nammatumakuru

    Subscribe to Updates

    Get the latest creative news from FooBar about art, design and business.

    What's Hot

    ವೈಭವದಿಂದ ನಡೆದ ಪಾವಗಡ ಹಿಂದೂ ಮಹಾಗಣಪತಿಯ ವಿಸರ್ಜನಾ ಶೋಭಾಯಾತ್ರೆ

    September 29, 2025

    ಬೀದರ್: ನಿರಂತರ ಮಳೆ, ವಿಶೇಷ ಪ್ಯಾಕೇಜ್‌ ಗೆ ಸಿಎಂಗೆ ಸಚಿವರ ಮನವಿ

    September 29, 2025

    ಮ್ಯಾರಥಾನ್ ಓಟ | ಪುರುಷರ ವಿಭಾಗದಲ್ಲಿ ಅಬ್ದುಲ್‌ ಬಾರಿ, ಮಹಿಳೆಯರ ವಿಭಾಗದಲ್ಲಿ ಪ್ರಣತಿ ಗೆಲುವು

    September 29, 2025
    Facebook Twitter Instagram
    ಟ್ರೆಂಡಿಂಗ್
    • ವೈಭವದಿಂದ ನಡೆದ ಪಾವಗಡ ಹಿಂದೂ ಮಹಾಗಣಪತಿಯ ವಿಸರ್ಜನಾ ಶೋಭಾಯಾತ್ರೆ
    • ಬೀದರ್: ನಿರಂತರ ಮಳೆ, ವಿಶೇಷ ಪ್ಯಾಕೇಜ್‌ ಗೆ ಸಿಎಂಗೆ ಸಚಿವರ ಮನವಿ
    • ಮ್ಯಾರಥಾನ್ ಓಟ | ಪುರುಷರ ವಿಭಾಗದಲ್ಲಿ ಅಬ್ದುಲ್‌ ಬಾರಿ, ಮಹಿಳೆಯರ ವಿಭಾಗದಲ್ಲಿ ಪ್ರಣತಿ ಗೆಲುವು
    • ತುಮಕೂರು ದಸರಾ | ರಸದೌತಣ ನೀಡಿದ ನಾಡ ಕುಸ್ತಿ
    • ತುಮಕೂರು ದಸರಾ: ಗಮನ ಸೆಳೆದ ‘ಪಂಜಿನ ಕವಾಯತು’
    • ಕೊರಟಗೆರೆ | ಪದೇ ಪದೇ ಕೆಟ್ಟು ನಿಲ್ಲುತ್ತಿರುವ  112 ಪೊಲೀಸ್ ತುರ್ತು ವಾಹನ
    • ತುಮಕೂರು | ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕಾರ
    • ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳು ಪಾರದರ್ಶಕವಾಗಿ ನಡೆಯಲಿ: ಎಬಿವಿಪಿ ಆಗ್ರಹ
    ತುಮಕೂರು May 4, 2022

    ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳು ಪಾರದರ್ಶಕವಾಗಿ ನಡೆಯಲಿ: ಎಬಿವಿಪಿ ಆಗ್ರಹ

    By adminMay 4, 2022No Comments2 Mins Read
    prathibatane

    ತುಮಕೂರು: ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಬೇಕು ಎಂದು ಒತ್ತಾಯಿಸಿ ತುಮಕೂರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಕರ್ನಾಟಕ, ವತಿಯಿಂದ ಪ್ರತಿಭಟನೆ ನಡೆಯಿತು.

    ಸರಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳು ನಡೆಯುತ್ತಿರುವುದು ವಿಪರ್ಯಾಸ. ವಿದ್ಯಾವಂತ, ಬಡ ಮತ್ತು ಪ್ರತಿಭಾವವಂತ ವಿದ್ಯಾರ್ಥಿಗಳು ನ್ಯಾಯಯುತವಾಗಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಿ ತಮ್ಮನಸನ್ನು ನನಸಾಗಿಸಲು ಅನೇಕ ಸವಾಲುಗಳನ್ನು ಎದುರಿಸುತ್ತಾರೆ. ಆದರೆ ಇಂತಹ ಪರೀಕ್ಷೆಯಲ್ಲಿ ಅಕ್ರಮ ನಡೆಯುತ್ತಿರುವುದು ವಿಪರ್ಯಾಸವಾಗಿದೆ ಎಂದು ಸಂಘಟನೆ ಖಂಡಿಸಿದೆ.


    Provided by
    Provided by
    Provided by

    ಹುದ್ದೆಗಳ ಸಂಖ್ಯೆ ಬೆರಳೆಣಿಕೆಯಷ್ಟಿದ್ದರೂ ಸಾವಿರರರು – ಲಕ್ಷಾಂತರ ಸಂಖ್ಯೆಯಲ್ಲಿ ಸರ್ಧಾತ್ಮಕ ಪರೀಕ್ಷೆ ಎದುರಿಸುತ್ತಾರೆ. ಆದರೆ ಅವರು ಎದುರಿಸುವ ಪರೀಕ್ಷೆಗಳಲ್ಲಿಯೇ ದೊಡ್ಡಮಟ್ಟದಲ್ಲಿ ಅಕ್ರಮಗಳು ನಡೆಯುತ್ತವೆ. ಇದರಿಂದಾಗಿ ಬಡ ಮತ್ತು ಪ್ರತಿಭಾವಂತ ನಿರುದ್ಯೋಗಿಗಳ ಕನಸಿಗೆ ತಣ್ಣೀರೆರಚಿದಂತಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರೀ ಆಕ್ರಮ, ಭ್ರಷ್ಟಾಚಾರ ನಡೆಯುತ್ತಿರುವುದು ವಿದ್ಯಾವಂತ ನಿರುದ್ಯೋಗಿಗಳಲ್ಲಿ ನಿರಾಸೆಯನ್ನು ಮೂಡಿಸಿದೆ ಎಂದು ಸಂಘಟನೆಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

    ಪರೀಕ್ಷೆಗಳಲ್ಲಿ ಅಕ್ರಮ ನಡೆಯುತ್ತಿರುವ ಬಗೆಗೆ ಈ ಮೊದಲಿನಿಂದಲೂ ಆರೋಪಗಳು ಕೇಳಿ ಬರುತ್ತಿದ್ದರೂ ಕೂಡ ಇತ್ತೀಚಿನ 3-4 ವರ್ಷಗಳಲ್ಲಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದ ಅಕ್ರಮಗಳ ಬಗ್ಗೆ ಸರಣಿಯಂತೆ ಬಯಲಾಗುತ್ತಿದೆ. ಸರಕಾರಿ ಉದ್ಯೋಗಗಳಲ್ಲಿ ಅರ್ಜಿ ಮತ್ತು ಪ್ರತಿಭಾವಂತರಿಗೆ ಅವಕಾಶ ಲಭಿಸುವುದನ್ನು ಖಾತರಿಪಡಿಸುವ ದೃಷ್ಟಿಯಿಂದ ಅತ್ಯಂತ ಪಾರದರ್ಶಕ ರೀತಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯಬೇಕೆಂಬ ಉದ್ದೇಶದಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುತ್ತ ಬರಲಾಗಿದೆ.

    ಆದರೆ ಬಹುತೇಕ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮಗಳು ರಾಜಾರೋಷವಾಗಿ ನಡೆಯುತ್ತಿದ್ದು, ಈ ಪರೀಕ್ಷೆಗಳ ನೈಜ ಉದ್ದೇಶವನ್ನ ಬುಡಮೇಲು ಮಾಡಿವೆ, ಆಡಳಿತ ವ್ಯವಸ್ಥೆ, ರಾಜಕೀಯ ನಾಯಕರು, ಉನ್ನತ ಅಧಿಕಾರಿಗಳೂ ಈ ಆಕ್ರಮಗಳಲ್ಲಿ ಪ್ರತ್ಯಕ್ತಿ ಅಥವಾ ಪರೋಕ್ಷವಾಗಿ ಭಾಗಿಯಾಗಿರುವುದು ಕೂಡ ಕಾಣಿಬರುತ್ತಿರುವುದು ಖಂಡನೀಯವಾಗಿದೆ ಎಂದು ಎಬಿವಿಪಿ ಖಂಡಿಸಿದೆ.

    KAS, PSI, SDA, FDA, ಸಹಾಯಕ ಪ್ರಾಧ್ಯಾಪಕರ, ಮತ್ತು ಇನ್ನುಳಿದ ಹುದ್ದೆಗಳ ನೇಮಕಾತಿ ನ್ಯಾಯಯುತವಾಗಿ ಪಾರದರ್ಶಕವಾಗಿ ನಡೆದಲ್ಲಿ ಮಾತ್ರ ಅದಕ್ಕೊಂದು ಗೌರವ, ಘನತೆ ಇರುತ್ತದೆ. ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ಸರಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಪರೀಕ್ಷೆಗಳಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ತಪ್ಪಿತಸ್ಥರು ಎಷ್ಟೇ ದೊಡ್ಡವಾರಗಿರಲಿ, ಎಷ್ಟೇ ಪ್ರಭಾವಶಾಲಿಯಾಗಿರಲಿ, ಅವರಿಗೆ ಕಠಿಣ ಶಿಕ್ಷೆಯಾಗುವಂತೆ ಕಠಿಣ ಕ್ರಮವಹಿಸಲು ಎಬಿವಿಪಿ ಮುಖಂಡರು ಸರಕಾರಕ್ಕೆಒತ್ತಾಯಿಸಿದರು.

    ವರದಿ: ಎ ಎನ್ ಪೀರ್, ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಮ್ಯಾರಥಾನ್ ಓಟ | ಪುರುಷರ ವಿಭಾಗದಲ್ಲಿ ಅಬ್ದುಲ್‌ ಬಾರಿ, ಮಹಿಳೆಯರ ವಿಭಾಗದಲ್ಲಿ ಪ್ರಣತಿ ಗೆಲುವು

    September 29, 2025

    ತುಮಕೂರು ದಸರಾ | ರಸದೌತಣ ನೀಡಿದ ನಾಡ ಕುಸ್ತಿ

    September 29, 2025

    ತುಮಕೂರು ದಸರಾ: ಗಮನ ಸೆಳೆದ ‘ಪಂಜಿನ ಕವಾಯತು’

    September 29, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ವೈಭವದಿಂದ ನಡೆದ ಪಾವಗಡ ಹಿಂದೂ ಮಹಾಗಣಪತಿಯ ವಿಸರ್ಜನಾ ಶೋಭಾಯಾತ್ರೆ

    September 29, 2025

    ಪಾವಗಡ:  ಭಾನುವಾರ ಬೆಳಿಗ್ಗೆ 12 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಪಾವಗಡ ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ ಭಜರಂಗದಳದಿಂದ ಪ್ರತಿಷ್ಠಾಪನೆ…

    ಬೀದರ್: ನಿರಂತರ ಮಳೆ, ವಿಶೇಷ ಪ್ಯಾಕೇಜ್‌ ಗೆ ಸಿಎಂಗೆ ಸಚಿವರ ಮನವಿ

    September 29, 2025

    ಮ್ಯಾರಥಾನ್ ಓಟ | ಪುರುಷರ ವಿಭಾಗದಲ್ಲಿ ಅಬ್ದುಲ್‌ ಬಾರಿ, ಮಹಿಳೆಯರ ವಿಭಾಗದಲ್ಲಿ ಪ್ರಣತಿ ಗೆಲುವು

    September 29, 2025

    ತುಮಕೂರು ದಸರಾ | ರಸದೌತಣ ನೀಡಿದ ನಾಡ ಕುಸ್ತಿ

    September 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.