ಮಧುಗಿರಿ: ದೊಡ್ಡೇರಿ ಹೋಬಳಿ ಹಾವಿನಮಾಡಗು ಗ್ರಾಮದ ನಿವಾಸಿ ಲಕ್ಷ್ಮಮ್ಮ ಕೋಂ ಓಬಳಯ್ಯ ಇವರು ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗಲಿ ಸಾವನ್ನಪ್ಪಿದ್ದು, ಈ ಹಿನ್ನೆಲೆಯಲ್ಲಿ ಮಾಜಿ ಶಾಸಕರಾದ ಕೆ.ಎನ್.ರಾಜಣ್ಣ ಮೃತರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಇದೇ ವೇಳೆ ಕುಟುಂಬಕ್ಕೆ ಆರ್ಥಿಕ ನೆರವು ನೀಡಿದ ಅವರು, ಕೂಡಲೇ ಬೆಸ್ಕಾಂ ಇಲಾಖೆಯ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಮಾತನಾಡಿ, ಆದಷ್ಟು ಬೇಗ ಇಲಾಖೆಯಿಂದ ಸಿಗಬೇಕಾದ ಪರಿಹಾರವನ್ನು ನೀಡಬೇಕೆಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿ, ಮತ್ತೊಂದು ಬಾರಿ ಇಂತಹ ಅವಘಡಗಳು ಸಂಭವಿಸದಂತೆ ನೋಡಿಕೊಳ್ಳಬೇಕೆಂದು ಎಚ್ಚರಿಕೆ ನೀಡಿದರು.
ಈಗಾಗಲೇ ಈ ಕುಟುಂಬದ ಸದಸ್ಯರೊಬ್ಬರು ಕೋವಿಡ್ ನಿಂದ ಮೃತಪಟ್ಟಿದ್ದು, ಇದರಿಂದಾಗಿ ಕುಟುಂಬದ ನಿರ್ವಹಣೆ ಕಷ್ಷವಾಗಿದೆ. ಯಾವುದೇ ತಾರತಮ್ಯ ಮಾಡದೇ ಸರ್ಕಾರದಿಂದ ಬರುವ ಸೌಲಭ್ಯವನ್ನು ಕುಟುಂಬಸ್ಥರಿಗೆ ಬೇಗನೆ ಸಿಗುವಂತೆ ಮಾಡಬೇಕು. ಈ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಇಲಾಖೆ ಎದುರು ಪ್ರತಿಭಟನೆ ಮಾಡುವುದಾಗಿ ಎಚ್ಚರ ವಹಿಸಿದರು.
ಈ ಸಂದರ್ಭದಲ್ಲಿ ಲಕ್ಷ್ಮೀನಾರಾಯಣಪ್ಪ, T.P.ಮಂಜಣ್ಣ, ದೊಡ್ಡೇರಿ ಕಣಿಮಯ್ಯ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷರು ವೆಂಕಟೇಶ್, ಸತೀಶ್ ಪೂಜಾರಿ ಮಾರುತಿ, ಜಯಕುಮಾರ್, ಬೊಮ್ಮಣ್ಣ, ನರಸಿಂಹಮೂರ್ತಿ, ರಾಕೇಶ್ ಇದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5