ಕೊರಟಗೆರೆ: ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಬರುವ ಚೀಲಗನಹಳ್ಳಿ ಮತ್ತು ಅಕ್ಕಿರಾಂಪುರ ಗ್ರಾಮಗಳ ಸುತ್ತಮುತ್ತಲು ಸಾಕುಪ್ರಾಣಿಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆಯನ್ನು ಸುರಕ್ಷಿತವಾಗಿ ಸೆರೆ ಹಿಡಿಯುವಲ್ಲಿ ಕೊರಟಗೆರೆ ಅರಣ್ಯ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಸ್ಥಳೀಯ ಸಾರ್ವಜನಿಕರು ಮತ್ತು ರೈತರು ಕೊರಟಗೆರೆ ಅರಣ್ಯ ಇಲಾಖೆಯ ವಲಯ ಅರಣ್ಯ ಅಧಿಕಾರಿಗಳಿಗೆ ರೈತರ ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆಯನ್ನು ಸೆರೆ ಹಿಡಿಯಲು ಮನವಿ ಮಾಡಿದ್ದರು.ಹಾಗೂ ಈ ಹಿಂದೆ ಹಲವು ಬಾರಿ ದಿನಪತ್ರಿಕೆಗಳಲ್ಲಿ ಮತ್ತು ದೃಶ್ಯ ಮಾಧ್ಯಮದಲ್ಲಿ ವರದಿಯನ್ನು ಸಹ ಮಾಡಲಾಗಿತ್ತು ತಕ್ಷಣವೇ ಎಚ್ಚೆತ್ತುಕೊಂಡ ಕೊರಟಗೆರೆ ಅರಣ್ಯ ಅಧಿಕಾರಿ ಸುರೇಶ್ ಚಿರತೆಯು ಓಡಾಡುವ ಸ್ಥಳವನ್ನು ಅವರ ಮಾರ್ಗದರ್ಶನದಂತೆ ಅಕ್ಕಿರಾಂಪುರ-ಚೀಲಗಾನಹಳ್ಳಿ ಗ್ರಾಮಗಳ ತೊರೆಯ ಪಕ್ಕದಲ್ಲಿ ಬೋನ್ ಇಡಲಾಗಿತ್ತು.
ತಡರಾತ್ರಿ ಆಹಾರವನ್ನು ಹುಡುಕಿಕೊಂಡು ಬಂದಂತಹ ಚಿರತೆಯು ಬೋನಿನೊಳಗೆ ಬಿದ್ದಿರುತ್ತದೆ. ಕೂಡಲೇ ಮಾಹಿತಿಯನ್ನು ತಿಳಿದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸುರಕ್ಷಿತವಾಗಿ ಚಿರತೆಯನ್ನು ರಕ್ಷಿಸಿ, ದೂರದ ದಟ್ಟವಾದ ಅರಣ್ಯ ಪ್ರದೇಶಕ್ಕೆ ಚಿರತೆಯನ್ನು ಬಿಡುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಸಂದರ್ಭದಲ್ಲಿ ವಲಯ ಅರಣ್ಯಾಧಿಕಾರಿಗಳಾದ ಎಚ್.ಎಂ.ಸುರೇಶ್, ಉಪವಲಯ ಅರಣ್ಯ ಅಧಿಕಾರಿ ನಾಗರಾಜು, ಅರಣ್ಯ ರಕ್ಷಕ ಬಿ.ಸಿ.ಮಂಜುನಾಥ್, ನರಸಿಂಹಯ್ಯ, ಕಾವಲುಗಾರ ನಾರಾಯಣಪ್ಪ ಹಾಗೂ ಊರಿನ ಗ್ರಾಮಸ್ಥರು,ಸಾರ್ವಜನಿಕರು ಸ್ಥಳದಲ್ಲಿದ್ದರು.
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz