ಗುಬ್ಬಿ: ನಿಟ್ಟೂರು ಗ್ರಾಮದಲ್ಲಿ ಅಂಡರ್ ಪಾಸ್ ನಿರ್ಮಾಣ ಮಾಡುವಂತೆ ಒತ್ತಾಯಿಸಿ, ರಾಷ್ಟ್ರೀಯ ಹೆದ್ದಾರಿ 206ರ ನಿಟ್ಟೂರು ಗ್ರಾಮದಲ್ಲಿ ರೈತರು, ದಲಿತ ಮುಖಂಡರು, ಸಾಮಾಜಿಕ ಕಾರ್ಯಕರ್ತರು ಸ್ಥಳೀಯ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ಕಳೆದ ನಾಲ್ಕು ತಿಂಗಳ ಹಿಂದೆ ಕೆಳ ಸೇತುವೆ ನಿರ್ಮಾಣ ಮಾಡುವಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು ಆದರೆ ಯಾವುದೇ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿಲ್ಲ. ನಿಟ್ಟೂರು ಬಸ್ ನಿಲ್ದಾಣದಲ್ಲಿ ಮೇಲ್ಸೆತುವೆ ನಿರ್ಮಾಣದಿಂದ ಸಾರ್ವಜನಿಕ ರಿಗೆ ಬಹಳ ತೊಂದರೆಯಾಗಿಗುತ್ತಿದೆ. ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು, ಶಾಸಕ, ಸಂಸದರ ಮಾತಿಗೂ ಬೆಲೆಕೊಡುತ್ತಿಲ್ಲ ಎಂದು ಪ್ರತಿಭಟನಾಕಾರರು ಇದೇ ವೇಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೂರಾರು ಸಂಖ್ಯೆಯಲ್ಲಿ ಸೇರಿದ ಜನರು, ಈ ಸ್ಥಳದಲ್ಲಿ ಅಂಡರ್ ಪಾಸ್ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು. ಈಗ ಆರಂಭವಾಗಿರುವ ಕಾಮಕಾರಿಯನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನಾಸ್ಥಳದಲ್ಲಿ ನೂರಾರು ಸಾರ್ವಜನಿಕರು ಜಮಾಯಿಸಿದ್ದು, ಮೇಲ್ಸೇತುವೆ ನಿರ್ಮಾಣದಿಂದ ಸಾರ್ವಜನಿಕರಿಗೆ ತೊಂದರೆಯಾಗಲಿದ್ದು, ಸಾರ್ವಜನಿಕರು ನಗರಕ್ಕೆ ಆಗಮಿಸಬೇಕಾದರೆ 2 ಕಿ.ಮೀ. ಹೆಚ್ಚುವರಿ ಪ್ರಯಾಣ ಮಾಡಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವರದಿ: ಮಂಜುನಾಥ್, ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5