ಮಧುಗಿರಿ: ತಾಲೂಕಿನ ರೈತರಿಗೆ ಬಗರ್ ಹುಕುಂ ಸಾಗುವಳಿ ಪಡೆಯಲು ಆನ್ ಲೈನ್ ನಮೂನೆ ಅರ್ಜಿ ನಂಬರ್ 57ರಲ್ಲಿ ರೈತರು ಸಾಗುವಳಿದಾರರು ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ನೀಡಲಾಗಿದೆ.
ಉಳುವವನೇ ಭೂಮಿಯ ಒಡೆಯ, ರೈತರಿಗೆ ಜೀವನೋಪಾಯಕ್ಕಾಗಿ ವ್ಯವಸಾಯ ಮಾಡಲು ಇರುವ ಭೂಮಿಯಲ್ಲಿ ಬೆಳೆ ಬೆಳೆದುಕೊಂಡು ಜೀವನ ಮಾಡಿಕೊಂಡಿರುವ ರೈತರಿಗೆ ಅನುಕೂಲವಾಗುವ ಭೂಮಿಯನ್ನು ನಮೂನೆ 57 ರಲ್ಲಿ ಅಕ್ರಮ-ಸಕ್ರಮ ಕೋರಿ ಅರ್ಜಿ ಸಲ್ಲಿಸಲು ಸುವರ್ಣಾವಕಾಶ ನೀಡಲಾಗಿದೆ ಎಂದು ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ಸುರೇಶ್ ಆಚಾರ್ ರವರು ತಿಳಿಸಿದ್ದಾರೆ.
ಎಲ್ಲ ನಾಡಕಚೇರಿಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಕೆಲವು ದಾಖಲಾತಿಗಳ ಅವಶ್ಯಕತೆ ಇದೆ. ಆಧಾರ್ ಕಾರ್ಡ್, ಜಮೀನಿನ ಪಹಣಿ ಇತ್ಯಾದಿ ದಾಖಲೆ ತೆಗೆದುಕೊಂಡು ಹೋಗಿ ನಾಡಕಚೇರಿಯಲ್ಲಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಎಂದು ಅವರು ಮಾಹಿತಿ ನೀಡಿದರು.
ವರದಿ: ದೊಡ್ಡೇರಿ ಮಹಾಲಿಂಗಯ್ಯ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz