nammatumakuru

    Subscribe to Updates

    Get the latest creative news from FooBar about art, design and business.

    What's Hot

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಬಾನು ಮುಷ್ತಾಕ್‌ ದಸರಾ ಉದ್ಘಾಟನೆ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

    September 19, 2025

    ಕುಣಿಗಲ್: ತಹಶೀಲ್ದಾರ್ ಧೋರಣೆ ಖಂಡಿಸಿ ದಲಿತ ಸಂಘಟನೆಗಳಿಂದ ಧರಣಿ

    September 19, 2025
    Facebook Twitter Instagram
    ಟ್ರೆಂಡಿಂಗ್
    • ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ
    • ಬಾನು ಮುಷ್ತಾಕ್‌ ದಸರಾ ಉದ್ಘಾಟನೆ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
    • ಕುಣಿಗಲ್: ತಹಶೀಲ್ದಾರ್ ಧೋರಣೆ ಖಂಡಿಸಿ ದಲಿತ ಸಂಘಟನೆಗಳಿಂದ ಧರಣಿ
    • ತಿಪಟೂರು: ಜಾತಿ ಗಣತಿ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    • ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ
    • ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ
    • ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್
    • ಮನೆ ಬಾಗಿಲಿನಲ್ಲಿ ಸಿದ್ದರಾಮಯ್ಯ ಚಿತ್ರ ಕೆತ್ತಿಸಿದ ಮಹಿಳೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಕ್ಕುಪತ್ರವಿಲ್ಲ, ಶಿಕ್ಷಣ, ಉದ್ಯೋಗವೂ ಇಲ್ಲ: ಹಕ್ಕಿಪಿಕ್ಕಿ ಸಮುದಾಯದ ಗೋಳು ಕೇಳೋರ್ಯಾರು?
    ಗುಬ್ಬಿ May 19, 2022

    ಹಕ್ಕುಪತ್ರವಿಲ್ಲ, ಶಿಕ್ಷಣ, ಉದ್ಯೋಗವೂ ಇಲ್ಲ: ಹಕ್ಕಿಪಿಕ್ಕಿ ಸಮುದಾಯದ ಗೋಳು ಕೇಳೋರ್ಯಾರು?

    By adminMay 19, 2022No Comments2 Mins Read
    hakkipikki

    ಕೊರಟಗೆರೆ: ನಾವು ಕಾಡಿನಲ್ಲಿಯೇ ಸುಖವಾಗಿ ಜೀವನ ಮಾಡುತ್ತಿದ್ವಿ. ಈಗ ನಾಡಿಗೆ ನೋವು  ಅನುಭವಿಸುವ ಪರಿಸ್ಥಿತಿ ನಿರ್ಮಾಣ ಆಗಿದೆ. ಸರಕಾರ ನಮಗೆ ನೀಡಿದ ಭರವಸೆಯು ಈಗ ಹುಸಿಯಾಗಿದೆ. ಕಳೆದ 50 ವರ್ಷಗಳಿಂದ ನಮ್ಮ ಹಕ್ಕಿಪಿಕ್ಕಿ ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗವು ಮರೀಚಿಕೆ ಆಗಿದೆ ಎಂದು ಹಕ್ಕಿಪಿಕ್ಕಿ ಬುಡಕಟ್ಟು ಯುವ ಸಂಘಟನೆಯ ರಾಜ್ಯಾಧ್ಯಕ್ಷ ಪುನೀತ್ ಕುಮಾರ್  ಸರ್ಕಾರದ ವಿರುದ್ಧ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

    ಕೊರಟಗೆರೆ ಪಟ್ಟಣದ ಕಂದಾಯ ಆವರಣದಲ್ಲಿ ರಾಜ್ಯ ಸರಕಾರ ಮತ್ತು ಕಂದಾಯ ಇಲಾಖೆಯ ವಿರುದ್ದ ಹಕ್ಕಿಪಿಕ್ಕಿ ಸಮುದಾಯದ ಜನತೆಯ ಜೊತೆಗೂಡಿ ಆಕ್ರೋಶ ವ್ಯಕ್ತಪಡಿಸಿ ಮನೆಗಳ ಹಕ್ಕುಪತ್ರ ನೀಡುವಂತೆ ಉಪತಹಶೀಲ್ದಾರ್ ನರಸಿಂಹಮೂರ್ತಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.


    Provided by
    Provided by
    Provided by

    50 ವರ್ಷದಿಂದ ಕೊರಟಗೆರೆ ಕ್ಷೇತ್ರದ ಗಡಿಭಾಗದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ 150 ಕುಟುಂಬಗಳು ವಾಸವಿದ್ದಾರೆ. ಇಲ್ಲಿನ 150 ಕುಟುಂಬಕ್ಕೆ ಮನೆಯ ಹಕ್ಕುಪತ್ರವೇ ಇಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

    ಶಿಕ್ಷಣ ವಂಚಿತ ಕುಟುಂಬಕ್ಕೆ ಮನೆಯ ಹಕ್ಕುಪತ್ರವು ಮರೀಚಿಕೆ ಆಗಿದೆ. ರಾಜಕೀಯ ನಾಯಕರು ಚುನಾವಣೆಗೆ ಮಾತ್ರ ನಮ್ಮನ್ನು ಬಳಸಿದ್ದಾರೆ. ರಾಜ್ಯ ಸರಕಾರ ಮತ್ತು ಕಂದಾಯ ಇಲಾಖೆ ನಮ್ಮ ಸಮುದಾಯದ ಕುಟುಂಬಕ್ಕೆ ಮನೆಯ ಹಕ್ಕುಪತ್ರದ ಜೊತೆ ಶಿಕ್ಷಣದ ಅರಿವು ಮೂಡಿಸುವ ಪ್ರಯತ್ನ ಮಾಡಬೇಕಿದೆ ಎಂದು ಆಗ್ರಹ ಮಾಡಿದರು.

    ಹಕ್ಕಿಪಿಕ್ಕಿ ಕಾಲೋನಿಯ ಗ್ರಾಮಸ್ಥರಾದ ರೆಡ್ಡಿಯಪ್ಪ ಮಾತನಾಡಿ ನಾವು ಕೊರಟಗೆರೆ ಕ್ಷೇತ್ರದ ಗಡಿಭಾಗದ ಗ್ರಾಮದಲ್ಲಿ ವಾಸವಿದ್ದೇವೆ. ನಮ್ಮ ಕುಟುಂಬಗಳಿಗೆ ಶಿಕ್ಷಣ ಮತ್ತು ಉದ್ಯೋಗದ ಸಮಸ್ಯೆ ಇದೆ. ಅಧಿಕಾರಿವರ್ಗ ಗ್ರಾಮಕ್ಕೆ ಬರ್ತಾರೆ ಮನವಿ ಪಡೆದು ಹೋಗುತ್ತಾರೆ. ನಮ್ಮೂರನ್ನು ಕಂದಾಯ ಗ್ರಾಮವನ್ನಾಗಿ ಮಾಡಿ ನಮ್ಮ ಸಮುದಾಯದ ಜನರ ಜೀವನಕ್ಕೆ ಬೆಳಕು ನೀಡಬೇಕಿದೆ ಎಂದು ಒತ್ತಾಯ ಮಾಡಿದರು.

    ಇನ್ನಾದರೂ ಸ್ಥಳೀಯ ಶಾಸಕರಾದ ಡಾ.ಜಿ. ಪರಮೇಶ್ವರ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಈ ಗ್ರಾಮಕ್ಕೆ ಭೇಟಿ ನೀಡಿ ಈ ಮುಗ್ದ ಜನರ ಸಮಸ್ಯೆಗೆ ಮುಕ್ತಿ ನೀಡಬೇಕಿದೆ. ಅಭಿವೃದ್ದಿ ವಂಚಿತ ಗ್ರಾಮವಾದ ಹಕ್ಕಿಪಿಕ್ಕಿ ಕಾಲೋನಿಗೆ ರಾಜ್ಯ ಸರ್ಕಾರ ಮೂಲ ಭೂತ ಹಕ್ಕುಗಳನ್ನು ನೀಡಬೇಕಿದೆ ಎಂದು ಅವರು ಒತ್ತಾಯಿಸಿದರು.

    ವರದಿ: ಮಂಜುಸ್ವಾಮಿ.ಎಂ.ಎನ್.,  ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಸ್ನೇಹಿತನ ಜೊತೆ ಪತ್ನಿ ಪರಾರಿ : ಸೆಲ್ಫಿ ವಿಡಿಯೋ ಫೇಸ್ ಬುಕ್ ಗೆ ಹರಿಬಿಟ್ಟು ನೇಣಿಗೆ ಶರಣಾದ ಪತಿರಾಯ..!!.

    February 18, 2025

    ಕೆರೆಗೆ ಬಿದ್ದು ತಾಯಿ– ಮಗಳ ದಾರುಣ ಸಾವು

    January 10, 2025

    ಹಕ್ಕು ಪತ್ರ ವಿತರಣೆಯಲ್ಲಿ ಲೋಪ: ದಲಿತ ಕುಟುಂಬಗಳಿಂದ ಆಹೋರಾತ್ರಿ ಧರಣಿ

    December 4, 2024
    Our Picks

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಬೆಂಗಳೂರು: ತಮಿಳು ಚಿತ್ರರಂಗದ ಖ್ಯಾತ ಹಾಸ್ಯನಟ ರೋಬೋ ಶಂಕರ್‌ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ  ನಡೆದಿದ್ದು, ಶೂಟಿಂಗ್ ವೊಂದರ ವೇಳೆಯೇ…

    ಬಾನು ಮುಷ್ತಾಕ್‌ ದಸರಾ ಉದ್ಘಾಟನೆ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

    September 19, 2025

    ಕುಣಿಗಲ್: ತಹಶೀಲ್ದಾರ್ ಧೋರಣೆ ಖಂಡಿಸಿ ದಲಿತ ಸಂಘಟನೆಗಳಿಂದ ಧರಣಿ

    September 19, 2025

    ತಿಪಟೂರು: ಜಾತಿ ಗಣತಿ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ

    September 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.