nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕನಾಯಕನಹಳ್ಳಿ: ರೋಡ್ ರೋಲರ್ ಹರಿದು ಬೈಕ್ ಸವಾರ ದುರ್ಮರಣ

    March 29, 2026

    ರೈತರ ಆರ್ಥಿಕ ಅಭಿವೃದ್ಧಿಗೆ ಹೈನುಗಾರಿಕೆ ಉತ್ತಮ ಮಾರ್ಗ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಸಲಹೆ

    March 29, 2026

    ಕರ್ನಾಟಕದಲ್ಲಿ ಹಿಂದಿ ಭಾಷೆ ಕಡ್ಡಾಯವಲ್ಲ; SSLC ಒಟ್ಟು ಅಂಕಗಳಲ್ಲಿ ಕಡಿತ: ಸಿಎಂ ಸಿದ್ದರಾಮಯ್ಯ ಘೋಷಣೆ

    March 29, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕನಾಯಕನಹಳ್ಳಿ: ರೋಡ್ ರೋಲರ್ ಹರಿದು ಬೈಕ್ ಸವಾರ ದುರ್ಮರಣ
    • ರೈತರ ಆರ್ಥಿಕ ಅಭಿವೃದ್ಧಿಗೆ ಹೈನುಗಾರಿಕೆ ಉತ್ತಮ ಮಾರ್ಗ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಸಲಹೆ
    • ಕರ್ನಾಟಕದಲ್ಲಿ ಹಿಂದಿ ಭಾಷೆ ಕಡ್ಡಾಯವಲ್ಲ; SSLC ಒಟ್ಟು ಅಂಕಗಳಲ್ಲಿ ಕಡಿತ: ಸಿಎಂ ಸಿದ್ದರಾಮಯ್ಯ ಘೋಷಣೆ
    • ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ
    • ಸವಾಲುಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು: ಅಂಧ ಕ್ರಿಕೆಟ್ ಪಟು ದೀಪಿಕಾ ಟಿ.ಸಿ.
    • ಭ್ರಷ್ಟಾಚಾರದ ಆರೋಪ: ಕೋಟಗುಡ್ಡ ಪಂಚಾಯಿತಿಯ ಹಾಲಿ ಮತ್ತು ಮಾಜಿ ಪಿಡಿಒ ಅಮಾನತು
    • ಬೆಂಗಳೂರು–ತುಮಕೂರು–ಅರಸೀಕೆರೆ ಮಾರ್ಗದಲ್ಲಿ ನೂತನ ಮೆಮು ರೈಲು ಸಂಚಾರ ಆರಂಭ
    • ತುಮಕೂರು ಹಾಲು  ಒಕ್ಕೂಟದಿಂದ ಮಿಶ್ರತಳಿ ರಸುಗಳ ಹಾಲು ಕರೆಯುವ ಸ್ಪರ್ಧೆ ಯಶಸ್ವಿ : ಅತಿ ಹೆಚ್ಚು ಹಾಲು ಕರೆದ ರೈತರಿಗೆ 30,000 ನಗದು ಪ್ರಥಮ ಬಹುಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲಿಡ್ಕರ್ ಸಂಸ್ಥೆ ಸಂಪೂರ್ಣ ಅಭಿವೃದ್ಧಿಗೆ ಸರ್ಕಾರ ಬದ್ಧ: ಬೊಮ್ಮಾಯಿ
    ರಾಜ್ಯ ಸುದ್ದಿ May 14, 2022

    ಲಿಡ್ಕರ್ ಸಂಸ್ಥೆ ಸಂಪೂರ್ಣ ಅಭಿವೃದ್ಧಿಗೆ ಸರ್ಕಾರ ಬದ್ಧ: ಬೊಮ್ಮಾಯಿ

    By adminMay 14, 2022No Comments2 Mins Read
    karnata cm

    ಲಿಡ್ಕರ್ ಸಂಸ್ಥೆಯನ್ನು ಸಂಪೂರ್ಣವಾಗಿ ಅಭಿವೃದ್ದಿಪಡಿಸಲು ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಡಾ.ಬಾಬುಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಚರ್ಮ ಕರಕುಶಲಕರ್ಮಿಗಳ ಸಮಾವೇಶ ಹಾಗೂ ಕರಕುಶಲ ವಸ್ತು ಪ್ರದರ್ಶನ ಮತ್ತು ಮಾರಾಟದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

    ಕಳೆದ ಐದು ವರ್ಷಗಳಲ್ಲಿ ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮಕ್ಕೆ 237 ಕೋಟಿ ಅನುದಾನ ನೀಡಲಾಗಿದ್ದು, 33 ಸಾವಿರ ಉದ್ಯಮಿಗಳಿಗೆ ನೆರವಾಗಿದೆ ಎಂದರು. ಉತ್ತಮ ವಿನ್ಯಾಸದ ಪೀಠೋಪಕರಣ ತಯಾರಿಸುತ್ತಿದ್ದು, ಬ್ರಾಂಡ್‍ನಲ್ಲಿ ಮಾರಾಟ ಮಾಡಿದರೆ ಉತ್ತಮ ಬೆಲೆ ದೊರೆಯಲಿದೆ. ಫರ್ನಿಚರ್ಸ್ ಎವಗ್ರೀನ್ ಉದ್ಯಮವಾಗಿದೆ. ಈ ಕಡೆ ಗಮನಹರಿಸಬೇಕು ಎಂದರು.


    Provided by
    Provided by

    ಈ ವರ್ಷ 25 ಕೋಟಿ ರೂ.ಅನುದಾನ ಒದಗಿಸಿದ್ದು, ಹೆಚ್ಚು ಜನರಿಗೆ ಉದ್ಯೋಗ ನೀಡುವುದಾದರೆ ಪೂರಕ ಅಂದಾಜಿನಲ್ಲಿ ಇನ್ನಷ್ಟು ಅನುದಾನ ಒದಗಿಸಲಾಗುವುದು ಎಂದರು. ತಾವು ಮಂಡಿಸಿದ 2.65ಕೋಟಿ ರೂ. ಮೊತ್ತದ ಬಜೆಟ್ ಪುಸ್ತಕ ಅತ್ಯಂತ ಸುರಕ್ಷಿತವಾಗಿದ್ದದ್ದು, ಲಿಡ್ಕರ್ ಸಂಸ್ಥೆಯ ತಯಾರಿಸಿದ ಬ್ಯಾಗ್‍ನಲ್ಲಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
    ಪ್ರತಿ ತಾಲ್ಲೂಕಿನಲ್ಲಿ 100 ಮಂದಿಗೆ ಸ್ವ ಉದ್ಯೋಗ ನೀಡುವ ಹಮ್ಮಿಕೊಂಡಿದ್ದು ಇದರ ಪ್ರಯೋಜನ ಮಾಡಿಕೊಳ್ಳಬಹುದು.

    ಭೂ ಖರೀದಿ ಮೊತ್ತವನ್ನು 15 ಲಕ್ಷದಿಂದ 20 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ. 100 ಎಸ್ಸೆ ಎಸ್ಟಿ ಹಾಸೆಲ್‍ಗಳನ್ನು ನಿರ್ಮಾಣ ಮಾಡಲಿದ್ದು, ಶೈಕ್ಷಣಿಕವಾಗಿ ಅಭಿವೃದ್ದಿಯಾಗಿರುವ 5 ದೊಡ್ಡ ನಗರಗಳಲ್ಲಿ 1000ಕ್ಕೂ ಹೆಚ್ಚು ವಿದ್ಯಾರ್ಥಿಗಳ ಸಾಮಥ್ರ್ಯವಿರುವ ಕ್ಲಸ್ಟರ್ ಹಾಸ್ಟೆಲ್ ನಿರ್ಮಿಸಿ ಅದಕ್ಕೆ ದೀನದಯಾಳ್ ಉಪಾಧ್ಯಾಯ ಎಂಬ ಹೆಸರನ್ನು ಇಡಲಾಗುವುದು ಎಂದರು. ಸ್ವ ಉದ್ಯೋಗ ಮಾಡುವವರಿಗೆ ಬ್ಯಾಂಕ್ ಸಾಲ ಸುಲಭವಾಗಿ ದೊರೆಯಲು ಜಿಲ್ಲೆಗೊಂದು ಬ್ಯಾಂಕ್ ಆಯ್ಕೆ ಮಾಡಲಾಗುವುದು ಎಂದು ಹೇಳಿದರು.

    ಜಲಸಂಪನ್ನೂಲ ಸಚಿವ ಗೋವಿಂದ ಕಾರಜೋಳ ಮಾತನಾಡಿ, 21ನೇ ಶತಮಾನದ ಮಾರುಕಟ್ಟೆಯ ಪೈಪೋಟಿ ಎದುರಿಸಲು ಸಜ್ಜುಗೊಳ್ಳಬೇಕಾದ ಅಗತ್ಯವಿದ್ದು, ಅದಕ್ಕೆ ಪೂರಕವಾಗಿ ಚರ್ಮದ್ಯೋಗಿಗಳಿಗೆ ತರಬೇತಿ ನೀಡಲು ಹಾವೇರಿ ಮತ್ತು ಬಾಗಲಕೋಟೆಯಲ್ಲಿ ಲೆದರ್ ಕ್ಲಸರ್‍ನ್ನು ಅನುಷ್ಠಾನಗೊಳಿಸಲಾಗುತ್ತಿದೆ.

    ತರಬೇತಿ ಜೊತೆಗೆ ಉತ್ಪಾದನೆ ಮಾಡುವುದು ಆ ಉತ್ಪನ್ನವನ್ನು ಸಮಾಜಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆಗೆ ಮಾರಾಟ ಮಾಡುವ ಉದ್ದೇಶವಿದೆ ಎಂದರು. ಸ್ವ ಉದ್ಯೋಗಕ್ಕೆ 10 ಲಕ್ಷ ರೂ.ಗಳವರೆಗೂ ಸಾಲಸೌಲಭ್ಯ ಪಡೆಯುವ ಅವಕಾಶವಿದ್ದು, ಇದರನ್ನು ಸದ್ಬಳಿಕೆ ಮಾಡಿಕೊಳ್ಳಬೇಕು ಎಂದರು.ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ, 56 ಸಾವಿರ ಕುಟುಂಬಗಳು ಚರ್ಮೋದ್ಯಮವನ್ನು ಅವಲಂಬಿಸಿವೆ. ಒಂದು ವಾರಗಳ ಕಾಲ ಚರ್ಮದ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಅವಕಾಶ ಮಾಡಿಕೊಳ್ಳಲಾಗಿದೆ. ಅಥಣಿ ಬ್ರಾಂಡ್ ಮೂಲಕ ಕೊಲ್ಲಾಪುರಿ ಚಪ್ಪಲಿಯನ್ನು ಮಾರಾಟ ಮಾಡಲಾಗುತ್ತಿದೆ.

    ರಾಜ್ಯದ ಎಲ್ಲ ಎಸ್ಸಿ-ಎಸ್ಟಿ ಸಮುದಾಯಗಳಿಗೆ ಸೂರು ಶಿಕ್ಷಣ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸುವ ಗುರಿ ಹೊಂದಲಾಗಿದೆ ಎಂದರು. ಡಾ.ಬಾಬುಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪ್ರೊ. ಎಂ.ಲಿಂಗಣ್ಣ ಮಾತನಾಡಿ, ತಂತ್ರಜ್ಞಾನ ಅಳವಡಿಕೆ ಮೂಲಕ ಚರ್ಮೋದ್ಯಮದಲ್ಲಿ ಬದಲಾವಣೆ ತಂದು ಸಮಸ್ಯೆ ಪರಿಹರಿಸಿಕೊಂಡು ಸ್ವಾವಲಂಬಿಗಳಾಗಬೇಕೆಂದು ಕರೆ ನೀಡಿದರು.

    ಚಿತ್ರದುರ್ಗದ ಮಾದಾರ ಚೆನ್ನಯ್ಯ ಸ್ವಾಮೀಜಿ, ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ.ನಾರಾಯಣಸ್ವಾಮಿ, ಪಾಂಡಿಚೇರಿ ಸಚಿವ ಸಾಯಿ ಶರವಣ, ಸಂಸದ ಪಿ.ಸಿ.ಮೋಹನ್, ವಿಧಾನಪರಿಷತ್ ಸದಸ್ಯ ರಮೇಶ್ ಗೌಡ, ಎಂಸಿಎ ಅಧ್ಯಕ್ಷ ಮುನಿಕೃಷ್ಣ, ಎಸ್ಸಿ-ಎಸ್ಟಿ ಮತ್ತು ಪಿಎಸ್‍ಪಿಯ ನೋಡೆಲ್ ಏಜೆನ್ಸಿಯ ಸಲಹೆಗಾರ ವೆಂಕಟಯ್ಯ, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಜರ್ ಪಿ.ಮಣಿವಣನ್, ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿಯ ವ್ಯವಸ್ಥಾಪಕ ಡಾ.ಎಚ್.ನಟರಾಜ್ ಮತ್ತಿತರರು ಇದ್ದರು.

    ವರದಿ ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಕರ್ನಾಟಕದಲ್ಲಿ ಹಿಂದಿ ಭಾಷೆ ಕಡ್ಡಾಯವಲ್ಲ; SSLC ಒಟ್ಟು ಅಂಕಗಳಲ್ಲಿ ಕಡಿತ: ಸಿಎಂ ಸಿದ್ದರಾಮಯ್ಯ ಘೋಷಣೆ

    March 29, 2026

    ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

    March 28, 2026

    SSLC ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ: ಒಟ್ಟು ಅಂಕ 625 ರಿಂದ 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಇನ್ನು ಗ್ರೇಡ್ ಮಾತ್ರ!

    March 28, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಚಿಕ್ಕನಾಯಕನಹಳ್ಳಿ: ರೋಡ್ ರೋಲರ್ ಹರಿದು ಬೈಕ್ ಸವಾರ ದುರ್ಮರಣ

    March 29, 2026

    ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಬೈರಾಗನಹಳ್ಳಿ ಸಮೀಪ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ದಂಡಿನಶಿವರ…

    ರೈತರ ಆರ್ಥಿಕ ಅಭಿವೃದ್ಧಿಗೆ ಹೈನುಗಾರಿಕೆ ಉತ್ತಮ ಮಾರ್ಗ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಸಲಹೆ

    March 29, 2026

    ಕರ್ನಾಟಕದಲ್ಲಿ ಹಿಂದಿ ಭಾಷೆ ಕಡ್ಡಾಯವಲ್ಲ; SSLC ಒಟ್ಟು ಅಂಕಗಳಲ್ಲಿ ಕಡಿತ: ಸಿಎಂ ಸಿದ್ದರಾಮಯ್ಯ ಘೋಷಣೆ

    March 29, 2026

    ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

    March 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.