ಗುಬ್ಬಿ: ತಾಲ್ಲೂಕಿನ ಐತಿಹಾಸಿಕ ಪ್ರಸಿದ್ದ ಅಳಿಲಘಟ್ಟ ಶ್ರೀ ಲಕ್ಷ್ಮೀವೆಂಕಟರಮಣಸ್ವಾಮಿಯ ಬ್ರಹ್ಮ ರಥೋತ್ಸವ ಶನಿವಾರ ಸಾವಿರಾರು ಭಕ್ತರ ನಡುವೆ ವೈಭವದಿಂದ ಜರುಗಿತು.
ಬೆಳಿಗ್ಗೆ ದೇವಾಲಯದಲ್ಲಿ ಸ್ವಾಮಿಯವರಿಗೆ ಅಭಿಷೇಕ, ಸುಪ್ರಭಾತಸೇವೆ, ಪಂಚಾಮೃತ ಸೇವೆ, ವಿಶೇಷ ಅಲಂಕಾರ ಮಾಡಲಾಯಿತು.
ಸಾಗಸಂದ್ರ ಶ್ರೀ ಕೆಂಪಮ್ಮ ದೇವಿಯ ಆಗಮನದೊಂದಿಗೆ ಬ್ರಹ್ಮ ರಥೋತ್ಸವಕ್ಕೆ ಲಕ್ಷ್ಮೀವೆಂಕಟರಮಣಸ್ವಾಮಿ ಹಾಗೂ ಶ್ರೀ ಕೆಂಪಮ್ಮ ದೇವಿಯ ಉತ್ಸವದೊಂದಿಗೆ ರಥೋತ್ಸವಕ್ಕೆ ಆಗಮಿಸಿದವು.
ರಥೋತ್ಸವದಲ್ಲಿ ಹೋಮ ಪುಜಾ ಕಾರ್ಯಕ್ರಮಗಳು ಜರುಗಿದವು ನಂತರ ಮಧ್ಯಾಹ್ನ 1ಗಂಟೆಗೆ ಸ್ವಾಮಿಯ ಬ್ರಹ್ಮ ರಥೋತ್ಸವ ಅದ್ದೂರಿಯಾಗಿ ನಡೆಯಿತು.
ಕೋವಿಡ್ ನಿಂದ ಎರಡು ವರ್ಷ ಸ್ವಾಮಿಯ ಜಾತ್ರೆ ಸರಳವಾಗಿ ನಡೆಯುತ್ತು.ಈ ಭಾರಿ ಅದ್ದೂರಿಯಾಗಿ ಭಕ್ತರು ಸೇರಿ ಜಾತ್ರೆ ಮಾಡಿದರು.
ಜಿಲ್ಲೆಯ ವಿವಿಧಡೆಗಳಿಂದ ಅಗಮಿಸಿದ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ರಥವನ್ನು ಎಳೆದರು.ಸುಡು ಬಿಸಿಲು ಲೆಕ್ಕಿಸದೇ ಜಯಘೋಷ ಕೂಗುತ್ತ ರಥವನ್ನು ಎಳೆದರು. ಭಕ್ತಾಧಿಗಳಿಗೆ ಅಲ್ಲಲ್ಲಿ ಪಾನಕ , ಮಜ್ಜಿಗೆ ಫಲಹಾರ ಸೇವೆ ಮಾಡಲಾಯಿತ್ತು.ಸಾವಿರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ರಥವನ್ನು ಎಳೆದು ಸ್ವಾಮಿಯ ಕೃಪೆಗೆ ಪಾತ್ರರಾದರು. ಭಕ್ತಾಧಿಗಳಿಗೆ ಮಹಾ ದಾಸೋಹ ಏರ್ಪಡಿಸಲಾಗಿತ್ತು. ಇದೇ ಸಂಧರ್ಭದಲ್ಲಿ ಭಕ್ತಾಧಿಗಳಿಗೆ ಲಡ್ಡು ಪ್ರಸಾದ ವಿತರಿಸಲಾಯಿತು.
ವರದಿ: ಮಂಜುನಾಥ್, ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5