nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ

    November 4, 2025

    ಅಶ್ಲೀಲ ಸಂದೇಶ ಕಳಿಸಿ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ

    November 4, 2025

    ಪರಿಶಿಷ್ಟ ಪಂಗಡಗಳನ್ನು ಕಾಂಗ್ರೆಸ್ ಕೇವಲ ಮತಬ್ಯಾಂಕ್ ಆಗಿ ಪರಿಗಣಿಸುತ್ತಿದೆ:  ಬಿ.ವೈ. ವಿಜಯೇಂದ್ರ ಆರೋಪ

    November 4, 2025
    Facebook Twitter Instagram
    ಟ್ರೆಂಡಿಂಗ್
    • ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ
    • ಅಶ್ಲೀಲ ಸಂದೇಶ ಕಳಿಸಿ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ
    • ಪರಿಶಿಷ್ಟ ಪಂಗಡಗಳನ್ನು ಕಾಂಗ್ರೆಸ್ ಕೇವಲ ಮತಬ್ಯಾಂಕ್ ಆಗಿ ಪರಿಗಣಿಸುತ್ತಿದೆ:  ಬಿ.ವೈ. ವಿಜಯೇಂದ್ರ ಆರೋಪ
    • ಮಾಜಿ ಸಚಿವ, ಶಾಸಕ ಹೆಚ್.ವೈ.ಮೇಟಿ ನಿಧನ
    • ಹುಲಿ ದಾಳಿಗೆ ಹೆದರಿ ಹೊರಬಾರದ ಜನ: ಅರಣ್ಯ ಇಲಾಖೆಯಿಂದ ಆಹಾರದ ಕಿಟ್ ವಿತರಣೆ
    • ಸರಗೂರು | ಮುಳ್ಳೂರು ಗ್ರಾಮವನ್ನು ಹೋಬಳಿ ಕೇಂದ್ರ ಮಾಡಲು ಪ್ರಯತ್ನಿಸಲಾಗುವುದು: ಶಾಸಕ ಅನಿಲ್ ಕುಮಾರ್
    • ಬೀದಿಬದಿ ವ್ಯಾಪಾರಸ್ಥರ ಸುರಕ್ಷತೆಗೆ ಕ್ರಮವಹಿಸುವಂತೆ ಸದಸ್ಯರ ಆಗ್ರಹ
    • ಕೊರಟಗೆರೆ ಬಸ್ ಗಾಗಿ ಪರದಾಟ:   ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ವಿರುದ್ಧ ಹೆಚ್ಚಾದ ಜನಾಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಾಗತಿಕ ಹೆಮ್ಮಾರಿಯಾಗುತ್ತಿದೆ ಹಸಿವು, ಯುದ್ಧಗಳಿಂದ ಮತ್ತಷ್ಟು ಆಹಾರದ ಕೊರತೆ
    ಸ್ಪೆಷಲ್ ನ್ಯೂಸ್ May 6, 2022

    ಜಾಗತಿಕ ಹೆಮ್ಮಾರಿಯಾಗುತ್ತಿದೆ ಹಸಿವು, ಯುದ್ಧಗಳಿಂದ ಮತ್ತಷ್ಟು ಆಹಾರದ ಕೊರತೆ

    By adminMay 6, 2022No Comments2 Mins Read
    food

    ಉಕ್ರೇನ್ ಯುದ್ಧ ಜಾಗತಿಕ ಪರಿಣಾಮ ಬೀರುವುದರಿಂದ ದಿನನಿತ್ಯದ ಆಹಾರಕ್ಕೆ ಪರದಾಡುವವರ ಸಂಖ್ಯೆಗರಿಷ್ಠ ಮಟ್ಟಕ್ಕೆ ತಲುಪಿದೆ ಎಂದು ವಿಶ್ವಸಂಸ್ಥೆ ಆತಂಕ ವ್ಯಕ್ತ ಪಡಿಸಿದೆ.ಹವಾಮಾನ ವೈಪರೀತ್ಯಗಳು, ಕೊರೊನಾ ಸಾಂಕ್ರಾಮಿಕದ ಆರ್ಥಿಕ ಪರಿಣಾಮ, ಉಕ್ರೇನ್ ಸಂಘರ್ಷಗಳು ಮೂರು ವಿಷಕಾರಿ ಸಂಯೋಜನೆಯಾಗಿದ್ದು, 2021 ರಲ್ಲಿ 53 ದೇಶಗಳ ಸುಮಾರು 193 ಮಿಲಿಯನ್ ಜನರು ತೀವ್ರ ಆಹಾರ ಕೊರತೆ ಅನುಭವಿಸಿದರು. ಈ ವರ್ಷ ಅದಕ್ಕೆ ಮತ್ತೆ 40 ಮಿಲಿಯನ್ ಜನ ಸೇರ್ಪಡೆಯಾಗಿದ್ಧಾರೆ ಎಂದು ವಿಶ್ವಸಂಸ್ಥೆ ಹೇಳಿದೆ.

    ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ ವಿಶ್ವ ಆಹಾರ ಕಾರ್ಯಕ್ರಮ ಮತ್ತು ಯುರೋಪಿಯನ್ ಯೂನಿಯನ್ ಜಂಟಿಯಾಗಿ ತಯಾರಿಸಿದ ಆಹಾರ ಬಿಕ್ಕಟ್ಟಿನ ಜಾಗತಿಕ ವರದಿಯಲ್ಲಿ ಈ ಅಂಕಿಅಂಶಗಳು ಕಾಣಿಸಿಕೊಂಡಿವೆ.ವರದಿಯ ಪ್ರಕಾರ ಅಫ್ಘಾನಿಸ್ತಾನ, ಕಾಂಗೋ, ಇಥಿಯೋಪಿಯಾ, ನೈಜೀರಿಯಾ, ದಕ್ಷಿಣ ಸುಡಾನ್, ಸಿರಿಯಾ ಮತ್ತು ಯೆಮೆನ್ ಸೇರಿದಂತೆ ಸುದೀರ್ಘ ಸಂಘರ್ಷಗಳನ್ನು ಅನುಭವಿಸುತ್ತಿರುವ ದೇಶಗಳು ಆಹಾರದ ಕೊರತೆ ಅನುಭವಿಸುತ್ತಿವೆ.


    Provided by
    Provided by

    ದೀರ್ಘಕಾಲದ ಬರ, ಹೆಚ್ಚುತ್ತಿರುವ ಆಹಾರ ಬೆಲೆಗಳು ಮತ್ತು ನಿರಂತರ ಹಿಂಸಾಚಾರದಿಂದಾಗಿ ಸೊಮಾಲಿಯಾ 2022 ರಲ್ಲಿ ವಿಶ್ವದ ಅತ್ಯಂತ ಕೆಟ್ಟ ಆಹಾರ ಬಿಕ್ಕಟ್ಟನ್ನು ಎದುರಿಸಲಿದೆ ಎಂದು ವರದಿ ಮುನ್ಸೂಚನೆ ನೀಡಿದೆ. ಸೋಮಾಲಿದಲ್ಲಿ 6 ಮಿಲಿಯನ್ ಜನ ತೀವ್ರ ಆಹಾರ ಬಿಕ್ಕಟ್ಟಿಗೆ ಸಿಲುಕಬಹುದು.

    ಆಹಾರ ಉತ್ಪಾದನೆಗೆ ಗ್ರಾಮೀಣ ಭಾಗವನ್ನು ಬೆಂಬಲಿಸದಿದ್ದರೆ ಹಸಿವು, ಕುಸಿಯುವ ಜೀವನ ಮಟ್ಟ ವಿನಾಶಕ ಪರಿಣಾಮ ಸೃಷ್ಟಿಸಲಿದೆ. ಮುಂದಿನ ಅನಾವುತಗಳನ್ನು ತಡೆಯಲು ಈಗಿನಿಂದಲೇ ಬೃಹತ್ ಪ್ರಮಾಣದ ತುರ್ತು ಕ್ರಮಗಳ ಅಗತ್ಯವಿದೆ ಎಂದು ವಿಶ್ವಸಂಸ್ಥೆ ಎಚ್ಚರಿಸಿದೆ.ಗೋ, ರಸಗೊಬ್ಬರ ಮತ್ತು ಇತರ ಆಹಾರ ಪೂರೈಕೆಗಾಗಿ ಉಕ್ರೇನ್ ಮತ್ತು ರಷ್ಯಾವನ್ನು ಅವಲಂಬಿಸಿರುವ ಸೋಮಾಲಿಯಾ ಹಾಗೂ ಅನೇಕ ಆಫ್ರಿಕನ್ ದೇಶಗಳಿಗೆ ಪ್ರಸ್ತುತ ನಡೆಯುತ್ತಿರುವ ಯುದ್ಧ ಸಂಕಷ್ಟ ತಂದಿಟ್ಟಿದೆ.ಹೆಚ್ಚುತ್ತಿರುವ ಆಹಾರ ಹಾಗೂ ತೈಲ ಬೆಲೆಗಳು, ಹಣದುಬ್ಬರದಿಂದಾಗಿ 47 ಮಿಲಿಯನ್ ಜನರು ಬಿಕ್ಕಟ್ಟಿಗೆ ಸಿಲುಕಿದ್ದಾರೆ.

    ಇದಕ್ಕೂ ಮೊದಲು ಕೋವಿಡ್ ನಿಂದಾಗಿ ಆದಾಯ ಕುಸಿತವಾಗಿ ಆಹಾರದ ಬೆಲೆಗಳು 10 ವರ್ಷಗಳ ಗರಿಷ್ಠ ಮಟ್ಟಕ್ಕೆ ತಲುಪಿದ್ದವು. ಇಂಧನ ಬೆಲೆಗಳು ಏಳು ವರ್ಷಗಳಲ್ಲೇ ಗರಿಷ್ಠ ಮಟ್ಟದಲ್ಲಿವೆ ಎಂದು ವರದಿ ವಿವರಿಸಿದೆ.ಉಕ್ರೇನ್ ಯುದ್ಧ ಧಾನ್ಯಗಳು ಮತ್ತು ಸಸ್ಯಜನ್ಯ ಎಣ್ಣೆಗಳಂತಹ ಸರಕುಗಳ ಬೆಲೆಗಳನ್ನು ದಾಖಲೆಯ ಗರಿಷ್ಠ ಮಟ್ಟಕ್ಕೆ ಹೆಚ್ಚಿಸಿವೆ. ಹಸಿವು ಮತ್ತು ಅಪೌಷ್ಟಿಕತೆ ಹೆಚ್ಚಾಗುತ್ತಿದೆ.

    2016ರಲ್ಲಿ ಶೇ.11ರಷ್ಟು ಜನ ಆಹಾರ ಅಭದ್ರತೆಯನ್ನು ಅನುಭವಿಸಿದ್ದರೆ, 2021ರಲ್ಲಿ ಅದು ಶೇ. 22 ಏರಿತ್ತು. ತುರ್ತು ಸಂದರ್ಭಗಳ ಬಳಕೆಗಾಗಿ 2021 ರಲ್ಲಿ 8.1 ಶತಕೋಟಿ ಡಾಲರ್ ನಿ ತುರ್ತು ಕೆಲಸಕ್ಕೆ ಲಭ್ಯವಿತ್ತು, 2017 ಕ್ಕಿಂತಲೂ ಇದು 25ರಷ್ಟು ಕಡಿಮೆಯಾಗಿದೆ ಎಂದು ವಿವರಿಸಲಾಗಿದೆ.
    ಆಹಾರ ಭದ್ರತೆಯನ್ನು ನಿಗಿಸಲು ಮಳೆಗಾಲ ಆರಂಭದಲ್ಲಿ ನಾಟಿಗಾಗಿ 1.5 ಶತಕೋಟಿ ಡಾಲರ್ ನೆರವು ನೀಡುವ ಅಗತ್ಯ ಇದೆ. ಇದನ್ನು ಈಗ ನಿರ್ಲಕ್ಷ್ಯಿಸಿದರೆ ಮುಂದಿನ ದಿನಗಳಲ್ಲಿ ಸಾವಿರ ಪಟ್ಟು ಹೆಚ್ಚು ಖರ್ಚು ಮಾಡಬೇಕಿದೆ ಎಂದು ವಿಶ್ವಸಂಸ್ಥೆ ಪ್ರಮುಖರು ಎಚ್ಚರಿಸಿದ್ದಾರೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ವೆನೆಜುವೆಲಾದ ಮಾರಿಯಾ ಕೊರಿನಾ ಮಚಾದೊ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ

    October 10, 2025

    ಟ್ರಂಪ್‌ ಅವರದು ‘ಪುಂಡ’ ವ್ಯಾಪಾರ ನೀತಿ: ಭಾರತದ ಪರ ನಿಂತ ಚೀನಾ!

    August 8, 2025

    ಅವಳ ತುಟಿ ಮಷಿನ್‌ ಗನ್‌: ಶ್ವೇತಭವನದ ಪತ್ರಿಕಾ ಕಾರ್ಯದರ್ಶಿಯ ಸೌಂದರ್ಯ ಹೊಗಳಿದ ಟ್ರಂಪ್!

    August 4, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ

    November 4, 2025

    ಬೆಂಗಳೂರು: ಮಾಜಿ ಸಚಿವರು, ಹಿರಿಯ ನಾಯಕರು ಹಾಗೂ ಹಾಲಿ ಶಾಸಕರೂ ಆಗಿದ್ದ ಹೆಚ್.ವೈ.ಮೇಟಿಯವರು ಇಂದು 12.30 ಗೆ ನಿಧನರಾಗಿದ್ದಾರೆ. ನಾನು…

    ಅಶ್ಲೀಲ ಸಂದೇಶ ಕಳಿಸಿ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ

    November 4, 2025

    ಪರಿಶಿಷ್ಟ ಪಂಗಡಗಳನ್ನು ಕಾಂಗ್ರೆಸ್ ಕೇವಲ ಮತಬ್ಯಾಂಕ್ ಆಗಿ ಪರಿಗಣಿಸುತ್ತಿದೆ:  ಬಿ.ವೈ. ವಿಜಯೇಂದ್ರ ಆರೋಪ

    November 4, 2025

    ಮಾಜಿ ಸಚಿವ, ಶಾಸಕ ಹೆಚ್.ವೈ.ಮೇಟಿ ನಿಧನ

    November 4, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.