nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್

    November 6, 2025

    ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ

    November 6, 2025

    ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

    November 6, 2025
    Facebook Twitter Instagram
    ಟ್ರೆಂಡಿಂಗ್
    • ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್
    • ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ
    • ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ
    • ನ.20: ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ
    • ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ
    • ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ
    • ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ
    • ಖ್ಯಾತ ಖಳನಟ ಹರೀಶ್ ರಾಯ್  ನಿಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೂರನೇ ದಿನಕ್ಕೆ ಕಾಲಿಟ್ಟ ಹೊರಗುತ್ತಿಗೆದಾರ ನೌಕರರ ಪ್ರತಿಭಟನೆ
    ಜಿಲ್ಲಾ ಸುದ್ದಿ July 3, 2022

    ಮೂರನೇ ದಿನಕ್ಕೆ ಕಾಲಿಟ್ಟ ಹೊರಗುತ್ತಿಗೆದಾರ ನೌಕರರ ಪ್ರತಿಭಟನೆ

    By adminJuly 3, 2022No Comments2 Mins Read
    mushkara

    ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ನಗರಸಭೆ ಆವರಣದಲ್ಲಿ ಕರ್ನಾಟಕ ರಾಜ್ಯ ಪೌರನೌಕರರ ಸಂಘ, ಹಿರಿಯೂರು ಸಮಿತಿ ಹಾಗೂ ಕರ್ನಾಟಕ ರಾಜ್ಯ ಹೊರಗುತ್ತಿಗೆ ನೌಕರರ ಸಂಘ ಹಿರಿಯೂರು ಶಾಖೆಯ ನೇತೃತ್ವದಲ್ಲಿ ಜುಲೈ 1 ಶುಕ್ರವಾರದಿಂದ ರಾಜ್ಯಾದ್ಯಂತ ನಗರ ನೈರ್ಮಲ್ಯ, ಸ್ವಚ್ಛತೆ ಸ್ಥಗಿತಗೊಳಿಸಿ, ಹಮ್ಮಿಕೊಳ್ಳಲಾಗಿದ್ದ ಅನಿರ್ಧಿಷ್ಟಾವಧಿ ಮೂರನೇ ದಿನಕ್ಕೆ ಕಾಲಿಟ್ಟಿಟ್ಟಿದ್ದು, ಹೊರಗುತ್ತಿಗೆದಾರರಾದ ಪೌರಕಾರ್ಮಿಕರು, ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್ ಗಳು, ವಾಟರ್ ಮ್ಯಾನ್ ಗಳು ಇಂದೂ ಪ್ರತಿಭಟನೆ ನಡೆಸಿದರು.

    ಪ್ರತಿಭಟನೆ ವೇಳೆ ನಮ್ಮ ತುಮಕೂರು ಮಾಧ್ಯಮದ ಜೊತೆಗೆ ಮಾತನಾಡಿದ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರಸಭೆ ಕಾರ್ಯಾಲಯದ ಮಾಜಿ ಉಪಾಧ್ಯಾಕ್ಷರಾಗಿದ್ದ ಜ್ಯೋತಿಲಕ್ಷ್ಮಿ ಗೋಪಿಯಾದವ್, ನಾನು ನಗರಸಭೆಯ ಮಾಜಿ ಉಪಾಧ್ಯಕ್ಷೆಯಾಗಿ ಕೆಲಸ ಮಾಡಿದ್ದು, ಈಗಲೂ ಸಹ ಕಾರ್ಮಿಕ ವಿಭಾಗದಲ್ಲಿ ಕಾರ್ಯಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಗುತ್ತಿಗೆ ಕಾರ್ಮಿಕರು ಜೀವನ ನಡೆಸುವುದು ತುಂಬಾ ದುಸ್ತರವಾಗಿದೆ. ಇಂತಹ ಸಂದರ್ಭದಲ್ಲಿ ಗುತ್ತಿಗೆ ಆಧಾರದ ನೌಕರರನ್ನು ಖಾಯಂಗೊಳಿಸಿದರೆ, ಅವರ ಕುಟುಂಬ ಜೀವನ ನಡೆಸಲು ಅನುಕೂಲವಾಗುತ್ತದೆ ಎಂದರು.
    ಸರ್ಕಾರ ಇಂದು ಪೌರಕಾರ್ಮಿಕರಿಗೆ ಸಂಕಷ್ಟ ಬತ್ಯೆ 2,000 ಘೋಷಿಸಿದೆ. ಈ ಸಂದರ್ಭದಲ್ಲಿ ಸರ್ಕಾರ ಐಪಿಡಿ ಸಾಲಪ್ಪ ವರದಿ ಚಂದ್ರಶೇಖರ ಸಮಿತಿ ವರದಿ ಹಾಗೂ ರಾಷ್ಟ್ರೀಯ ಕಾನೂನು ಶಾಲೆಯ ವರದಿಗಳಿಗೆ ಸರ್ಕಾರ ಸೂಚಿಸಿದೆ. ಪೌರಕಾರ್ಮಿಕ ಮಹಿಳೆಯರಿಗೆ ಸರ್ಕಾರ ಸರ್ಕಾರಿ ಮಹಿಳಾ ನೌಕರರಿಗೆ ನೀಡುವ ಹೆರಿಗೆ ಭತ್ಯೆ, ಗೃಹ ಮುಂತಾದ ಸೌಲತ್ತುಗಳನ್ನು ಸರ್ಕಾರ ಘೋಷಿಸಿರುವುದು ಸ್ವಾಗತ. ಹಾಗೆಯೇ ಸರ್ಕಾರ ಈ ಕೂಡಲೇ ಗುತ್ತಿಗೆ ನೌಕರರದಾರರನ್ನು ಖಾಯಂ ನೌಕರರನ್ನಾಗಿ ಮಾಡಬೇಕು ಎಂದು ಅವರು ಒತ್ತಾಯಿಸಿದರು.


    Provided by
    Provided by

    ಸರ್ಕಾರವು 7ನೇ ಆಯೋಗ ಇಂತಹದ್ದೊಂದು ಸಲಹೆ ನೀಡಿದರೂ ಬಹುತೇಕ ಗುತ್ತಿಗೆದಾರರು ರಾಜಕಾರಣಿಗಳು, ಬೆಂಬಲಿಗರು ಆಗಿರುವುದರಿಂದ ಗುತ್ತಿಗೆ ಕಾರ್ಮಿಕರಿಗೆ ಐದಾರು ಸಾವಿರ ರೂ.ಗಳಷ್ಟು ಕಡಿಮೆ ವೇತನ ನೀಡುತ್ತಿದ್ದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.

    ಸೂರ್ಯೋದಯ ಸ್ಟುಡಿಯೋ ಛಾಯಾಗ್ರಹಕರಾದ ಅಬ್ದುಲ್ ಅಜೀಜ್ ಅವರು ಮಾತನಾಡಿ, ಇಂದಿನ ದಿನಗಳಲ್ಲಿ ಪೌರ ಕಾರ್ಮಿಕರ ಸೇವೆಯು ಬಹಳಷ್ಟು ಮುಖ್ಯವಾಗಿದೆ. ಕೋವಿಡ್ 19. ಸಂದರ್ಭದಲ್ಲಿ ಯಾರೊಬ್ಬರೂ ಸಹ ತಮ್ಮ ತಮ್ಮ ಮನೆಗಳನ್ನು ಬಿಟ್ಟು ಹೊರಗಡೆ ಬರುವುದಕ್ಕೆ ಸಹ ಹೆದರುತ್ತಿದ್ದ ಸಂದರ್ಭದಲ್ಲಿ ತಮ್ಮ ಪ್ರಾಣ, ಕುಟುಂಬವನ್ನು ಎಲ್ಲಾವನ್ನು ಬಿಟ್ಟು ಸಾರ್ವಜನಿಕರ ಹಿತಕ್ಕಾಗಿ ಹಗಲು ರಾತ್ರಿ ದುಡಿದಿದ್ದಾರೆ ಎಂದರು.

    ನಗರ ಸಭಾ ಕಾರ್ಯಾಲಯ ದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಹೊರಗುತ್ತಿಗೆದಾರರನ್ನು ಸರ್ಕಾರ ಈ ಕೂಡಲೇ ಖಾಯಂಗೊಳಿಸಬೆಕಾಗಿದೆ ಹಾಗೂ ಇವರ ಪರವಾಗಿ ಸಾರ್ವಜನಿಕರಾದ ನಾವುಗಳು ಸಹ ಕೈ ಜೋಡಿಸಬೇಕಾಗಿದೆ ಎಂಬುದಾಗಿ ಅಬ್ದುಲ್ ಅಜೀಜ್ ಸಾರ್ವಜನಿಕರಿಗೆ ಕರೆ ನೀಡಿದರು.

    ಈ ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಹೊರಗುತ್ತಿಗೆ ವಾಹನ ಚಾಲಕ ಸಂಘದ ಅಧ್ಯಕ್ಷರಾದ ಬಿ.ದಿವಾಕರ ಮಾತನಾಡಿ, ಇಂದು ಮೂರನೇಯ ದಿನದ ಮುಷ್ಕರ ಮುಂದುವರೆದಿದ್ದು, ನಗರದಲ್ಲಿ ತ್ಯಾಜ್ಯ ಸಾಗಿಸುವ ಕಸವನ್ನು ದಿನಕ್ಕೆ 30 ಲೋಡಿನಂತೆ ಮೂರು ದಿನಕ್ಕೆ ತೊಂಬತ್ತು ಲೋಡ್ ನಷ್ಟು ಕಸದ ಲೋಡು ಈಗಾಗಲೇ ಸಂಗ್ರಹವಾಗಿದ್ದು, ಹಿರಿಯೂರು ನಗರದ ಮೂವತ್ತೊಂದು ವಾರ್ಡ್ ಗಳಲ್ಲಿ ಈಗಾಗಲೇ ವಿಪರೀತ ಕಸ, ಕಸದಿಂದ ದುರ್ವಾಸನೆ ಮೂಗುಮುಚ್ವಿಕೊಳ್ಳುವಂತಹ ಪರಿಸ್ಥಿತಿ ಉಂಟಾಗಿದೆ. ಇದರಿಂದಾಗಿ ಸ್ಥಳೀಯ ಸಾರ್ವಜನಿಕರಿಗೆ ಬಹಳಷ್ಟು ತೊಂದರೆಯಾಗುತ್ತಿದೆ. ಆದರಿಂದ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ ಅತಿ ಶೀಘ್ರದಲ್ಲಿ ತಮ್ಮ ಸಂಪುಟ ಸಭೆಯಲ್ಲಿ ಅತಿ ಶೀಘ್ರದಲ್ಲಿ ಗಣನೆಗೆ ತೆಗೆದುಕೊಂಡು ನಮ್ಮನ್ನು ಅತಿ ಶೀಘ್ರದಲ್ಲಿ ಪೌರಕಾರ್ಮಿಕರು, ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್ ಗಳು, ವಾಟರ್ ಮ್ಯಾನ್ ಗಳನ್ನು ಸರ್ಕಾರವು ಖಾಯಂಗೊಳಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದರು.

    ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಆರ್.ಎಲ್.ರಾಜಶೇಖರ್, ಪಿ.ವೀರೇಂದ್ರ, ವೈ.ಆರ್.ರಂಗನಾಥ್, ಅಭಿಷೇಕ್, ಕಾರ್ತಿಕ್ , ಡಿ.ಮಂಜುನಾಥ್, ಹನುಮಂತ, ಫಯಾಜ್, ಶ್ರೀನಿವಾಸ್, ಸಿದ್ದೇಶ್, ಷಫೀವುಲ್ಲಾ, ಚಂದ್ರಶೇಖರ್ ಹಾಗೂ ಡಾಟಾ ಎಂಟ್ರಿ ಆಪರೇಟರ್ ಗಳಾದ ಕಿರಣ್ ಕುಮಾರ್, ನೇತ್ರಾವತಿ, ಸ್ವಾಮಿ, ಆನಂದ್, ಫರ್ವಿತೇಜ್ , ಪೌರ ಕಾರ್ಮಿಕ ಸಂಘದ ಅಧ್ಯಕ್ಷರಾದ ಬಿ.ದುರ್ಗೇಶ್ ಇತರರು ಉಪಸ್ಥಿತರಿದ್ದರು.

    ವರದಿ: ಮುರುಳಿಧರನ್ ಆರ್ ಚಿತ್ರದುರ್ಗ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್

    November 6, 2025

    ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ

    November 6, 2025

    ಬೀದರ್ | 12 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

    November 6, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್

    November 6, 2025

    ಸರಗೂರು:  ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ  ನ.16 ರಿಂದ 18 ವರೆಗೆ ನಡೆಯಲಿದ್ದು, ಜಾತ್ರಾ  ಲಾಡು ಪ್ರಸಾದ…

    ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ

    November 6, 2025

    ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

    November 6, 2025

    ನ.20: ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ

    November 6, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.