ಗುಬ್ಬಿ: ವೈಯಕ್ತಿಕ ದ್ವೇಷದಿಂದ ಕಿಡಿಗೇಡಿಗಳು 100ಕ್ಕೂ ಅಧಿಕ ಅಡಿಕೆ ಮರಗಳನ್ನು ಕತ್ತರಿಸಿ ಹಾಕಿರುವ ಘಟನೆ ತಾಲ್ಲೂಕಿನ ನಿಟ್ಟೂರು ಹೋಬಳಿ ಸೋಮಲಾಪುರ ಗ್ರಾಮದಲ್ಲಿ ನಡೆದಿದೆ.
ನಟರಾಜು ಎಂಬುವರ ತೋಟದಲ್ಲಿ ಕಿಡಿಗೇಡಿಗಳು ಸುಮಾರು 100ಕ್ಕೂ ಅಧಿಕ ಅಡಿಕೆ ಮರಗಳನ್ನು ಕಡಿದು ಹಾಕಲಾಗಿದೆ. ಶನಿವಾರ ತಡರಾತ್ರಿ ನಡೆದಿದ್ದು, ವೈಯಕ್ತಿಕ ದ್ವೇಷದಿಂದ ಈ ಕೃತ್ಯ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಭಾನುವಾರ ಬೆಳಗ್ಗೆ ನಟರಾಜು ಅವರು ತೋಟಕ್ಕೆ ತೆರಳಿ ನೋಡಿದ ವೇಳೆ ಘಟನೆ ಬೆಳಕಿಗೆ ಬಂದಿದ್ದು, ಶನಿವಾರ ತಡರಾತ್ರಿ ವೇಳೆ ಕಿಡಿಗೇಡಿಗಳು ಅಡಿಕೆ ಮರವನ್ನು ಕತ್ತರಿಸಿ ಹಾಕಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ವರದಿ: ಮಂಜುನಾಥ್, ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB