nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿರತೆ ದಾಳಿಯಿಂದಾಗಿ ಮಹಿಳೆ ಸಾವು: ದಾಳಿ ನಡೆದ 24 ಗಂಟೆ ಒಳಗೆ  ಚಿರತೆ ಸೆರೆ

    December 23, 2025

    ತಿಪಟೂರು: ಡಿಸೆಂಬರ್ 24ರಂದು ‘ಸಾಂಸ್ಕೃತಿಕ ವೈಭವ’ ಬೃಹತ್ ಕಾರ್ಯಕ್ರಮ

    December 23, 2025

    ಪಾವಗಡ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

    December 23, 2025
    Facebook Twitter Instagram
    ಟ್ರೆಂಡಿಂಗ್
    • ಚಿರತೆ ದಾಳಿಯಿಂದಾಗಿ ಮಹಿಳೆ ಸಾವು: ದಾಳಿ ನಡೆದ 24 ಗಂಟೆ ಒಳಗೆ  ಚಿರತೆ ಸೆರೆ
    • ತಿಪಟೂರು: ಡಿಸೆಂಬರ್ 24ರಂದು ‘ಸಾಂಸ್ಕೃತಿಕ ವೈಭವ’ ಬೃಹತ್ ಕಾರ್ಯಕ್ರಮ
    • ಪಾವಗಡ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
    • ಡಿಸೆಂಬರ್ 31ರಂದು ಸಿರಿಧಾನ್ಯ ಪಾಕ ಸ್ಪರ್ಧೆಗೆ ಅರ್ಜಿ: ವಿಜೇತರಿಗೆ ನಗದು ಬಹುಮಾನ | ಯಾರೆಲ್ಲ ಭಾಗವಹಿಸಬಹುದು?
    • ಚಾಮರಾಜನಗರ: ಗ್ರಾಮದ ಬಳಿ ಐದು ಹುಲಿಗಳ ಪ್ರತ್ಯಕ್ಷ; ಆತಂಕದಲ್ಲಿ ಜನತೆ, ನಿಷೇಧಾಜ್ಞೆ ಜಾರಿ
    • ಹುಸಿ ಬಾಂಬ್  ಇ–ಮೇಲ್ ಬೆದರಿಕೆ ಸಂದೇಶ: ಸರಗೂರು ತಾಲೂಕು ಕಚೇರಿಯಲ್ಲಿ ಬಾಂಬ್ ನಿಷ್ಕ್ರಿಯದಳ ಪರಿಶೀಲನೆ
    • ಸಿದ್ದಗಂಗಾ ಶ್ರೀಗಳ ಮಿಂಚಿನ ಸಂಚಾರ ಸ್ಫೂರ್ತಿದಾಯಕ : ಸಸ್ಯಾಂದೋಲನ ನಡೆಸಲು ಎಂ.ಶಿವಕುಮಾರ್ ಮನವಿ
    • ಸಿದ್ದಗಂಗಾ ಮಠದ ಹಳೆಯ ವಿದ್ಯಾರ್ಥಿಗಳು ಭಕ್ತರು ಶ್ರೀಮಠದ ಆಸ್ತಿ : ಶ್ರೀ ಸಿದ್ಧಲಿಂಗ ಮಹಾ ಸ್ವಾಮೀಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಜೊತೆ ಮೈತ್ರಿ ಮುಗಿದ ಅಧ್ಯಾಯ: ಹೆಚ್.ಡಿ. ಕುಮಾರಸ್ವಾಮಿ
    ರಾಜ್ಯ ಸುದ್ದಿ June 11, 2022

    ಕಾಂಗ್ರೆಸ್ ಜೊತೆ ಮೈತ್ರಿ ಮುಗಿದ ಅಧ್ಯಾಯ: ಹೆಚ್.ಡಿ. ಕುಮಾರಸ್ವಾಮಿ

    By adminJune 11, 2022No Comments2 Mins Read
    h d kumaraswamy

    ಬೆಂಗಳೂರು, ಜೂ. ೧೦- ರಾಜ್ಯದಲ್ಲಿ ಬಿಜೆಪಿಯ ಬಿ ಟೀಮ್ ಸಿದ್ದರಾಮಯ್ಯ ಎಂಬುದು ರಾಜ್ಯಸಭಾ ಚುನಾವಣೆಯಿಂದ ಜಗಜ್ಜಾಹೀರಾಗಿದೆ ಎಂದು ಹೇಳಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇನ್ನು ಮುಂದೆ ಕಾಂಗ್ರೆಸ್ ಜತೆ ಯಾವತ್ತೂ ಮೈತ್ರಿ ಇಲ್ಲ. ಡೋರ್ ಕ್ಲೋಸ್ ಎಂದಿದ್ದಾರೆ.ರಾಜ್ಯಸಭಾ ಚುನಾವಣೆಯ ಮತದಾನ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಅಭ್ಯರ್ಥಿಯನ್ನು ಬೆಂಬಲಿಸಬೇಕೆಂಬ ಮನವಿಗೆ ಕಾಂಗ್ರೆಸ್ ಸ್ಪಂದಿಸಿಲ್ಲ.

    ಈ ಚುನಾವಣೆಯ ಮೂಲಕ ರಾಜ್ಯದಲ್ಲಿ ಬಿಜೆಪಿಯ ಬಿ ಟೀಮ್ ಸಿದ್ದರಾಮಯ್ಯ ಎನ್ನುವುದು ಜಗಜ್ಜಾಹೀರಾಗಿದೆ ಎಂದರು.ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ. ಜೆಡಿಎಸ್‌ಗೆ ೨ನೇ ಪ್ರಾಶಸ್ತ್ಯ ಮತ ನೀಡಿದ್ದರೂ ಸಾಕಾಗಿತ್ತು. ಆದರೆ ಅವರು ಬಿಜೆಪಿಯನ್ನು ಗೆಲ್ಲಿಸಲು ನಮಗೆ ಬೆಂಬಲ ನೀಡಿಲ್ಲ. ಜನ ಎಲ್ಲವನ್ನು ತೀರ್ಮಾನ ಮಾಡುತ್ತಾರೆ ಎಂದರು.


    Provided by
    Provided by

    ಇನ್ನು ಮುಂದೆ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಜತೆ ಮೈತ್ರಿಗೆ ಹೋಗಲ್ಲ. ಮೈತ್ರಿ ಎಂಬುದು ಮುಗಿದ ಅಧ್ಯಾಯ. ನಾಳೆಯಿಂದ ರಾಜ್ಯದಲ್ಲಿ ಹೊಸ ಇತಿಹಾಸ ಆರಂಭವಾಗಲಿದೆ ಎಂದರು.ಜೆಡಿಎಸ್‌ನ ೩೨ ಶಾಸಕರ ಪೈಕಿ ೩೧ ಶಾಸಕರು ಜೆಡಿಎಸ್ ಅಭ್ಯರ್ಥಿ ಕುಪೇಂದ್ರರೆಡ್ಡಿಯವರಿಗೆ ಮತ ಹಾಕುತ್ತಾರೆ. ರಮೇಶ್‌ಕುಮಾರ್ ಮತ್ತು ಸಿದ್ದರಾಮಯ್ಯ ಸೇರಿ ಶ್ರೀನಿವಾಸಗೌಡ ಅವರನ್ನು ಕಾಂಗ್ರೆಸ್‌ಗೆ ಮತ ಹಾಕುವಂತೆ ಮನವೊಲಿಸಿದ್ದಾರೆ. ಅವರು ಸಹ ಕಾಂಗ್ರೆಸ್‌ಗೆ ಮತ ಹಾಕುವುದಾಗಿ ಹೇಳಿದ್ದಾರೆ. ಹಾಗಾಗಿ ಒಂದು ಮತ ಅಡ್ಡಮತದಾನವಾಗಬಹುದು ಎಂದರು.

    ಕಾಂಗ್ರೆಸ್ ಪಕ್ಷದವರಿಗೆ ಶ್ರೀನಿವಾಸಗೌಡರಿಂದ ಮತ ಹಾಕಿಸಿಕೊಂಡರೆ ಏನು ಪ್ರಯೋಜನ. ಅವರ ಎರಡನೇ ಅಭ್ಯರ್ಥಿ ಚುನಾವಣೆಯಲ್ಲಿ ಗೆಲ್ಲುತ್ತಾರಾ. ಬಿಜೆಪಿಗೆ ನೆರವಾಗಲು ಇವೆಲ್ಲಾ ಮಾಡುತ್ತಿದ್ದಾರೆ ಎಂದರು.
    ಮಾಜಿ ಸಚಿವ ಈಶ್ವರಪ್ಪ ಸಿದ್ದರಾಮಯ್ಯನವರ ನೆರವಿನಿಂದ ಬಿಜೆಪಿ ಮೂರನೇ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ಈಗಾಗಲೇ ಹೇಳಿದ್ದಾರೆ. ಹಾಗೆಯೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸಹ ಕಾಂಗ್ರೆಸ್ ಶಾಸಕಾಂಗ ಕಚೇರಿಗೆ ತೆರಳಿ ಸಿದ್ದರಾಮಯ್ಯನವರನ್ನು ಅಭಿನಂದಿಸಿದ್ದಾರೆ. ಇವೆಲ್ಲ ಸಿದ್ದರಾಮಯ್ಯ ಬಿಜೆಪಿಯ ಬಿ ಟೀಮ್ ಎನ್ನುವುದನ್ನು ಜಗಜ್ಜಾಹೀರಾತು ಮಾಡಿದೆ ಎಂದರು.

    ಸಿದ್ದರಾಮಯ್ಯ ಅವರಿಗೆ ಅಲ್ಪಸಂಖ್ಯಾತರ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ. ಈ ಹಿಂದೆ ಜೆಡಿಎಸ್ ರಾಜ್ಯಸಭಾ ಚುನಾವಣೆಯಲ್ಲಿ ಅಲ್ಪಸಂಖ್ಯಾತರ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದಾಗ ಸಿದ್ದರಾಮಯ್ಯನವರು ಜೆಡಿಎಸ್‌ನ ೮ ಶಾಸಕರ ಅಡ್ಡಮತದಾನ ಮಾಡಿಸಿ ಅಲ್ಪಸಂಖ್ಯಾತರ ಅಭ್ಯರ್ಥಿಯನ್ನು ಸೋಲಿಸಿದ್ದರು. ಇವರಿಗೆ ಅಲ್ಪಸಂಖ್ಯಾತರ ಪರವಾಗಿ ಮಾತನಾಡುವ ನೈತಿಕತೆ ಇದೆಯೇ ಎಂದು ವಾಗ್ದಾಳಿ ನಡೆಸಿದರು.

    ರಾಜ್ಯಸಭಾ ಚುನಾವಣೆಯಲ್ಲಿ ಶ್ರೀನಿವಾಸಗೌಡ ಅವರು ಅಡ್ಡಮತದಾನ ಮಾಡಿದರೆ ಅವರ ವಿರುದ್ಧ ಅನರ್ಹತೆ ಅಸ್ತ್ರ ಬಳಸುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, ಈ ಹಿಂದೆ ಜೆಡಿಎಸ್‌ನ ೮ ಶಾಸಕರು ಅಡ್ಡಮತದಾನ ಮಾಡಿದ್ದರು. ಅವರ ವಿರುದ್ಧ ಏನು ಕ್ರಮ ಆಗಲಿಲ್ಲ. ಪಕ್ಷಾಂತರ ಕಾಯ್ದೆ ಕಾನೂನಿಗಷ್ಟೆ ಇದೆ. ಕ್ರಮ ಜರುಗಿಸಲು ಆಗಲ್ಲ. ಆದರೆ ಜನ ಶ್ರೀನಿವಾಸಗೌಡರವರಿಗೆ ಪಾಠ ಕಲಿಸುತ್ತಾರೆ. ಹಿಂದೆ ಅಡ್ಡಮತದಾನ ಮಾಡಿದ್ದ ಶಾಸಕರಿಗೆ ಜನ ಪಾಠ ಕಲಿಸಿದ್ದಾರೆ ಎಂದರು.ಜೆಡಿಎಸ್ ಪಕ್ಷ ಏನೇ ಆದರೂ ಇಂತಹದ್ದಕ್ಕೆಲ್ಲ ಹೆದರುವುದಿಲ್ಲ. ಮತ್ತೆ ಪುಟಿದೇಳುತ್ತದೆ. ನಾಳೆಯಿಂದ ಹೊಸ ಅಧ್ಯಾಯ ಆರಂಭವಾಗಲಿದ್ದು, ಮುಂದಿನ ಚುನಾವಣೆಯಲ್ಲಿ ಪ್ರಾದೇಶಿಕ ಅಸ್ಮಿತೆಯ ಜೆಡಿಎಸ್ ಪಕ್ಷವನ್ನು ಸ್ವತಂತ್ರವಾಗಿ ಅಧಿಕಾರಕ್ಕೆ ತರುವುದು ತಮ್ಮ ಗುರಿ ಎಂದರು.

    ವರದಿ ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಬಿಗ್ ಬಾಸ್ ಕನ್ನಡ: ರಜತ್ ಮತ್ತು ಚೈತ್ರಾ ಕುಂದಾಪುರ ಎಲಿಮಿನೇಷನ್‌ ಗೆ ಅಸಲಿ ಕಾರಣ ಬಯಲು!

    December 22, 2025

    ಯಾವ ಶಕ್ತಿಯಿಂದಲೂ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

    December 21, 2025

    ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮುಂದಿನ ವಾರ 24ನೇ ಕಂತಿನ ಹಣ ಬಿಡುಗಡೆ!

    December 21, 2025

    Leave A Reply Cancel Reply

    Our Picks

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಚಿರತೆ ದಾಳಿಯಿಂದಾಗಿ ಮಹಿಳೆ ಸಾವು: ದಾಳಿ ನಡೆದ 24 ಗಂಟೆ ಒಳಗೆ  ಚಿರತೆ ಸೆರೆ

    December 23, 2025

    ತುರುವೇಕೆರೆ:  ತಾಲೂಕಿನ ಹರೆಮಲ್ಲೇನೆಹಳ್ಳಿ ಗ್ರಾಮದ ಸುಜಾತ ಎಂಬ 40 ವರ್ಷದ ಮಹಿಳೆ ಜಾನುವಾರು ಮೇಯಿಸಲು ಹೋದಾಗ ಭಾನುವಾರ ಸಂಜೆ 4:30…

    ತಿಪಟೂರು: ಡಿಸೆಂಬರ್ 24ರಂದು ‘ಸಾಂಸ್ಕೃತಿಕ ವೈಭವ’ ಬೃಹತ್ ಕಾರ್ಯಕ್ರಮ

    December 23, 2025

    ಪಾವಗಡ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

    December 23, 2025

    ಡಿಸೆಂಬರ್ 31ರಂದು ಸಿರಿಧಾನ್ಯ ಪಾಕ ಸ್ಪರ್ಧೆಗೆ ಅರ್ಜಿ: ವಿಜೇತರಿಗೆ ನಗದು ಬಹುಮಾನ | ಯಾರೆಲ್ಲ ಭಾಗವಹಿಸಬಹುದು?

    December 22, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.