಿತಿ ತನಿಖೆ ವೇಳೆ ಬಯಲಾಗಿದೆ. ಪ್ರಭು ಡಿಗ್ರಿ ಮುಗಿಸಿದ ಬಳಿಕ ಆತನಿಗೊಂದು ಸರ್ಕಾರಿ ನೌಕರಿ ಮಾಡಿಸುವಂತೆ ಆರ್‌ಡಿ ಪಾಟೀಲ್‌ನ ಅಡಿಟರ್ ಚಂದ್ರಕಾಂತ್ ಕುಲಕರ್ಣಿಗೆ ಪ್ರಭು ತಂದೆ ಶರಣಪ್ಪ ಮನವಿ ಮಾಡಿದ್ದನಂತೆ. ಇದಾದ ಬಳಿಕ ಅಡಿಟರ್‌ ಚಂದ್ರಕಾಂತ್‌ ತನ್ನ ಅಕ್ರಮದ ಗುರು, ಕಿಂಗ್‌ಪಿನ್‌ ಆರ್‌ಡಿ ಪಾಟೀಲ್‌ನನ್ನು ಪರಿಚಯ ಮಾಡಿಸಿಕೊಟ್ಟಿದ್ದಾನೆ. ಇದೇ ವೇಳೆ 50 ಲಕ್ಷ ರೂ.ಗೆ ಪಿಎಸ್‌ಐ ಹುದ್ದೆಯ ಡೀಲ್‌ ಆಗಿ, ಅಡ್ವಾನ್ಸ್‌ ಕೊಟ್ಟು ಬಂದಿದ್ದ ಇದೇ ಪ್ರಭು ತಂದೆ ಶರಣಪ್ಪ.

    ಅದರಂತೆ ಮಗ ಪಿಎಸ್ಐ ಆಗ್ತಾನೆ ಅಂತಾ ಕನಸು ಕಂಡಿದ್ದ ಪ್ರಭು ತಂದೆ ಶರಣಪ್ಪ ಇರೋ ಮನೆ ಸೈಟ್ ಮಾರಾಟ ಮಾಡಿ ಆರ್‌ಡಿ ಪಾಟೀಲ್‌ಗೆ ಲಕ್ಷ ಲಕ್ಷ ಹಣ ನೀಡಿದ್ದಾನಂತೆ. ಆದರೆ, ದುರಂತ ನೋಡಿ ಕೊಟ್ಟ ಹಣವು ಹೋಯ್ತು, ಮಗನಿಗೆ ಪಿಎಸ್‌ಐ ನೌಕರಿಯೂ ಸಿಗದೇ ಇಬ್ಬರೂ ಜೈಲುಪಾಲಾಗಿದ್ದಾರೆ. ಸದ್ಯ ಸಿಐಡಿ ಅಕ್ರಮ ನೇಮಕಾತಿಯಲ್ಲಿ ಬಂಧಿತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಇದಷ್ಟೇ ಅಲ್ಲದೇ ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಆರಂಭದಿಂದಲೂ ಪೊಲೀಸ್ ಅಧಿಕಾರಿಗಳು ಭಾಗಿಯಾಗಿರುವ ಶಂಕೆ ಇದೆ. ಹೀಗಾಗಿ ಹೆಚ್ಚಿನ ತನಿಖೆಗಾಗಿ ಓರ್ವ ಡಿವೈಎಸ್‌ಪಿಯ ಮೊಬೈಲ್ ವಶಕ್ಕೆ ಪಡೆದ ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸ್ತಿದ್ದಾರೆ.

    PSI ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ದಿನಕ್ಕೊಂದು ಸ್ಫೋಟಕ ಮಾಹಿತಿಗಳು ಹೊರ ಬೀಳುತ್ತಿವೆ. ತನಿಖೆ ವೇಳೆ ಎಮ್‌ಎಸ್‌ಐ ಇರಾನಿ ಕಾಲೇಜ್‌ನಲ್ಲಿ ಪರೀಕ್ಷೆ ಬರೆದವರಲ್ಲಿ 8 ಜನ ಅಭ್ಯರ್ಥಿಗಳು ಪಾಸ್ ಆಗಿದ್ದಾರೆ. ಅದರಲ್ಲಿ ಅಕ್ರಮವಾಗಿ ಬರೆದ ಓರ್ವ ಅಭ್ಯರ್ಥಿ ಈಗಾಗಲೇ ಅರೆಸ್ಟ್ ಆಗಿದ್ದಾನೆ. ಒಟ್ನಲ್ಲಿ ಅಕ್ರಮದ ಹಿಂದಿರುವ ಒಬ್ಬರ ಹಿಂದೊಬ್ಬರಂತೆ ಆರೋಪಿಗಳನ್ನು ಸಿಐಡಿ ಹೆಡೆಮುರಿಕಟ್ಟುತ್ತಿದ್ದು, ಇನ್ನಷ್ಟು ಜನರನ್ನು ಬಂಧಿಸುವ ಸಾಧ್ಯತೆಯಿದೆ.

    ವರದಿ ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೊರಟಗೆರೆ ಇತಿಹಾಸದಲ್ಲೇ ಮೊದಲ ಬಾರಿಗೆ ಲೋಕ ಕಲ್ಯಾಣಕ್ಕಾಗಿ ಶ್ರೀನಿವಾಸ ಕಲ್ಯಾಣೋತ್ಸವ

    December 21, 2025

    ಪೊಲೀಸ್ ಠಾಣೆ ಆವರಣದಲ್ಲಿ ಕಾರಿನೊಳಗೆ ಅವಿತುಕೊಂಡ ಚಿರತೆ

    December 12, 2025

    ತುಮಕೂರಿನಲ್ಲಿ ಉದ್ಘಾಟನೆಗೆ ಸಿದ್ಧಗೊಂಡ ಜಿಲ್ಲಾ ಬಂಜಾರ ಭವನ

    December 12, 2025

    Leave A Reply Cancel Reply

    Our Picks

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚಿಕ್ಕಬಳ್ಳಾಪುರ: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ; ನವವಿವಾಹಿತೆ ದುರ್ಮರಣ, ಪತಿಗೆ ಗಂಭೀರ ಗಾಯ

    December 21, 2025

    ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗೂಳೂರು ರಸ್ತೆಯ ಚಿನ್ನೇಪಲ್ಲಿ ಕ್ರಾಸ್ ಬಳಿ ಶನಿವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…

    ಯಾವ ಶಕ್ತಿಯಿಂದಲೂ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

    December 21, 2025

    ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮುಂದಿನ ವಾರ 24ನೇ ಕಂತಿನ ಹಣ ಬಿಡುಗಡೆ!

    December 21, 2025

    ಕೊರಟಗೆರೆ ಇತಿಹಾಸದಲ್ಲೇ ಮೊದಲ ಬಾರಿಗೆ ಲೋಕ ಕಲ್ಯಾಣಕ್ಕಾಗಿ ಶ್ರೀನಿವಾಸ ಕಲ್ಯಾಣೋತ್ಸವ

    December 21, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.