ಕೊರಟಗೆರೆ: ಮಾಜಿ ಶಾಸಕರಾದ ಕೆ.ಎನ್.ರಾಜಣ್ಣ ಅವರು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ವರೀಷ್ಠರಾದ ಹೆಚ್.ಡಿ.ದೇವೇಗೌಡರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ ಎಂದು ಕೊರಟಗೆರೆ ಕ್ಷೇತ್ರದ ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ಹೇಳಿದರು.
ಕೊರಟಗೆರೆ ಪಟ್ಟಣದ ಬೈಲಾಂಜಿನೇಯ ಸ್ವಾಮಿ ಸಮುದಾಯ ಭವನದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ತಂದೆಯ ವಯಸ್ಸಿನಷ್ಟಿರುವ ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಕೆ.ಎನ್.ರಾಜಣ್ಣನವರು ಹೇಳಿಕೆ ನೀಡಿರುವುದು ಖಂಡನೀಯವಾದುದ್ದು, ಇಡೀ ರಾಜ್ಯ, ರಾಷ್ಟ್ರ ದೇವೇಗೌರನ್ನು ಅಭಿಮಾನ ದಿಂದ ಪ್ರೀತಿಸುತ್ತಾರೆ ಎಂದರು.
ಇಳಿವಯಸ್ಸಿನಲ್ಲೂ ದೇಶದ ರೈತರ ಬಗ್ಗೆ ಚಿಂತಿಸುವ ರಾಜಕಾರಣಿಯಾಗಿರುವ ಅವರು ನೀರಾವರಿ ವಿಚಾರದಲ್ಲಿ ಅವರು ನಡೆಸಿದ ಐತಿಹಾಸಿಕ ಹೋರಾಟಗಳು ಇತಿಹಾಸ ಪುಟಗಳಲ್ಲಿ ದಾಖಲಾಗಿದೆ ಎಂದು ತಿಳಿಸಿದರು.
ರಾಗಿಗೆ ಬೆಂಬಲ ಬೆಲೆ ನೀಡುವಂತೆ ಸಂಸತ್ತಿನಲ್ಲಿ ದೇವೇಗೌಡರು ಧ್ವನಿ ಎತ್ತಿದ ಕೂಡಲೇ ಮೋದಿ ಸರ್ಕಾರ ರಾಗಿ ಬೆಳೆಗೆ ಬೆಂಬಲ ಬೆಲೆ ಪ್ರಕಟಿಸಿತು. ಇದು ದೇಶದ ರಾಜಕಾರಣದಲ್ಲಿ ದೇವೇಗೌಡರಿಗಿರುವ ಗೌರವ ಎಂದು ತಿಳಿಸಿದರು.
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz