ಕೊರಟಗೆರೆ: ತುಮಕೂರು ಜಿಲ್ಲೆಯಾದ್ಯಂತ ಕರ್ನಾಟಕ ಕಾರ್ಯನಿರತ ಪತ್ರಕರ್ತರ ತಾಲ್ಲೂಕು ಘಟಕದ ಚುನಾವಣೆ ನಡೆಯುತ್ತಿದೆ. ಅದೇ ರೀತಿ ಕೊರಟಗೆರೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಚುನಾವಣೆ ನಡೆಯಿತು.
ಚುನಾವಣೆಯಲ್ಲಿ ಅಧ್ಯಕ್ಷರಾಗಿ ಪುರುಷೋತ್ತಮ್, ಉಪಾಧ್ಯಕ್ಷರಾಗಿ ನಾಗರಾಜ್, ಪ್ರಧಾನ ಕಾರ್ಯದರ್ಶಿ ಚಿದಂಬರಂ, ಕಾರ್ಯದರ್ಶಿ ಸತೀಶ, ಖಜಾಂಚಿ ಕೆ.ಬಿ. ಲೋಕೇಶ್, ನಿರ್ದೇಶಕರಾಗಿ ಹರೀಶ್ ಬಾಬು ಬಿ.ಹೆಚ್, ರಾಜು, ನಾಗೇಂದ್ರ, ನರಸಿಂಹಮೂರ್ತಿ, ಜಿ.ಎಲ್ ಸುರೇಶ್, ತಿಮ್ಮರಾಜು, ಚಿಕ್ಕ ಕಾಮಯ್ಯ, ಎನ್.ಪದ್ಮನಾಭ ಆಯ್ಕೆಯಾದರು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಪುರುಶೋತ್ತಮ್, ಪ್ರಧಾನ ಕಾರ್ಯದರ್ಶಿ ರಘುರಾಮ್, ಚಿಕ್ಕೀರಪ್ಪ, ರಂಗಧಾಮಯ್ಯ, ಸತೀಶ್, ಸಿದ್ದಲಿಂಗಸ್ವಾಮಿ, ಜಿಲ್ಲಾ ನಿರ್ದೇಶಕರಾದ ಮೂರ್ತಿ ವಿ.ಕೆ, ನಂದೀಶ್, ಕೆ.ಎಲ್.ಟಿ.ಎಸ್ ಕೃಷ್ಣಮೂರ್ತಿ, ಪರಮೇಶ್, ಸಂಘದ ಸದಸ್ಯರು ಹಾಜರಿದ್ದರು.
ಜಿಲ್ಲಾಧ್ಯಕ್ಷ ಚಿ.ನಿ. ಪುರುಷೋತ್ತಮ್ ಮಾತನಾಡಿ, ಜಿಲ್ಲೆಯಲ್ಲಿಯೇ ಕೊರಟಗೆರೆ ತಾಲ್ಲೂಕು ಪತ್ರಕರ್ತರ ಸಂಘ ಅತ್ಯಂತ ಹೆಚ್ಚು ಜನಮನ್ನಣೆ ಗಳಿಸಿದೆ. ಯಾವುದೆ ಸಮಸ್ಯೆಯ ಬಗ್ಗೆ ನಿರ್ಭಯವಾಗಿ, ನಿರ್ಭೀತಿಯಿಂದ ವರದಿ ಮಾಡುತ್ತೀರಿ. ನಿಮ್ಮ ಸೇವೆ ಹೀಗೆ ಮುಂದುವರೆಯಲಿ. ಬಡವರ ಕಷ್ಟಕ್ಕೆ ಸದಾ ಸ್ಪಂದಿಸುವ ಕೆಲಸ ಮಾಡಲಿ ಎಂದರು.
ವರದಿ : ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz