nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026

    ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?

    March 4, 2026
    Facebook Twitter Instagram
    ಟ್ರೆಂಡಿಂಗ್
    • ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್
    • ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
    • ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
    • ಖಮೇನಿ  ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ
    • ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಾಸಕ ಸುರೇಶ್‌ ಬಾಬು ಸೂಚನೆ
    • ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?
    • ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ
    • ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಣ್ಣಾ ಡಿಎಂಕೆ ಜಗಳ ಹಾದಿ-ಬೀದಿ ರಂಪ
    ರಾಷ್ಟ್ರೀಯ ಸುದ್ದಿ July 12, 2022

    ಅಣ್ಣಾ ಡಿಎಂಕೆ ಜಗಳ ಹಾದಿ-ಬೀದಿ ರಂಪ

    By adminJuly 12, 2022No Comments2 Mins Read
    dmk

    ತಮಿಳುನಾಡಿನ ಅಣ್ಣಾ ಡಿಎಂಕೆಯ ನಾಯಕತ್ವಕ್ಕಾಗಿ ವಿಚಾರವಾಗಿ ಇಂದು ನಡೆದ ಬೆಳವಣಿಗೆಗಳು ಹಾದಿ-ಬೀದಿ ರಂಪಕ್ಕೆ ಸಾಕ್ಷಿಯಾಗಿದೆ. ಪಕ್ಷದ ಹಂಗಾಮಿ ಪ್ರಧಾನ ಕಾಂiiದರ್ಶಿಯಾಗಿ ಎಡಪ್ಪಾಡಿ ಪಳನಿ ಸ್ವಾಮಿ ಆಯ್ಕೆಯಾದ ಬೆನ್ನಲ್ಲೇ ಈ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿದ್ದ ಮಾಜಿ ಮುಖ್ಯಮಂತ್ರಿ ಪಳನಿ ಸ್ವಾಮಿ ಬಣದ ಆಕ್ರೋಶ ಭುಗಿಲೆದ್ದಿದೆ. ಪನ್ನೀರ್ ಸೆಲ್ವಂ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಜಾಗೊಳಿಸುವ ನಿuಯವನ್ನು ಸಾಮಾನ್ಯ ಸಭೆಯಲ್ಲಿ ಕೈಗೊಳ್ಳಲಾಗಿದೆ.

    ಚೆನ್ನೈನಲ್ಲಿ ಇಂದು ನಡೆದ ಸಾಮಾನ್ಯ ಸಭೆಯಲ್ಲಿ ಮಾಜಿ ಸಚಿವ ಆರ್.ಬಿ. ಉದಯ್‌ಕುಮಾರ್ ಹಂಗಾಮಿ ಅಧ್ಯಕ್ಷರಾಗಿ ಎಡಪ್ಪಾಡಿ ಪಳನಿ ಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಿಸಿದರು.


    Provided by
    Provided by

    ಈ ಮೂಲಕ ಕಾನೂನು ಹೋರಾಟದಲ್ಲಿ ಪಳನಿ ಸ್ವಾಮಿ ಮೇಲುಗೈ ಸಾಧಿಸಿದ್ದು, ಮಾಜಿ ಮುಖ್ಯಮಂತ್ರಿ ಜಯಲಲಿತಾ ನಿಧನರಾದ ಐದೂವರೆ ವರ್ಷದ ಬಳಿಕ ಪಳನಿ ಸ್ವಾಮಿ ಅವರು ಅಣ್ಣಾ ಡಿಎಂಕೆ ಪಕ್ಷವನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

    ಅಣ್ಣಾ ಡಿಎಂಕೆ ಸಾಮಾನ್ಯ ಮಂಡಳಿ ಸಭೆಗೆ ತಡೆ ನೀಡುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಪನ್ನಿರ್ ಸೆಲ್ವಂ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ತಿರಸ್ಕರಿಸಿದ್ದ ಬೆನ್ನಲ್ಲೇ ಪಳನಿ ಸ್ವಾಮಿ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

    ಇದರಿಂದಾಗಿ ಸಾಮಾನ್ಯ ಮಂಡಳಿ ಸಭೆಯಲ್ಲಿ ಪ್ರತಿಸ್ಪರ್ಧಿ ಮುಖಂಡ ಎಡಪ್ಪಾಡಿ ಅವರನ್ನು ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲು ನ್ಯಾಯಾಲಯ ಅನುವು ಮಾಡಿಕೊಟ್ಟಿತ್ತು.ನ್ಯಾಯಮೂರ್ತಿ ಕೃಷ್ಣನ್ ಅವರು ಇಂದು ಬೆಳಿಗ್ಗೆ ತೀರ್ಪು ನೀಡಿದ್ದರಿಂದ ಪಕ್ಷದ ಸಾಮಾನ್ಯ ಮಂಡಳಿ ಸಭೆ ನಡೆಸಲು ಪಳನಿಸ್ವಾಮಿ ಬಣಕ್ಕೆ ಅನುಮತಿ ನೀಡಿದ್ದರು.
    ಈ ತಿಂಗಳ ೮ ರಂದು ಪಳನಿಸ್ವಾಮಿ ಹಾಗೂ ಎಡಪ್ಪಾಡಿ ಬಣದ ವಕೀಲರ ವಾದ ಪ್ರತಿವಾದ ಅಲಿಸಿದ ನಂತರ ನ್ಯಾಯಮೂರ್ತಿಗಳು ಇಂದಿಗೆ ತೀರ್ಪು ಕಾಯ್ದಿರಿಸಿದ್ದರು.

    ಈ ಮೊದಲು ೪ ತಿಂಗಳ ಅವಧಿಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಆಯ್ಕೆಗಾಗಿ ಚುನಾವಣೆ ನಡೆಸಲು ಸಾಮಾನ್ಯ ಮಂಡಳಿ ಸಭೆ ಮುಂದಾಗಿದ್ದ ಸಂದರ್ಭದಲ್ಲಿ ಪನ್ನಿರ್ ಸೆಲ್ವಂ ಈ ಸಭೆಯನ್ನು ಬಹಿಷ್ಕರಿಸಿದ್ದರು.ಭ್ರಷ್ಟಚಾರದ ಪ್ರಕರಣದಲ್ಲಿ ಜಯಲಲಿತ ಮುಖ್ಯಮಂತ್ರಿಯಾಗಿದ್ದ ವೇಳೆ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಪನ್ನಿರ್ ಸೆಲ್ವಂ ಅವರು ಎರಡು ಬಾರಿ ಮುಖ್ಯ ಹುದ್ದೆಯನ್ನು ಅಲಂಕರಿಸಿದ್ದರು. ಆದರೆ ಈಗ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸುವಲ್ಲಿ ವಿಫಲರಾಗಿದ್ದಾರೆ.

    ಬೆಂಬಲಿಗರ ನಡುವೆ ಮಾರಾಮಾರಿ

    ಪಳನಿ ಸ್ವಾಮಿ ಹಾಗೂ ಪನ್ನಿರು ಸೆಲ್ವಂ ಬಣಗಳ ನಡುವೆ ಮಾರಾಮಾರಿ ನಡೆದಿದ್ದು, ಚೆನ್ನೈನ ಪಕ್ಷದ ಕಚೇರಿಯ ಮುಂಭಾಗ ಹೈಡ್ರಾಮಾಕ್ಕೆ ಸಾಕ್ಷಿಯಾಗಿತ್ತು. ಎರಡು ಗುಂಪಿನ ಕಾರ್ಯಕರ್ತರು ರಸ್ತೆಯಲ್ಲೇ ಬಡಿದಾಡಿಗೊಂಡ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ನಾಯಕತ್ವ ವಿಚಾರವಾಗಿ ಕಲ್ಲು, ದೊಣ್ಣೆಗಳಿಂದ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ. ಉದ್ರಿಕ್ತ ಕಾರ್ಯಕರ್ತರು ಕಚೇರಿ ಬಾಗಿಲನ್ನು ಧ್ವಂಸಗೊಳಿಸಿದ್ದಾರೆ.
    ತಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿರುವ ಕ್ರಮಕ್ಕೆ ಪನ್ನಿರ್ ಸೆಲ್ವಂ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಈ ನಿರ್ಧಾರ ಏಕಪಕ್ಷೀಯವಾಗಿದೆ. ಈ ಕ್ರಮ ಪಕ್ಷದ ಕ್ರಮ ವಿರುದ್ಧವಾಗಿದೆ ಎಂದು ಗುಡುಗಿದ್ದಾರೆ.

    ವರದಿ ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಮ್ಮ ನಡುವಿನ ಬಾಂಧವ್ಯದ ಕುರಿತು ಹಬ್ಬಿರುವ ಊಹಾಪೋಹಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.…

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026

    ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?

    March 4, 2026

    ಖಮೇನಿ  ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ

    March 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.