nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಾಳ್ಮೆ ಕಳೆದುಕೊಳ್ಳದೇ ಒರಟು ಸ್ವಭಾವದವರ ಜೊತೆಗೆ ವ್ಯವಹರಿಸುವುದು ಹೇಗೆ?: ಇಲ್ಲಿದೆ 7 ಟಿಪ್ಸ್

    January 11, 2026

    ಬಿಸಿಯೂಟ ತಯಾರಕರ ಫೆಡರೇಷನ್ ತಾಲೂಕು ಅಧ್ಯಕ್ಷರಿಗೆ ಸನ್ಮಾನ

    January 11, 2026

    ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

    January 11, 2026
    Facebook Twitter Instagram
    ಟ್ರೆಂಡಿಂಗ್
    • ತಾಳ್ಮೆ ಕಳೆದುಕೊಳ್ಳದೇ ಒರಟು ಸ್ವಭಾವದವರ ಜೊತೆಗೆ ವ್ಯವಹರಿಸುವುದು ಹೇಗೆ?: ಇಲ್ಲಿದೆ 7 ಟಿಪ್ಸ್
    • ಬಿಸಿಯೂಟ ತಯಾರಕರ ಫೆಡರೇಷನ್ ತಾಲೂಕು ಅಧ್ಯಕ್ಷರಿಗೆ ಸನ್ಮಾನ
    • ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
    • ಪಕ್ಷಕ್ಕೆ ಡ್ಯಾಮೇಜ್ ಆಗೋ ಕೆಲಸ ಯಾವತ್ತೂ ಮಾಡಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
    • ಕೇರಳದಲ್ಲಿ ಮಲಯಾಳಂ ಕಡ್ಡಾಯ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ
    • ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!
    • ವಿಜಯಪುರ ಸೈನಿಕ ಶಾಲೆಯಲ್ಲಿ ಬೃಹತ್ ನೇಮಕಾತಿ: ಶಿಕ್ಷಕರು ಹಾಗೂ ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ
    • ಸರಗೂರು: ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್  ಮಾದರಿ: ಪುರಸಭೆ ಸದಸ್ಯ ಎಚ್.ಸಿ.ನರಸಿಂಹಮೂರ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಡಿಯುವ ನೀರಿಗೂ ಕಷ್ಟದ ದಿನಗಳು ಬರಲಿವೆ : ದೇವೇಗೌಡರ ಎಚ್ಚರಿಕೆ
    ರಾಜ್ಯ ಸುದ್ದಿ May 12, 2022

    ಕುಡಿಯುವ ನೀರಿಗೂ ಕಷ್ಟದ ದಿನಗಳು ಬರಲಿವೆ : ದೇವೇಗೌಡರ ಎಚ್ಚರಿಕೆ

    By adminMay 12, 2022No Comments2 Mins Read
    devegowda

    ಬೆಂಗಳೂರಿಗೆ ಕುಡಿಯುವ ನೀರಿನ ವಿಚಾರದಲ್ಲಿ ಇನ್ನಷ್ಟು ಕಷ್ಟದ ದಿನಗಳು ಬರಲಿವೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು.ಬಸವನಗುಡಿ ವಿಧಾನಸಭಾ ಕ್ಷೇತ್ರದ ಗವಿಗಂಗಾಧರೇಶ್ವರ ದೇವಾಲಯದ ಬಳಿ ಹಮ್ಮಿಕೊಂಡಿದ್ದ ಜೆಡಿಎಸ್ನ ಜನತಾ ಜಲಧಾರೆ ಸಂಕಲ್ಪ ಸಮಾವೇಶ ಮತ್ತು ಗಂಗಾರತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ ನಗರದ ಕೆಲವು ಭಾಗದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಬೆಂಗಳೂರಿನ ಜನರ ಕುಡಿಯುವ ನೀರಿನ ಬವಣೆ ಪರಿಹರಿಸಬೇಕಾಗಿದೆ ಎಂದರು.

    1994ರಲ್ಲಿ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರಚಾರವನ್ನು ಆರಂಭಿಸಲಾಗಿತ್ತು. ಆಗ ಪಕ್ಷ ಅಕಾರಕ್ಕೆ ಬಂದಿತ್ತು. ಇಂದು ಕೂಡ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದೇವೆ. ಶಿವನ ಕೃಪೆ ನಮ್ಮ ಮೇಲೆ ಇರಲಿ. ಇದು ಶ್ರೇಷ್ಟವಾದ ಸ್ಥಳ ಎಂದರು.


    Provided by
    Provided by

    ಮೇ 13ರಂದು ನೆಲಮಂಗಲದ ಬಳಿ ನಡೆಯುವ ಬೃಹತ್ ಸಮಾವೇಶವನ್ನು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಹಾಹಕಾರ ಬರುವ ದಿನಗಳು ದೂರವಿಲ್ಲ. ಕಳೆದ 75 ವರ್ಷದಲ್ಲಿ ನೀರಾವರಿ ವಿಚಾರದಲ್ಲಿ ಆಗಿರುವ ಅನ್ಯಾಯವನ್ನು ಸರಿಪಡಿಸುವುದು ನಮ್ಮ ಜನತಾ ಜಲಧಾರೆಯ ಉದ್ದೇಶವಾಗಿದೆ.

    ನಗರದ ಹಲವು ಭಾಗಗಳಲ್ಲಿ ಟ್ಯಾಂಕರ್ ಮತ್ತು ಬೋರ್ವೆಲ್ ಮೂಲಕ ನೀರು ಪೂರೈಸಲಾಗುತ್ತಿದೆ. ಈಗಲೂ ದೊಡ್ಡ ಮಟ್ಟದ ಕುಡಿಯುವ ನೀರಿನ ಸಮಸ್ಯೆಯನ್ನು ಬೆಂಗಳೂರು ಎದುರಿಸುತ್ತಿದೆ ಎಂದರು.ತಮಿಳುನಾಡಿನ ಒತ್ತಡಕ್ಕೆ ಮಣಿದು ಕಾಂಗ್ರೆಸ್ ಸರ್ಕಾರ ಬೆಂಗಳೂರಿಗೆ 9 ಟಿಎಂಸಿ ನೀರನ್ನು ಬಳಕೆಗೆ ಒಪ್ಪಿಗೆ ಕೊಟ್ಟಿರಲಿಲ್ಲ. ದೇವೇಗೌಡರು ಪ್ರಧಾನಿಯಾದ ನಂತರ 9 ಟಿಎಂಸಿ ನೀರು ಬೆಂಗಳೂರಿಗೆ ದೊರೆಯುವಂತಾಯಿತು.

    ಜನತಾದಳ ಸರ್ಕಾರವಿದ್ದಾಗ ಬೆಂಗಳೂರು ಅಭಿವೃದ್ಧಿಗೆ ಗುಣಾತ್ಮಕ ಕೆಲಸವಾಗಿತ್ತು. ಈಗ ಜನಪ್ರತಿನಿಗಳ ಅಭಿವೃದ್ಧಿಯಾಗುತ್ತಿದೆ. ಜನರ ಸಂಪತ್ತು ಲೂಟಿಯಾಗುತ್ತಿದೆ. ಉದ್ಘಾಟನೆಯಾದ ಕೆಲವೇ ದಿನಗಳಲ್ಲಿ ವಾಜಪಾಯಿ ಕ್ರೀಡಾಂಗಣದ ಛಾವಣಿ ಕುಸಿದು ಬಿದ್ದಿದೆ. ಇದು ಈಗಿನ ಶಾಸಕರು ಕೊಡುತ್ತಿರುವ ಕೊಡುಗೆ ಎಂದು ವ್ಯಂಗ್ಯವಾಡಿದರು.

    ಧರ್ಮದ ಆಚರಣೆಯನ್ನು ಮನೆಯಲ್ಲಿ ಮಾಡಿ ರಸ್ತೆಯಲ್ಲಿ ಅಶಾಂತಿ ಸೃಷ್ಟಿ ಉಂಟು ಮಾಡುವವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಅವರು ಹೇಳಿದರು.ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಮಾತನಾಡಿ, 2023ಕ್ಕೆ ಶೇ.100ರಷ್ಟು ಜೆಡಿಎಸ್ ಅಕಾರಕ್ಕೆ ಬರಲಿದೆ. ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂ ಅವರ ಸಿನಿಮಾ ನೋಡಿದ್ದಾಗಿದೆ. ಬಿಜೆಪಿಯವರ ಗಂಗಾಪೂಜೆ ನಾಟಕ, ನಲ್ಲಿ ನೀರು ತಂದು ಗಂಗಾಜಲ ಎಂದರು. ನಾನು 19 ನದಿಗಳ ಶುದ್ದ ಗಂಗಾಜಲವನ್ನು ತಂದು ಪೂಜಿಸುತ್ತಿದ್ದೇವೆ ಎಂದರು.

    ವಿಧಾನಪರಿಷತ್ ಮಾಜಿ ಸದಸ್ಯ ಟಿ.ಎ.ಶರವಣ ಮಾತನಾಡಿ, 1994ರಲ್ಲಿ ಗವಿಗಂಗಾಧರೇಶ್ವರ ದೇವಾಲಯದಿಂದ ಜನತಾ ವಾಹಿನಿ ಪ್ರಾರಂಭ ಮಾಡಲಾಗಿತ್ತು. ಆಗ 118 ಕ್ಷೇತ್ರಗಳಲ್ಲಿ ಜಯಗಳಿಸಿ ಅಕಾರಕ್ಕೆ ಬರಲಾಗಿತ್ತು. ಈಗಲೂ ಇಲ್ಲಿ ಜನತಾ ಜಲಧಾರೆ ಕಾರ್ಯಕ್ರಮವನ್ನು ಮಾಡಿದ್ದು, ಮುಂದೆ ಅಕಾರಕ್ಕೆ ಬರುವುದು ನಿಶ್ಚಿತ. ಈ ದೇವಾಲಯ ದಕ್ಷಿಣ ಕಾಶಿ. ಇಲ್ಲಿ ಗಂಗಾಪೂಜೆ ನೆರವೇರಿಸಿದ್ದೇವೆ ಎಂದರು.

    ಏ.16ರಂದು ಕೆಆರ್ಎಸ್ನಲ್ಲಿ ಕಾವೇರಿ ನದಿಗೆ ಪೂಜೆ ಸಲ್ಲಿಸಿ ಜನತಾ ಜಲಧಾರೆ ಆರಂಭಿಸಲಾಗಿತ್ತು. ಆಗಿನಿಂದಲೂ ಕಾರ್ಯಕ್ರಮಕ್ಕೆ ಬೆಂಬಲ ವ್ಯಕ್ತವಾಗಿದೆ.ಬಸವನಗುಡಿ ಕ್ಷೇತ್ರದಲ್ಲಿ ಜನ ಬದಲಾವಣೆ ಬಯಸುತ್ತಿದ್ದು, ಯಾರೇ ಅಭ್ಯರ್ಥಿಯಾದರೂ ಬೆಂಬಲಿಸಬೇಕು, ಬಿಬಿಎಂಪಿ ಚುನಾವಣೆಯಲ್ಲಿ 4 ವಾರ್ಡ್ಗಳಲ್ಲಾದರೂ ಜಯಗಳಿಸಲು ಶ್ರಮಿಸಬೇಕೆಂದು ಕರೆ ನೀಡಿದರು.

    ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಭೋಜೇಗೌಡ, ಜೆಡಿಎಸ್ ಬೆಂಗಳೂರು ಘಟಕದ ಅಧ್ಯಕ್ಷ ಆರ್. ಪ್ರಕಾಶ್, ಪಕ್ಷದ ಮುಖಂಡರಾದ ಭಾಗೇಗೌಡ, ತಿಮ್ಮೇಗೌಡ, ರುತ್ ಮನೋರಮಾ, ಲತಾ ಸುಕುಮಾರ್, ಆದಿಶೇಷಯ್ಯ, ಪ್ರಸಾದ್ ಮತ್ತಿತರರು ಇದ್ದರು.

    ವರದಿ ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಕೇರಳದಲ್ಲಿ ಮಲಯಾಳಂ ಕಡ್ಡಾಯ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

    January 11, 2026

    ವಾಟರ್ ಹೀಟರ್ ಬಳಸುವಾಗ ಜೀವಕ್ಕೆ ಕುತ್ತು ಬರಬಹುದು! ಪಾಲಿಸಲೇಬೇಕಾದ ಮುನ್ನೆಚ್ಚರಿಕೆಗಳಿವು…!

    January 9, 2026

    ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ಕೆ.ಎನ್. ರಾಜಣ್ಣ

    January 9, 2026

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ತಾಳ್ಮೆ ಕಳೆದುಕೊಳ್ಳದೇ ಒರಟು ಸ್ವಭಾವದವರ ಜೊತೆಗೆ ವ್ಯವಹರಿಸುವುದು ಹೇಗೆ?: ಇಲ್ಲಿದೆ 7 ಟಿಪ್ಸ್

    January 11, 2026

    ನಮ್ಮ ಜೀವನದಲ್ಲಿ ನಾನಾ ರೀತಿಯ ವ್ಯಕ್ತಿಗಳು ಎದುರಾಗುತ್ತಾರೆ. ಕೆಲವರು ಸೌಮ್ಯ ಸ್ವಭಾವದವರಾಗಿದ್ದರೆ, ಇನ್ನು ಕೆಲವರು ನಮ್ಮ ತಾಳ್ಮೆಯನ್ನು ಪರೀಕ್ಷಿಸುವಂತಿರುತ್ತಾರೆ. ಕಚೇರಿಯಲ್ಲಿ…

    ಬಿಸಿಯೂಟ ತಯಾರಕರ ಫೆಡರೇಷನ್ ತಾಲೂಕು ಅಧ್ಯಕ್ಷರಿಗೆ ಸನ್ಮಾನ

    January 11, 2026

    ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

    January 11, 2026

    ಪಕ್ಷಕ್ಕೆ ಡ್ಯಾಮೇಜ್ ಆಗೋ ಕೆಲಸ ಯಾವತ್ತೂ ಮಾಡಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್

    January 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.