ತುಮಕೂರು: ಬಹಿರ್ದೆಸೆಗೆ ಹೋಗಿದ್ದ ವೇಳೆ ಕಾಲು ಜಾರಿ ಕೆರೆಗೆ ಬಿದ್ದು ಯುವಕನೋರ್ವ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಮಾಡ್ಗಾನಹಟ್ಟಿಯಲ್ಲಿ ನಡೆದಿದೆ.
ಶೆಟ್ಟಿಹಳ್ಳಿ ತಾಂಡಾದ 22 ವರ್ಷ ವಯಸ್ಸಿನ ಕುಮಾರ್ ಮೃತ ಯುವಕ ಎಂದು ಗುರುತಿಸಲಾಗಿದ್ದು, ಮನೆಯಿಂದ ಹೊರಗೆ ಹೋಗಿದ್ದ ಯುವಕ ಸಾಕಷ್ಟು ಹೊತ್ತಿನವರೆಗೂ ವಾಪಸ್ ಬಾರದೇ ಇದ್ದ ವೇಳೆ ಕುಟುಂಬಸ್ಥರು ಹುಟುಕಾಟ ನಡೆಸಿದ್ದಾರೆ.
ಈ ವೇಳೆ ಕೆರೆ ದಡ್ಡದಲ್ಲಿ ಮೃತನ ಚಪ್ಪಲಿ ಪತ್ತೆಯಾಗಿದ್ದು, ಅನುಮಾನಗೊಂಡು ಕೆರೆ ನೀರಿನಲ್ಲಿ ಹುಡುಕಾಡಿದಾಗ ಮೃತದೇಹ ಪತ್ತೆಯಾಗಿದೆ. ಮಧುಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ವರದಿ: ರಾಜೇಶ್ ರಂಗನಾಥ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz