nammatumakuru

    Subscribe to Updates

    Get the latest creative news from FooBar about art, design and business.

    What's Hot

    ಖ್ಯಾತ ಖಳನಟ ಹರೀಶ್ ರಾಯ್  ನಿಧನ

    November 6, 2025

    ಬೀದರ್ | 12 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

    November 6, 2025

    ಕುಣಿಗಲ್ | ಬೈಕ್‌ ಗೆ ಕಾರು ಡಿಕ್ಕಿ: ದಂಪತಿಯ ದಾರುಣ ಸಾವು

    November 6, 2025
    Facebook Twitter Instagram
    ಟ್ರೆಂಡಿಂಗ್
    • ಖ್ಯಾತ ಖಳನಟ ಹರೀಶ್ ರಾಯ್  ನಿಧನ
    • ಬೀದರ್ | 12 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ
    • ಕುಣಿಗಲ್ | ಬೈಕ್‌ ಗೆ ಕಾರು ಡಿಕ್ಕಿ: ದಂಪತಿಯ ದಾರುಣ ಸಾವು
    • ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ
    • ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ
    • ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸ್ಪರ್ಧಾ ಕಾರ್ಯಕ್ರಮ ಮುಂದೂಡಿಕೆ
    • ನ.10: ಶ್ರೀ ಗುರುಸಂಗಮೇಶ್ವರಸ್ವಾಮಿ ಅವರ ಲಕ್ಷದೀಪೋತ್ಸವ ಆಚರಣೆ
    • ವಿದ್ಯಾರ್ಥಿ ವೇತನ: ಬಯೋಮೆಟ್ರಿಕ್ ಇ–ದೃಢೀಕರಣ ಕಡ್ಡಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ: ಅಧ್ಯಕ್ಷ ಗೊಟಬಯ ರಾಜಪಕ್ಸೆ ಮಾಲ್ಡೀವ್ಸ್‌ ಗೆ ಪಲಾಯನ
    ಸ್ಪೆಷಲ್ ನ್ಯೂಸ್ July 14, 2022

    ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ: ಅಧ್ಯಕ್ಷ ಗೊಟಬಯ ರಾಜಪಕ್ಸೆ ಮಾಲ್ಡೀವ್ಸ್‌ ಗೆ ಪಲಾಯನ

    By adminJuly 14, 2022No Comments2 Mins Read
    srilanka

    ಆರ್ಥಿಕ ದಿವಾಳಿಯಿಂದ ಜರ್ಜರಿತಗೊಂಡಿರುವ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಅರಾಜಕತೆ, ದೊಂಬಿ ಗಂಭೀರ ಸ್ವರೂಪ ಪಡೆದುಕೊಂಡಿದ್ದು ಇಂದು ದೇಶದಲ್ಲಿ ಹಠಾತ್ತಾನೆ ತುರ್ತು ಘೋಷಣೆ ಮಾಡಲಾಗಿದೆ. ಹಂಗಾಮಿ ಅಧ್ಯಕ್ಷರಾಗಿ ರನಿಲ್ ವಿಕ್ರಂ ಸಿಂಘೆ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ದೇಶದಾದ್ಯಂತ ತುರ್ತುಪರಿಸ್ಥಿತಿ ಘೋಷಿಸಿದ್ದಾರೆ.

    ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ತಮ್ಮ ಪತ್ನಿ ಹಾಗೂ ಇಬ್ಬರು ಅಂಗರಕ್ಷಕ ಜೊತೆ ಮಾಲ್ಡೀವ್ಸ್‌ಗೆ ಪಲಾಯನ ಮಾಡಿರುವ ಸುದ್ಧಿ ತಿಳಿಯುತ್ತಿದ್ದಂತೆ ಜನಾಕ್ರೋಶ ಭುಗಿಲೆದ್ದಿದೆ.


    Provided by
    Provided by

    ಗೊಟಬಯ ರಾಜೀನಾಮೆಗೆ ಪಟ್ಟು ಹಿಡಿದು ಇಂದು ಸಾವಿರಾರು ಜನರು ರಾಜಧಾನಿ ಕೊಲಂಬೊ ನಗರದ ರಸ್ತೆಗಿಳಿದು ಉಗ್ರ ಪ್ರತಿಭಟನೆ ನಡೆಸಿದರು. ಇದರಿಂದಾಗಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.

    ರೊಚ್ಚಿಗೆದ್ದ ಗುಂಪು ಶ್ರೀಲಂಕಾ ಸಂಸತ್ತಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಭರ್ಜರಿ ಜಟಾಪಟಿ ನಡೆಯಿತು. ಏಕಾಏಕಿ ಆಕ್ರೋಶಗೊಂಡ ಜನರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು. ಪರಿಸ್ಥಿತಿ ಕೈ ಮೀರುತ್ತಿದ್ದಂತೆ ಪೊಲೀಸರು ಲಾಠಿ ಪ್ರಹಾರ ಅಶ್ರುವಾಯು ಸಿಡಿಸಿದರು. ಆದರೆ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಕಾರಣ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಹಿಂಸಾಚಾರದಲ್ಲಿ ೧೦೦ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

    ಮುನ್ನೆಚ್ಚರಿಕೆ ಕ್ರಮವಾಗಿ ಶ್ರೀಲಂಕಾದ ಪಶ್ಚಿಮ ಪ್ರಾಂತ್ಯದಲ್ಲಿ ಕರ್ಫ್ಯೂ ಹೇರಲಾಗಿದೆ. ಸಮಾಜಘಾತುಕ ಕೃತ್ಯಗಳಲ್ಲಿ ತೊಡಗಿದರೆ, ಅವರನ್ನು ತಕ್ಷಣ ಬಂಧಿಸುವಂತೆ ಹಂಗಾಮಿ ಅಧ್ಯಕ್ಷ ರನಿಲ್ ವಿಕ್ರಂ ಸಿಂಘೆ ಆದೇಶ ಹೊರಡಿಸಿದ್ದಾರೆ.

    ಮತ್ತೊಂದೆಡೆ ಸಾವಿರಾರು ಪ್ರತಿಭಟನಾಕಾರರ ಗುಂಪು ಪ್ರಧಾನ ಮಂತ್ರಿ ಕಚೇರಿ ಎದುರು ಭಾರಿ ಪ್ರತಿಭಟನೆ ನಡೆಸಿದ್ದಾರೆ.
    ಹದಗೆಟ್ಟಿರುವ ದೇಶದ ಆರ್ಥಿಕ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ಗೊಟಬಯ ರಾಜಪಕ್ಸೆ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ದೇಶದ ಸಂಸತ್ತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ. ಜನರು ಬೀದಿಗಿಳಿದು ವ್ಯಾಪಕ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ಉದ್ರಿಕ್ತ ಪರಿಸ್ಥಿತಿ ನಿರ್ಮಾಣವಾಗಿದ್ದು, ರಾಜಧಾನಿ ಕೊಲಂಬೊದಲ್ಲಿ ಭದ್ರತೆ ಕೈಗೊಳ್ಳಲಾಗಿದೆ.

    ದೇಶದಲ್ಲಿ ತುರ್ತು ಪರಿಸ್ಥಿತಿ ವಿಧಿಸಿರುವ ಬಗ್ಗೆಯೂ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ. ಪ್ರಧಾನಿ ರನಿಲ್ ವಿಕ್ರಂ ಸಿಂಘೆ ತಮ್ಮ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ವೆನೆಜುವೆಲಾದ ಮಾರಿಯಾ ಕೊರಿನಾ ಮಚಾದೊ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ

    October 10, 2025

    ಟ್ರಂಪ್‌ ಅವರದು ‘ಪುಂಡ’ ವ್ಯಾಪಾರ ನೀತಿ: ಭಾರತದ ಪರ ನಿಂತ ಚೀನಾ!

    August 8, 2025

    ಅವಳ ತುಟಿ ಮಷಿನ್‌ ಗನ್‌: ಶ್ವೇತಭವನದ ಪತ್ರಿಕಾ ಕಾರ್ಯದರ್ಶಿಯ ಸೌಂದರ್ಯ ಹೊಗಳಿದ ಟ್ರಂಪ್!

    August 4, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಖ್ಯಾತ ಖಳನಟ ಹರೀಶ್ ರಾಯ್  ನಿಧನ

    November 6, 2025

    ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಖಳನಟ, ಪೋಷಕ ನಟ ಹರೀಶ್ ರಾಯ್   ಇಂದು ಬೆಳಿಗ್ಗೆ  ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಕ್ಯಾನ್ಸರ್‌…

    ಬೀದರ್ | 12 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

    November 6, 2025

    ಕುಣಿಗಲ್ | ಬೈಕ್‌ ಗೆ ಕಾರು ಡಿಕ್ಕಿ: ದಂಪತಿಯ ದಾರುಣ ಸಾವು

    November 6, 2025

    ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ

    November 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.