nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್

    November 6, 2025

    ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ

    November 6, 2025

    ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

    November 6, 2025
    Facebook Twitter Instagram
    ಟ್ರೆಂಡಿಂಗ್
    • ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್
    • ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ
    • ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ
    • ನ.20: ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ
    • ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ
    • ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ
    • ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ
    • ಖ್ಯಾತ ಖಳನಟ ಹರೀಶ್ ರಾಯ್  ನಿಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೊರಗುತ್ತಿಗೆದಾರ ನೌಕರರನ್ನು ಖಾಯಂಗೊಳಿಸಲು ಒತ್ತಾಯಿಸಿ ಬೃಹತ್ ಪ್ರತಿಭಟನೆ
    ಜಿಲ್ಲಾ ಸುದ್ದಿ July 2, 2022

    ಹೊರಗುತ್ತಿಗೆದಾರ ನೌಕರರನ್ನು ಖಾಯಂಗೊಳಿಸಲು ಒತ್ತಾಯಿಸಿ ಬೃಹತ್ ಪ್ರತಿಭಟನೆ

    By adminJuly 2, 2022No Comments2 Mins Read
    mushkara

    ಹಿರಿಯೂರು: ಸರ್ಕಾರ ಹೊರಗುತ್ತಿಗೆದಾರ ನೌಕರರನ್ನು ಖಾಯಂಗೊಳಿಸಲು ಒತ್ತಾಯಿಸಿ, ನಗರಸಭೆ ಆವರಣದಲ್ಲಿ  ಪೌರಕಾರ್ಮಿಕರ ಅಧ್ಯಕ್ಷರಾದ ದುರ್ಗೇಶ್ ಅಧ್ಯಕ್ಷತೆಯಲ್ಲಿ ಹಿರಿಯೂರು ನಗರಸಭೆಯ ಗುತ್ತಿಗೆ ನೌಕರರಿಂದ ಬೃಹತ್  ಪ್ರತಿಭಟನೆ ನಡೆಸಿದರು.

    ನಗರಸಭಾ ಸಂಸ್ಥೆಯಲ್ಲಿ ಹೊರಗುತ್ತಿಗೆ ಪದ್ಧತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್ ಗಳು, ವಾಟರ್ ಮ್ಯಾನ್ ಗಳನ್ನು ಸರ್ಕಾರ ಖಾಯಂಗೊಳಿಸಬೇಕು ಎಂಬುದಾಗಿ ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷರಾದ ಆರ್.ಎಲ್.ರಾಜಶೇಖರ್ ರವರನ್ನು ಒತ್ತಾಯಿಸಿದರು.


    Provided by
    Provided by

    ಚಿತ್ರದುರ್ಗ  ಜಿಲ್ಲೆಯ ಹಿರಿಯೂರು ನಗರದ ನಗರಸಭೆ ಆವರಣದಲ್ಲಿ ಕರ್ನಾಟಕ ರಾಜ್ಯ ಪೌರನೌಕರರ ಸಂಘ, ಹಿರಿಯೂರು ಸಮಿತಿ ಹಾಗೂ ಕರ್ನಾಟಕ ರಾಜ್ಯ ಹೊರಗುತ್ತಿಗೆ ನೌಕರರ ಸಂಘ ಹಿರಿಯೂರು ಶಾಖೆಯ ನೇತೃತ್ವದಲ್ಲಿ ಜುಲೈ 1 ಶುಕ್ರವಾರದಿಂದ ರಾಜ್ಯಾದ್ಯಂತ ನಗರ ನೈರ್ಮಲ್ಯ, ಸ್ವಚ್ಛತೆ ಸ್ಥಗಿತಗೊಳಿಸಿ, ಹಮ್ಮಿಕೊಳ್ಳಲಾಗಿದ್ದ ಅನಿರ್ಧಿಷ್ಟಾವಧಿ ಪ್ರತಿಭಟನೆಯಲ್ಲಿ ಪೌರಕಾರ್ಮಿಕರು,  ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್ ಗಳು, ವಾಟರ್ ಮ್ಯಾನ್ ಗಳು  ಭಾಗವಹಿಸಿದ್ದರು.

    ಇದೇ ವೇಳೆ ನಮ್ಮ ತುಮಕೂರು ಜೊತೆಗೆ ಮಾತನಾಡಿದ ಪ್ರತಿಭಟನಾಕಾರರು,  ನಾವುಗಳು ಗುತ್ತಿಗೆ ನೌಕರರಾಗಿ ಸುಮಾರು 10-15 ವರ್ಷಗಳ ಕಾಲ ಸೇವೆ ಸಲ್ಲಿಸುತ್ತ ಬಂದಿದ್ದೇವೆ. ನಮಗೆ ಏಜೆನ್ಸಿ ಗುತ್ತಿಗೆದಾರರಿಂದ ವೇತನ ನೀಡಲಾಗುತ್ತಿದೆ.  ಆದರೆ ಅವರು ಸರಿಯಾದ ಸಮಯಕ್ಕೆ ವೇತನ ನೀಡುವುದಿಲ್ಲ, ನಮಗೆ ನೀಡುವ ವೇತನದಲ್ಲಿ ಅರ್ಧ ಹಣ ಏಜೆನ್ಸಿಗಳ ಪಾಲಾಗುತ್ತಿದೆ ಎಂಬುದಾಗಿ ಅವರು ಆಪಾದಿಸಿದರಲ್ಲದೆ,  ನಾವು ಗುತ್ತಿಗೆ ನೌಕರರಾಗಿ ಕೆಲಸ ಮಾಡುತ್ತಾ ಅರ್ಧ ಆಯುಷ್ಯವನ್ನು ಕಳೆದಿದ್ದೇವೆ.  ಇನ್ನು ಮುಂದೆ ಆದರೂ ನಮ್ಮನ್ನು ಖಾಯಂಗೊಳಿಸಿ ಎಂದು ಸರ್ಕಾರವನ್ನು ಒತ್ತಾಯಿಸಿದರು.

    ನಮಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಂದ ಯಾವುದೇ ಉದ್ಯೋಗ ಭದ್ರತೆ ನೀಡಲಾಗಿಲ್ಲ, ಇದರಿಂದಾಗಿ ನಮ್ಮ ಕುಟುಂಬ ನಿರ್ವಹಣೆ ತುಂಬಾ ಕಷ್ಟವಾಗಿದೆ. ಕೊರೊನಾ ಸಂಕಷ್ಟ ಪರಿಸ್ಥಿತಿಯಲ್ಲಿ ಸಹ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು, ಹಗಲಿರುಳು ನಗರಸಭೆ ಕೆಲಸ ನಿರ್ವಹಿಸಿದ್ದೇವೆ. ಆದ್ದರಿಂದ ಸರ್ಕಾರ ಈ ಕೂಡಲೇ ನಮ್ಮ ಕೆಲಸಗಳನ್ನು ಖಾಯಂಗೊಳಿಸಿ, ನೇರವೇತನ ಜಾರಿಗೊಳಿಸುವ ಮೂಲಕ ನಮಗೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿದರು.

    ನಗರಸಭೆ ಸದಸ್ಯ ಡಿ.ಸಣ್ಣಪ್ಪ, ದಲಿತ ಮುಖಂಡ ಘಾಟ್ ರವಿ,  ಅಂಬೇಡ್ಕರ್ ಸೇನೆ ಮುಖಂಡ ಕೆ.ಪಿ.ಶ್ರೀನಿವಾಸ್ ಈ ಪ್ರತಿಭಟನೆಯಲ್ಲಿ ಪಾಲ್ಗೊಂಡು ಪೌರಕಾರ್ಮಿಕರಿಗೆ ಬೆಂಬಲ ವ್ಯಕ್ತಪಡಿಸಿದರು.

    ಈ ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಹೊರಗುತ್ತಿಗೆ ವಾಹನ ಚಾಲಕ ಸಂಘದ ಅಧ್ಯಕ್ಷರಾದ ಬಿ.ದಿವಾಕರ, ಉಪಾಧ್ಯಕ್ಷರಾದ ಆರ್.ಎಲ್.ರಾಜಶೇಖರ್, ಪಿ.ವೀರೇಂದ್ರ, ವೈ.ಆರ್.ರಂಗನಾಥ್, ಅಭಿಷೇಕ್, ಕಾರ್ತಿಕ್ , ಡಿ.ಮಂಜುನಾಥ್, ಹನುಮಂತ, ಫಯಾಜ್, ಶ್ರೀನಿವಾಸ್, ಸಿದ್ದೇಶ್, ಷಫೀವುಲ್ಲಾ, ಚಂದ್ರಶೇಖರ್ ಹಾಗೂ ಡಾಟಾ ಎಂಟ್ರಿ ಆಪರೇಟರ್ ಗಳಾದ ಕಿರಣ್ ಕುಮಾರ್, ನೇತ್ರಾವತಿ, ಸ್ವಾಮಿ, ಆನಂದ್, ಫರ್ವಿತೇಜ್ , ಪೌರ ಕಾರ್ಮಿಕ ಸಂಘದ ಅಧ್ಯಕ್ಷರಾದ ಬಿ.ದುರ್ಗೇಶ್, ನಗರಸಭೆ ಸದಸ್ಯರಾದ ಡಿ.ಸಣ್ಣಪ್ಪ ಇತರರು ಉಪಸ್ಥಿತರಿದ್ದರು.

    ವರದಿ: ಮುರುಳಿಧರನ್ ಆರ್ ಚಿತ್ರದುರ್ಗ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್

    November 6, 2025

    ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ

    November 6, 2025

    ಬೀದರ್ | 12 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

    November 6, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್

    November 6, 2025

    ಸರಗೂರು:  ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ  ನ.16 ರಿಂದ 18 ವರೆಗೆ ನಡೆಯಲಿದ್ದು, ಜಾತ್ರಾ  ಲಾಡು ಪ್ರಸಾದ…

    ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ

    November 6, 2025

    ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

    November 6, 2025

    ನ.20: ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ

    November 6, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.