ಕೊರಟಗೆರೆ: ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕರಾದ ಡಾ. ಜಿ ಪರಮೇಶ್ವರ್ ರವರ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆಯು ನಡೆಯಿತು.
ತಾಲ್ಲೂಕು ದಂಡಾಧಿಕಾರಿ ನಹೀದಾ ಜಮ್ ಜಮ್, ತಾಲ್ಲೂಕು ಪಂಚಾಯಿತಿ ಆಡಳಿತ ಅಧಿಕಾರಿ ಜಿ ದೀಪಶ್ರೀ, ತಾಲ್ಲೂಕು ಕಾರ್ಯ ನಿರ್ವಹಣಾಧಿಕಾರಿ ದೊಡ್ಡಸಿದ್ದಯ್ಯ, ಸಿ ಪಿ ಐ ಸಿದ್ದರಾಮೇಶ್ವರ್ ಮತ್ತು ಎಲ್ಲ ಇಲಾಖೆಗಳ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸುವಂತೆ ಶಾಸಕರ ಡಾ.ಜಿ.ಪರಮೇಶ್ವರ್ ಆದೇಶ ನೀಡಿದರು.
ಮೊದಲಿಗೆ ಕೃಷಿ ಇಲಾಖೆಯ ಎಡಿಎ ನಾಗರಾಜು ತಮ್ಮ ಇಲಾಖೆಯಲ್ಲಿ ಬರುವಂತಹ ಅನುದಾನಗಳನ್ನು ಮತ್ತು ಪೂರ್ಣಗೊಂಡಿರುವ ಅಭಿವೃದ್ಧಿ ಸಭೆಯಲ್ಲಿ ತಿಳಿಸಿದರು. ಕೃಷಿ ಹೊಂಡಗಳನ್ನು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳ ಆದೇಶದ ಮೇರೆಗೆ ಸದ್ಯಕ್ಕೆ ಬಂದ್ ಮಾಡಲಾಗಿದೆ, ಕೃಷಿ ಹೊಂಡಗಳ ಅಭಿವೃದ್ಧಿಗೆ ಕಾರ್ಯ ಆಗುತ್ತಿಲ್ಲವೆಂದು ಅಸಮಾಧಾನವನ್ನು ವ್ಯಕ್ತಪಡಿಸಿದಾಗ, ಪರಮೇಶ್ವರ್ ಅವರು ಪ್ರತಿಕ್ರಿಯಿಸಿ ಕೂಡಲೇ ನನಗೆ ಪತ್ರವನ್ನು ಬರೆಯಿರಿ, ನಾನು ಸರ್ಕಾರದ ಗಮನಕ್ಕೆ ತಂದು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೃಷಿ ಹೊಂಡ ನಾಲ ಬದು ಚೆಕ್ ಡ್ಯಾಮ್ ಇಂತಹ ಅಭಿವೃದ್ಧಿ ಕೆಲಸಗಳನ್ನು ಮಾಡಿ ರೈತರನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು ಎಂದು ತಿಳಿಸಿದರು.
ಪಶು ಇಲಾಖೆಗೆ ಸಂಬಂಧಪಟ್ಟಂತೆ ಸಿದ್ಧನಗೌಡ ಸಭೆಯನ್ನುದ್ದೇಶಿಸಿ ಮಾತನಾಡಿ, ತಮ್ಮ ಇಲಾಖೆಯ ಬಗ್ಗೆ ಪೂರ್ಣವಾದ ಮಾಹಿತಿಯನ್ನು ತಿಳಿಸಿದರು. ಈ ವೇಳೆ ಹಳ್ಳಿಕಾರ್ ತಳಿಯ ಶ್ರಮಿಸಬೇಕೆಂದು ಶಾಸಕರು ಆದೇಶಿಸಿದರು.
ತೋಟಗಾರಿಕೆ ಇಲಾಖೆಯಲ್ಲಿ ನರೇಗಾ ಯೋಜನೆಯ ವಾರ್ಷಿಕ ಅನುದಾನ ಬಳಕೆಯಲ್ಲಿ ತೋಟಗಾರಿಕೆ ಇಲಾಖೆ ಸಂಪೂರ್ಣ ವಿಫಲವಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿಗದಿಪಡಿಸಿದ ಮಾನವ ದಿನಗಳನ್ನು ಸಂಪೂರ್ಣಗೊಳಿಸದೆ, ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ನರೇಗಾ ಯೋಜನೆಯ 1 ಕೋಟಿ 80 ಲಕ್ಷ ರೂಗಳನ್ನು ಅಭಿವೃದ್ಧಿ ಕೆಲಸಕ್ಕೆ ಬಳಸದೆ ನಿರ್ಲಕ್ಷ್ಯ ತೋರಿದ ಅಧಿಕಾರಿ ಮೇಲೆ ಪರಮೇಶ್ವರ್ ಅವರು ಶಿಸ್ತುಕ್ರಮಕ್ಕೆ ಮುಂದಾದರು. ಮ
ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಅಧಿಕಾರಿ ಕಚೇರಿಯಲ್ಲಿ ಇದ್ದುಕೊಂಡು ತಮ್ಮ ಕಚೇರಿಯ ಎಸ್ ಡಿ ಎ ರನ್ನು ಸಭೆಗೆ ತಮ್ಮ ಇಲಾಖೆಯ ಯಾವುದೇ ಕಾರ್ಯಗಳ ಬಗ್ಗೆ ಮಾಹಿತಿಯನ್ನು ಸ್ಪಷ್ಟವಾಗಿ ನೀಡದ ಕಾರಣ ಇವರ ಕಾರ್ಯ ವೈಖರಿಯನ್ನು ಕಂಡು ಶಾಸಕರು ಬೇಸರ ವ್ಯಕ್ತಪಡಿಸಿದರು.
ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಬಿಇಓ ಸುಧಾಕರ್ ಸಭೆಯನ್ನುದ್ದೇಶಿಸಿ ಮಾತನಾಡಿ, ತಾಲೂಕಿನ ಅತ್ಯಂತ 104 ಶಾಲೆಗೆ ಸುಸಜ್ಜಿತವಾದ ಕಟ್ಟಡವಿಲ್ಲ, 56 ಶಾಲೆಗಳ ಪೈಕಿ 97 ಕೊಠಡಿಗಳು ರಿಪೇರಿಯಲ್ಲಿವೆ, 94 ಶಾಲೆಗಳ ಕಟ್ಟಡಗಳು ಮಾತ್ರ ಸುಸಜ್ಜಿತವಾಗಿವೆ ಎಂದು ಶಾಸಕರ ಗಮನಕ್ಕೆ ತಂದರು.
ಇದಕ್ಕೆ ಉತ್ತರಿಸಿದ ಶಾಸಕರು, ತಕ್ಷಣವೇ ಸರ್ಕಾರದ ಗಮನಕ್ಕೆ ತಂದು ಶಾಲೆಗಳ ಅಭಿವೃದ್ಧಿಗೆ ಹೊತ್ತು ನೀಡುತ್ತೇನೆಂದು ತಿಳಿಸಿದಲ್ಲದೇ, ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಬರುವಂತಹ ಸಮವಸ್ತ್ರ ಬಾರದಿರುವ ಕಾರಣ ಸಭೆಯಲ್ಲಿ ಸರ್ಕಾರದ ವಿರುದ್ಧ ಪರಮೇಶ್ವರ್ ಬೇಸರ ವ್ಯಕ್ತಪಡಿಸಿದರು.
ಒಟ್ಟಾರೆ ಕೊರಟಗೆರೆಯಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದ ಮೀನುಗಾರಿಕೆ ಇಲಾಖೆ, ರೇಷ್ಮೆ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪಂಚಾಯತ್ ರಾಜ್, ಆರೋಗ್ಯ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಅಕ್ಷರ ದಾಸೋಹ, ಆಹಾರ ಇಲಾಖೆ, ಶಿಕ್ಷಣ ಇಲಾಖೆಗೂ ಸೇರಿದಂತೆ ಇನ್ನು ಹಲವು ಇಲಾಖೆಗಳ ಅಧಿಕಾರಿಗಳ ನಿರ್ಲಕ್ಷವನ್ನು ಕಂಡು ಖಡಕ್ ವಾರ್ನಿಂಗ್ ಕೊಡುವುದರ ಮೂಲಕ ಶಿಸ್ತು ಕ್ರಮಕ್ಕೆ ಶಾಸಕರು ಮುಂದಾಗಿದ್ದಾರೆ.
ವರದಿ: ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz