nammatumakuru

    Subscribe to Updates

    Get the latest creative news from FooBar about art, design and business.

    What's Hot

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026
    Facebook Twitter Instagram
    ಟ್ರೆಂಡಿಂಗ್
    • ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!
    • ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!
    • ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ
    • ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ
    • ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ
    • ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ!
    • ಬೇಸಿಗೆ ಕಾಲದಲ್ಲಿ ಲಿಂಬೆಹಣ್ಣುಗಳನ್ನು ದೀರ್ಘಕಾಲದವರೆಗೆ ತಾಜಾವಾಗಿಡುವುದು ಹೇಗೆ?
    • ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನುಗು ಜಲಾಶಯ ಭರ್ತಿ ಬಾಗೀನ ಅರ್ಪಿಸಿದ ಅನಿಲ್ ಚಿಕ್ಕಮಾದು, ಹರ್ಷವರ್ಧನ್
    ಜಿಲ್ಲಾ ಸುದ್ದಿ July 16, 2022

    ನುಗು ಜಲಾಶಯ ಭರ್ತಿ ಬಾಗೀನ ಅರ್ಪಿಸಿದ ಅನಿಲ್ ಚಿಕ್ಕಮಾದು, ಹರ್ಷವರ್ಧನ್

    By adminJuly 16, 2022No Comments2 Mins Read
    bagina

    ಸರಗೂರು: ತಾಲ್ಲೂಕಿನ ನುಗು ಜಲಾಶಯ ಭರ್ತಿಯಾದ ಹಿನ್ನೆಲೆ ಹೆಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಹಾಗೂ ನಂಜನಗೂಡು ಶಾಸಕ ಹರ್ಷವರ್ಧನ್ ಜೊತೆಯಾಗಿ ಬಾಗೀನ ಅರ್ಪಿಸಿದರು.

    ತಾಲ್ಲೂಕಿನ ನುಗು ಜಲಾಶಯಕ್ಕೆ ಶುಕ್ರವಾರ ಇಬ್ಬರು ಶಾಸಕರು ಭೇಟಿ ನೀಡಿದ ಶಾಸಕರು ಗಣಪತಿ, ಲಕ್ಷ್ಮಿ ದೇವಿಯ ವಿಗ್ರಹವಿಟ್ಟು ಪೂರ್ಣಕುಂಭ ಕಳಶದೊಂದಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಜಲಾಶಯಕ್ಕೆ ಬಾಗೀನ ಅರ್ಪಿಸಿದರು.


    Provided by
    Provided by

    ಇದೇ ವೇಳೆ ಮಾತನಾಡಿದ ಶಾಸಕ ಅನಿಲ್ ಚಿಕ್ಕಮಾದು, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಇಂದಿನಿಂದಲೇ ನುಗು ಮೇಲ್ದಂಡೆ ನಾಲೆಗೆ ನೀರು ಹರಿಸಲಾಗುವುದು. ಜಲಾಶಯದ ಎಡ ಮತ್ತು ಬಲದಂಡೆ ನಾಲೆಗಳಲ್ಲಿನ ಹೂಳು, ಜಂಗಲ್ ಕಟ್ಟಿಂಗ್ ಮಾಡಿಸಿ ನಂತರ ಆಗಸ್ಟ್ 5ರಿಂದ ನೀರು ಹರಿಸಲಾಗುವುದು ಎಂದರು.

    ನುಗು ಅತಿಥಿ ಗೃಹ, ಜಲಾಶಯವನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ಬಿರ್ವಾಳ್‍ನಿಂದ ಮುಳ್ಳೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ, ಹಲಸೂರಿನಿಂದ ಮುಳ್ಳೂರು ಸೇತುವೆವರೆಗೂ ರಸ್ತೆ ಹದಗೆಟ್ಟಿದ್ದು, ಅದನ್ನು ಶೀಘ್ರದಲ್ಲೇ ಸರಿಪಡಿಸಲು ಕ್ರಮವಹಿಸಲಾಗುವುದು. ಜೊತೆಗೆ ನುಗು ಜಲಾಶಯದ ನಿರ್ವಹಣೆಗಾಗಿ ಶಾಶ್ವತವಾಗಿ ನುಗು ಅತಿಥಿ ಗೃಹದಲ್ಲಿ ಎಂಜಿನಿಯರ್ ಉಪ ವಿಭಾಗದ ಕಚೇರಿಯನ್ನು ತೆರೆಯಲು ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.

    ಹಲಸೂರು ಅಣೆಕಟ್ಟು ವ್ಯಾಪ್ತಿಯಲ್ಲಿ 5110, ಮೇಲ್ದಂಡೆ ನಾಲೆ ವ್ಯಾಪ್ತಿಯಲ್ಲಿ 13 ಸಾವಿರ ಎಕರೆ ಅಚ್ಚುಕಟ್ಟು ಪ್ರದೇಶವಿದ್ದು, ಇದರಿಂದ ತುಂಬಾ ರೈತರಿಗೆ ಅನುಕೂಲವಾಗುತ್ತಿದೆ. ಹೀಗಾಗಿ ಅಧಿಕಾರಿಗಳು ಜಲಾಶಯ ಮತ್ತು ನಾಲೆಗಳ ನಿರ್ವಹಣೆಗೆ ಒತ್ತು ನೀಡಬೇಕು. ನಾಲೆಗಳಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತಂತೆ ಅಧಿವೇಶನದಲ್ಲಿ ಎಂದು ತಿಳಿಸಿದರು.

    ಬಳಿಕ ಮಾತನಾಡಿದ ನಂಜನಗೂಡು ಶಾಸಕ ಹರ್ಷವರ್ಧನ್, ಉತ್ತಮ ಮಳೆಯಾಗಿ ನುಗು ಜಲಾಶಯ ಭರ್ತಿಯಾಗಿರುವುದು ಸಂತಸದ ವಿಚಾರ. ಶೀಘ್ರದಲ್ಲೇ ನುಗು ಏತ ನೀರಾವರಿಗೆ ಚಾಲನೆ ನೀಡಲಾಗುವುದು. ಇನ್ನು 11 ತಿಂಗಳೊಳಗೆ ಕುಡಿಯುವ ನೀರಿನ ಸಮಸ್ಯೆ ಇನ್ನಿತರ ಸಮಸ್ಯೆಗಳನ್ನು ಸಂಪೂರ್ಣವಾಗಿ ಬಗೆಹರಿಸಲು ಪ್ರಯತ್ನ ಮಾಡುತ್ತೇನೆ. ಇದಲ್ಲದೆ ನುಗು ಜಲಾಶಯದಂತಹ ಉತ್ತಮ ಪರಿಸರವಿರುವ ಜಾಗವನ್ನು ಸದ್ಬಳಕೆ ಮಾಡಿಕೊಂಡು ಜನರಿಗೆ ಅನುಕೂಲವಂತೆ ಮಾಡಬೇಕು ಎಂದರು.

    ಇದೇ ಸಂದರ್ಭದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ರೈತರು ತಮ್ಮ ಅಳಲನ್ನು ಶಾಸಕರುಗಳ ಮುಂದೆ ಪ್ರಸ್ತಾಪಿಸಿದರು. ನಂತರ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಅನಿಲ್ ಚಿಕ್ಕಮಾದು ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದರು. ಕೃಷಿ ಇಲಾಖೆ ಅಧಿಕಾರಿ ರಂಗಸ್ವಾಮಿ ಅವರಿಗೆ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಜಂಟಿ ಸಮೀಕ್ಷೆ ನಡೆಸುವಂತೆ ಸಲಹೆ ನೀಡಿದರು.

    ಸ್ಥಳದಲ್ಲಿ ರೈತ ಮುಖಂಡರಾದ ಶಂಭುಲಿಂಗನಾಯಕ, ಯೂತ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲಶಿವರಾಜು.ಚಾಮಲಾಪುರ ಗಿರೀಶ್, ಬಿರ್ವಾಳ್ ಬಸವರಾಜು, ಚಿಕ್ಕಣ್ಣ, ಗೋವಿಂದಚಾರ್, ಪುರದಕಟ್ಟೆ ಬಸವರಾಜು, ಸಿದ್ದರಾಜು, ಮಹೇಶ್, ವಾಣಿ, ಮಂಜು, ಗ್ರಾಪಂ ಸದಸ್ಯ ಹಾದನೂರುಪ್ರಕಾಶ್. ರವಿಕುಮಾರ್, ಡಿ.ಪಿ.ನಟರಾಜು, ಕುಂಬ್ರಳ್ಳಿ ಸುಬ್ಬಣ್ಣ, ಕಳಸೂರು ಬಸವರಾಜು.ಬಿ.ಎಸ್.ಮಹದೇವಪ್ಪ, ಶಿವರುದ್ರ, ನುಗು ಜಲಾಶಯದ ಇಇ ಎಂ.ಬಿ.ಪಾಟೀಲ್, ಎಇಇ ಎ.ಸಿ.ಕೃಷ್ಣ, ಎಇ ದೀಪಕ್, ಶ್ರೀಪತಿ, ಅಶೋಕ್ ಮುಂತಾದವರು ಹಾಜರಿದ್ದರು.

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!

    May 26, 2026

    ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ!

    May 26, 2026

    ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

    May 23, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ನವದೆಹಲಿ/ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆ’ಗೆ ಕೇಂದ್ರ ಗೃಹ ಸಚಿವಾಲಯ…

    ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ

    May 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.