ತುರುವೇಕೆರೆ: ಸ್ವಗ್ರಾಮದ ಸರ್ಕಲ್ ನಲ್ಲಿ ಅಭಿವೃದ್ಧಿ ಕಾಮಗಾರಿ ವೀಕ್ಷಿಸುವ ವೇಳೆ ಆಯತಪ್ಪಿ ಆಯತಪ್ಪಿ ಬಾಕ್ಸ್ ಚರಂಡಿಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಪತ್ರಕರ್ತ ಕೆ.ಎ.ಮಂಜುನಾಥ್ ಮಂಜುನಾಥ್ ಅವರಿಗೆ ತಾಲ್ಲೂಕಿನ ಮಾಯಸಂದ್ರ ಹೋಬಳಿ, ಸೊರವನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಚಿಕಿತ್ಸೆಗೆ ನೆರವು ನೀಡಲಾಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಾಬೀರ್ ಹುಸೇನ್ , ಮಾಜಿ ಉಪಾಧ್ಯಕ್ಷರಾದ ಶಶಿಕಲಾ ಹನುಮೇಗೌಡ, ಸದಸ್ಯರಾದ ಮಹಾಲಕ್ಷ್ಮಮ್ಮ, ಚಾಟಿತಿಮ್ಮಯ್ಯ ಹಾಗೂ ಸುರೇಶ್ ಹಾಗೂ ಸರ್ವಸದಸ್ಯರ ಹಾಜರಿಯಲ್ಲಿ ಚರ್ಚಿಸಿ, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ಹಾಜರಿಯಲ್ಲಿ ಪತ್ರಕರ್ತ ಮಂಜುನಾಥ್ ರವರ ಮನೆಗೆ ತೆರಳಿ ಚೆಕ್ ವಿತರಿಸಲಾಯಿತು.
ಇನ್ನೂ ಪಂಚಾಯತ್ ಆಡಳಿತ ಮಂಡಳಿ ಹಾಗೂ ಅಧಿಕಾರಿ ವರ್ಗದ ಮಾನವೀಯ ನೆರವಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5