ಬೆಂಗಳೂರು: ರವಿಚಂದ್ರನ್ ಅವರನ್ನು ಹೋಲುತ್ತಿದ್ದ ತುಮಕೂರಿನ ಆರ್ಕೆಸ್ಟ್ರಾ ಕಲಾವಿದ ಜೂನಿಯರ್ ರವಿಚಂದ್ರನ್ ಎಂದೇ ಪರಿಚಿತರಾಗಿದ್ದ ಲಕ್ಷ್ಮಿ ನಾರಾಯಣ ಅವರು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.’
ಮಂಗಳವಾರದಂದು ಸಂಪ್ ಗೆ ನೀರು ತುಂಬಿಸಲು ಮೋಟಾರ್ ಚಾಲು ಮಾಡಿದಾಗ ವಿದ್ಯುತ್ ಪ್ರವಹಿಸಿ ಲಕ್ಷ್ಮಿ ನಾರಾಯಣ್ ಅಸುನೀಗಿದ್ದಾರೆ ಎಂದು ಹೇಳಲಾಗಿದೆ. ಜೂ ರವಿಚಂದ್ರನ್ ಎಂದೇ ಖ್ಯಾತರಾಗಿದ್ದ ಲಕ್ಷ್ಮಿ ನಾರಾಯಣ್ ಕುಣಿಗಲ್ ತಾಲ್ಲೂಕಿನ ಹೆರೂರು ಗ್ರಾಮದವರಾಗಿದ್ದರು. ಅವರಿಗೆ 35 ವರ್ಷ ವಯಸ್ಸಾಗಿತ್ತು.
ರವಿಚಂದ್ರನ್ ಅವರ ಅಪ್ಪಟ ಅಭಿಮಾನಿ ಆಗಿದ್ದ ಲಕ್ಷ್ಮಿನಾರಾಯಣ್, ಹಲವು ವೇದಿಕೆಗಳಲ್ಲಿ, ರವಿಚಂದ್ರನ್ ಅವರ ಹಲವು ಸಿನಿಮಾಗಳ ವಿವಿಧ ಗೆಟಪ್ ಗಳನ್ನು ಧರಿಸಿ ಅವರಂತೆ ಫೋಸು ನೀಡಿ ಫೋಟೊಗಳನ್ನು ತೆಗೆಸಿಕೊಂಡಿದ್ದರು. ಸದಾ ಅವರಂತೆ ಮಾತನಾಡುತ್ತಿದ್ದರು. ಘಟನೆ ಹಿನ್ನೆಲೆಯಲ್ಲಿ ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy