ಪಾವಗಡ: ತಹಶಿಲ್ದಾರ್ ಕಛೇರಿಯಲ್ಲಿ ಬಗರ್ ಹುಕುಂ ನಲ್ಲಿ ಸಾಗುವಳಿ ಚೀಟಿಗಾಗಿ ಅರ್ಜಿ ಸಲ್ಲಿಸಿದ 100 ಮಂದಿ ಫಲಾನುಭವಿಗಳಿಗೆ ಸಾಗುವಳಿ ಚೀಟಿ ವಿತರಣೆಯನ್ನು ಶಾಸಕ ವೆಂಕಟರಮಣಪ್ಪ ವಿತರಣೆ ಮಾಡಿದರು.
ವಿತರಣೆ ನಂತರ ಮಾತನಾಡಿದ ಶಾಸಕ ವೆಂಕಟರವಣಪ್ಪ, ರಾಜ್ಯ ಸರಕಾರ 2023 ಮೇ 27ರ ತನಕ ನಮೂನೆ 57 ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದು, ಅಗತ್ಯ ದಾಖಲೆಗಳೊಂದಿಗೆ ರೈತರು ತಹಶಿಲ್ದಾರ್ ಕಛೇರಿಯಲ್ಲಿ ಅರ್ಜಿಸಲ್ಲಿಸ ಬಹುದಾಗಿದೆ. ಪಾವಗಡದ ನಾಲ್ಕು ಹೋಬಳಿಗಳಲ್ಲಿ 100 ಮಂದಿ ರೈತರಿಗೆ ಬಗರ್ ಹುಕುಂ ಸಾಗುವಳಿ ಆದೇಶ ಪ್ರತಿಯನ್ನು ವಿತರಣೆ ಮಾಡಿದ್ದು, ಪಹಣಿ ಪಡೆದ ರೈತರು ಸರಕಾರಿ ಸೌಲಭ್ಯಗಳನ್ನು ಪಡೆದು ಸ್ವಾವಲಂಬಿ ಜೀವನ ನಡೆಸುವಂತೆ ತಿಳಿಸಿದರು.
ನಂತರ ಮಾತನಾಡಿದ ತಹಶಿಲ್ದಾರ್ ನಾಗರಾಜ್ ತಾಲ್ಲೂಕಿನ ನಾಲ್ಕು ಹೋಬಳಿಗಳ 100 ಫಲಾನುಭವಿಗಳಿಗೆ ಬಗರ್ ಹುಕ್ಕುಂ ಸಾಗುವಳಿ ಪತ್ರ ವಿತರಣೆ ಮಾಡಿದ್ದು, ರೈತರು ಸರಕಾರಿ ಸೌಲಭ್ಯ ಪಡೆದುಕೊಳ್ಳಬಹುದು ಹಾಗೂ ಇನ್ನು ಸಮಯವಿದ್ದು ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಿಬಹುದು ಎಂದು ತಿಳಿಸಿದರು.
ಈ ವೇಳೆ ಬಗರ್ ಹುಕ್ಕುಂ ಸಮಿತಿ ಸದಸ್ಯ ನವೀನ್, ಸಿದ್ದಗಂಗಮ್ಮ, ಪಾಲಯ್ಯ ಶಿರಸ್ಥೆದಾರ ಮೂರ್ತಿ ಹಾಗೂ ಫಲಾನುಭವಿಗಳು ಹಾಜರಿದ್ದರು.
ವರದಿ: ನಂದೀಶ್ ನಾಯ್ಕ ಪಿ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz