ಪಾವಗಡ: ಪ್ರವಾದಿ ಮಹಮ್ಮದ್ ಕುರಿತು ಲಘು ಹೇಳಿಕೆ ವಿವಿಧ ರಾಷ್ಟ್ರಗಳು ಭಾರತವನ್ನು ಕೆಂಗಣ್ಣಿನಿಂದ ನೋಡುವಂತಾಗಿದೆ ಎಂದು ವಿಧಾನಪರಿಷತ್ ಸದಸ್ಯ ಉಗ್ರಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತುಮಕೂರು ಜಿಲ್ಲೆಯ ಪಾವಗಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಬಿಜೆಪಿಯ ವಕ್ತಾರರೊಬ್ಬರು ಪ್ರವಾದಿ ಮಹಮ್ಮದ್ ಕುರಿತು ಲಘುವಾಗಿ ಹೇಳಿಕೆ ನೀಡಿದ್ದಾರೆ. ಇದರಿಂದಾಗಿ ಇಡೀ ಪ್ರಪಂಚದ ವಿವಿಧ ರಾಷ್ಟ್ರಗಳು ಭಾರತದ ಬಗ್ಗೆ ಅನುಮಾನದ ಕೆಂಗಣ್ಣಿನಿಂದ ನೋಡುವಂತಾಗಿದೆ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೊಂದೆಡೆ ಬೆಲೆ ಏರಿಕೆಯಿಂದಾಗಿ ದೇಶ ತತ್ತರಿಸಿಹೋಗಿದೆ. ಹೀಗಾಗಿ ಮೋದಿ ಆಧುನಿಕ ಬಸ್ಮಾಸುರನಾಗಿದ್ದಾರೆ ಎಂದು ಅವರು ಇದೇ ವೇಳೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB