ಕೊರಟಗೆರೆ: ತನ್ನ ಅಕ್ಕನ ಮಗಳನ್ನು ಮದುವೆಯಾಗಿದ್ದ ವ್ಯಕಿಯೊಬ್ಬ, ಸಂಸಾರದಲ್ಲಿ ಅನ್ಯೋನ್ಯತೆ ಇಲ್ಲದೆ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿ ಇದ್ದುದರಿಂದ, ಹೆಂಡತಿಯು ತನ್ನ ಗಂಡನನ್ನು ಬಿಟ್ಟು ತವರು ಮನೆಗೆ ಹೋಗಿ ವಾಸವಿದ್ದಳು.
ಇದರಿಂದ ಮನನೊಂದು ಗಂಡನು ಆತ್ಮಹತ್ಯೆ ಮಾಡಿಕೊಂಡ ದಾರುಣಾ ಘಟನೆ ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಮರೇನಾಯಕನಹಳ್ಳಿ ಗ್ರಾಮದಲ್ಲಿ ಜರುಗಿದೆ.
ಶಿವಪ್ರಸಾದ್ ಕುಮಾರ ಬಿನ್ ರಾಮನರಸಯ್ಯ(45) ವರ್ಷ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಮೃತ ಶಿವಪ್ರಸಾದ್ ಕುಮಾರ ರಾತ್ರಿ 9 ಗಂಟೆಗೆ ಊಟ ಮಾಡಿಕೊಂಡು ಮನೆಯಿಂದ ಹೊರ ಹೋಗಿ ಕಿರಣ್ ಕುಮಾರ್ ರವರ ಜಮೀನಿನ ತ್ಯಾಗದ ಮರಕ್ಕೆ ಪ್ಲಾಸ್ಟಿಕ್ ದಾರಗಳಿಂದ ನೇಣು ಹಾಕಿಕೊಂಡು ತನ್ಮೂಲಕ ತಾನೆ ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ. ಮೃತನ ಸಾವಿನಲ್ಲಿ ಯಾವುದೇ ಅನುಮಾನಗಳಿರುವುದಿಲ್ಲ ಎನ್ನಲಾಗಿದೆ.
ಪಿರ್ಯಾದಿ ರಾಮಯ್ಯ ನೀಡಿದ ದೂರಿನ ಮೇರೆಗೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸ್ ಐ ನಾಗರಾಜು, ಎಎಸ್ ಐ ಯೋಗೀಶ್, ಮುಖ್ಯಪೇದೆ ಜಯಪ್ರಕಾಶ್ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz