ತುಮಕೂರು: ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ಪರಿಶಿಷ್ಟ,ಜಾತಿ ಮತ್ತು ಪರಿಶಿಷ್ಟ ಪಂಗಡದ ಹಾಗೂ ಹಿಂದುಳಿದವರ ಕಲ್ಯಾಣಕ್ಕಾಗಿ ಆರ್ಥಿಕ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಸಬಲಿಕರಣವಾಗಲು ನ್ಯಾಯಮೂರ್ತಿ ಎಚ್.ನಾಗಮೋಹನದಾಸ್ ಅವರ ವರದಿಯನ್ನು ಕೂಡಲೇ ಜಾರಿಗೊಳಿಸುವಂತೆ ತುರುವೇಕೆರೆ ತಾಲೂಕು, ವಾಲ್ಮೀಕಿ ಸಮಾಜದ ವತಿಯಿಂದ ಹಾಗೂ ಪ್ರಗತಿಪರ ದಲಿತ ಸಂಘಟನೆಗಳ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ಪಟ್ಟಣದ ಪ್ರವಾಸಿ ಮಂದಿರದ ಹತ್ತಿರ ಜಮಾವಣೆಗೊಂಡ, ಪ್ರತಿಭಟನಾಕಾರರು ಮೊದಲು ಮುಖ್ಯ ರಸ್ತೆಯ ಮೂಲಕ ಸಂಚರಿಸಿ, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ನ್ಯಾಯಮೂರ್ತಿ, ನಾಗಮೋಹನ್ ದಾಸ್ ಅವರ , ವರದಿಯನ್ನು ಜಾರಿಗೊಳಿಸುವಂತೆ ಘೋಷಣೆಗಳನ್ನು ಕೂಗುತ್ತಾ, ತುರುವೇಕೆರೆ ತಾಲೂಕು ಕಚೇರಿ ಕಚೇರಿ ಮುಂಭಾಗ ಮಾನವ ಸರಪಳಿ ನಿರ್ಮಿಸಿ ,ಪ್ರತಿಭಟನೆ ನಡೆಸಿದರು. ನಂತರ ತಾಲೂಕು ಕಚೇರಿಯ ಬಳಿಬಂದು ತಹಶೀಲ್ದಾರ್ ನಯೀಮ್ ಉನ್ನಿಸಾ ಅವರಿಗೆ ಮನವಿ ಪತ್ರ ನೀಡಲಾಯಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಪಟ್ಟಣ ಪಂಚಾಯಿತಿ ಅಧ್ಯಕ್ಷ ಚಿದಾನಂದ, ಕರ್ನಾಟಕ ರಾಜ್ಯ ಸರ್ಕಾರವು ಪರಿಶಿಷ್ಟ ವರ್ಗದವರಿಗೆ ಮೀಸಲಾತಿಯನ್ನು ನ್ಯಾಯಮೂರ್ತಿ ನಾಗಮೋಹನ್ ದಾಸ್ ರವರ ವರದಿಯನ್ನು ಕೈಗೆತ್ತಿಕೊಂಡು ಸಂವಿಧಾನಬದ್ಧವಾಗಿ ನೀಡಬೇಕಾಗಿರುವ ಪರಿಶಿಷ್ಟ ಪಂಗಡಕ್ಕೆ 7.5 ಮತ್ತು ಪರಿಶಿಷ್ಟ ಜಾತಿಗೆ 17 ಮೀಸಲಾತಿ ನಿಗದಿ ಪಡಿಸಬೇಕು ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆಗಳನ್ನು ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು
ಮನವಿ ಸ್ವೀಕರಿಸಿದ ತಹಸೀಲ್ದಾರ್ ನಯೀಮ್ ಉನ್ನಿಸ್ಸಾ ತಮ್ಮ ಮನವಿಯನ್ನು ಜಿಲ್ಲಾಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಕಳುಹಿಸಿಕೊಟ್ಟು ಶೇಕಡವಾರು ಮೀಸಲಾತಿಯನ್ನು ದೊರಕಿಸುವ ನಿಟ್ಟಿನಲ್ಲಿ ನಾವು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.
ಈ ಪ್ರತಿಭಟನೆಯಲ್ಲಿ ಕೆ.ಎಚ್.ಆನಂದರಾಜು ವಾಲ್ಮೀಕಿ ಸಮುದಾಯದ ತಾಲ್ಲೂಕು ಅಧ್ಯಕ್ಷರಾದ ವಸಂತ್ ಕುಮಾರ್, ಶಿವಣ್ಣ, ಕೆ.ಎಚ್.ಆನಂದರಾಜು, ಸೋಮಶೇಖರ್ ಕಲ್ಪನಾ, ಶಂಕರಯ್ಯ ಕರಿಯಪ್ಪ, ಕುಮಾರ್, ಹುಲ್ಲೇಕೆರೆ ಜಗದೀಶ್, ಮತ್ತಿತರರು ಪಾಲ್ಗೊಂಡಿದ್ದರು.
ವರದಿ: ಸುರೇಶ ಬಾಬು ಎಂ., ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5