nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಸೇವಾ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಬೀಳ್ಕೊಡುಗೆ

    August 29, 2026

    (ಬಳ್ಳಿ ಕಾಡು ಹಣ್ಣು ) ಬ್ಲ್ಯಾಕ್ ಬೆರಿ ಬೀಜಗಳ ರಹಸ್ಯ ಮತ್ತು ಅವುಗಳ ಅದ್ಭುತ ಆರೋಗ್ಯ ಪ್ರಯೋಜನಗಳು….

    August 29, 2026

    ಸರಗೂರು: 9ನೇ ವಾರ್ಡ್ ಅಭಿವೃದ್ಧಿಗೆ ₹55 ಲಕ್ಷ ಅನುದಾನ; ಚಿಕ್ಕದೇವಮ್ಮ ದೇವಸ್ಥಾನ ರಸ್ತೆ ಅಭಿವೃದ್ಧಿಗೆ ವಿಶೇಷ ಆದ್ಯತೆ

    August 29, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಸೇವಾ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಬೀಳ್ಕೊಡುಗೆ
    • (ಬಳ್ಳಿ ಕಾಡು ಹಣ್ಣು ) ಬ್ಲ್ಯಾಕ್ ಬೆರಿ ಬೀಜಗಳ ರಹಸ್ಯ ಮತ್ತು ಅವುಗಳ ಅದ್ಭುತ ಆರೋಗ್ಯ ಪ್ರಯೋಜನಗಳು….
    • ಸರಗೂರು: 9ನೇ ವಾರ್ಡ್ ಅಭಿವೃದ್ಧಿಗೆ ₹55 ಲಕ್ಷ ಅನುದಾನ; ಚಿಕ್ಕದೇವಮ್ಮ ದೇವಸ್ಥಾನ ರಸ್ತೆ ಅಭಿವೃದ್ಧಿಗೆ ವಿಶೇಷ ಆದ್ಯತೆ
    • ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್
    • ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ
    • ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ
    • 175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಆರ್. ಅಶೋಕ್ ಆಗ್ರಹ
    • ತಂದೆ—ತಾಯಿ, ಅಕ್ಕ—ಭಾವನ ಸ್ಮರಣಾರ್ಥ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ವಾರ್ಡ್ ನಿರ್ಮಿಸಿದ ಉದ್ಯಮಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆಯ ಅಗ್ರಹಾರ ಕೆರೆ ಬಿರುಕು : ಜನ ಹಾಗೂ ಜಾನುವಾರುಗಳ ಜೀವಕ್ಕೆ ಕಾದಿದೆ ಭಾರೀ ಕಂಟಕ
    ಕೊರಟಗೆರೆ July 20, 2022

    ಕೊರಟಗೆರೆಯ ಅಗ್ರಹಾರ ಕೆರೆ ಬಿರುಕು : ಜನ ಹಾಗೂ ಜಾನುವಾರುಗಳ ಜೀವಕ್ಕೆ ಕಾದಿದೆ ಭಾರೀ ಕಂಟಕ

    By adminJuly 20, 2022No Comments3 Mins Read
    korattegerre

    ಕೊರಟಗೆರೆ: ಅಗ್ರಹಾರದ ಕೆರೆ ಏರಿ ಬಿರುಕು ಬಂದಿದ್ದು ಜನರಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿಸಿದೆ. ಅಗ್ರಹಾರ ಜಂಪೇನಹಳ್ಳಿ ಸೇರಿದಂತೆ ಕೊರಟಗೆರೆ ಪಟ್ಟಣದ ಜನತೆಗೆ ಭಾರೀ ಗಂಡಾತರ ಕಾದಿದೆ. ಅಗ್ರಹಾರ ಜಂಪೇನಹಳ್ಳಿ ಭಾಗದ ರೈತರಿಗೆ ಸೇರಿದ ತೋಟಗಳೆಲ್ಲ ಸಂಪೂರ್ಣ ನಾಶವಾಗುವ ಭೀತಿಯಲ್ಲಿ ಜನರು ಗಾಬರಿಗೊಂಡಿದ್ದಾರೆ.

    ಕೊರಟಗೆರೆ ಪಟ್ಟಣದ ಶೇ.90 ಭಾಗದಷ್ಟು ಜನರಿಗೆ ಕುಡಿಯುವ ನೀರಿನ ಮೂಲ ಮಾರ್ಗ ಅಗ್ರಹಾರದ ಕೆರೆ ಆಗಿದೆ. ಆದರೆ ಈ ಕೆರೆ ಏರಿ ಬಿರುಕು ಮೂಡಿರುವುದು ಜನರಲ್ಲಿ ಆತಂಕವನ್ನು ಸೃಷ್ಟಿಸಿದೆ. ಕೆರೆಗಳ ಜವಾಬ್ದಾರಿ ಹೊತ್ತಿರುವ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಗಳ ನಿರ್ಲಕ್ಷತನ ಇದಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

    ಕೆರೆ ಏರಿ ಬಿರುಕು ಸುತ್ತಲೂ ಬೆಳೆದಿರುವ ದಟ್ಟ ಅರಣ್ಯದಿಂದಾಗಿ, ಗಿಡ ಮರಗಳಿಂದ ತುಂಬಿರುವ ಕೆರೆ ಏರಿ ಗಿಡ ಮರಗಳ ಬೇರಿನಿಂದ ಕೆರೆಯ ಏರಿ ಬಿರುಕು ಬಿಟ್ಟಿದೆ. ಇದನ್ನು ಕಂಡೂ ಕಾಣದಂತೆ ಇರುವ ಎಂಜಿನಿಯರ್ಗಳ ನಿರ್ಲಕ್ಷತನ ಎಷ್ಟರ ಮಟ್ಟಿಗೆ ಸರಿ ಎಂದು ಸ್ಥಳೀಯ ಜನರು ಹಾಗೂ ರೈತರು ಆಕ್ರೋಶ ಭರಿತರಾಗಿದ್ದಾರೆ. ಎಷ್ಟು ಬಾರಿ ಸ್ಥಳೀಯರು ಅಧಿಕಾರಿಗಳಿಗೆ ದೂರು ಕೊಟ್ಟರು ಕೆರೆ ಬಗ್ಗೆ ತಲೆಕೆಡಿಸಿಕೊಳ್ಳದ ಪರಿಣಾಮ ಇಂದು ಕೆರೆಯ ಏರಿ ಬಿರುಕು ಬಿಟ್ಟು ಸಮಸ್ಯೆಗೆ ಕಾರಣವಾಗಿದೆ.

    ಇನ್ನೂ ಇಂಜಿನಿಯರ್ ಗಳು ಯಾವುದೇ ಅಧಿಕಾರಿಗಳ ಮಾತಿಗೂ ಬೆಲೆಕೊಡದೆ, ಸ್ಥಳೀಯರ ಮನವಿಗೂ ಮಣಿಯದೇ ಇರುವುದೇ ಈ ಘಟನೆಗೆ ಕಾರಣವಾಗಿದೆ. ಕೆರೆ ಏರಿ ಒಡೆದರೆ 4 ರಿಂದ 5 ಗ್ರಾಮಗಳು ಸೇರಿದಂತೆ ಜನ ಜಾನುವಾರುಗಳು ಸಂಪೂರ್ಣ ನಾಶವಾಗುತ್ತವೆ. ಇದಕ್ಕೆಲ್ಲ ನೇರ ಹೊಣೆ ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್ ಗಳೇ ಆಗಿದ್ದಾರೆ. ತುಕ್ಕು ಹಿಡಿದಂತೆ ಕುಳಿತಿರುವ ಇಂಜಿನಿಯರುಗಳು ಎಷ್ಟು ಬಾರಿ ಮನವಿ ಕೊಟ್ಟರೂ, ಮೇಲಧಿಕಾರಿಗಳು ತಿಳಿಸಿದರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸದೇ ಇರುವುದು ಅವರ ಕರ್ತವ್ಯ ನಿಷ್ಠೆಯ ಬಗ್ಗೆ ತಿಳಿಸುತ್ತದೆ ಎನ್ನುವ ಆಕ್ರೋಶ ಗಳು ಕೇಳಿ ಬಂದಿವೆ.

    ಕೊರಟಗೆರೆ ತಾಲ್ಲೂಕು ತಹಶೀಲ್ದಾರ್ ನಹೀದಾ ಜಮ್ ಜಮ್ ಸ್ಥಳಕ್ಕೆ ಭೇಟಿ ಕೊಟ್ಟು ವರದಿ ಸಲ್ಲಿಸಿದರೂ ಸ್ಥಳಕ್ಕೆ ಬರದ ಇಂಜಿನಿಯರ್ಗಳು ಈಗಲಾದರೂ ಎಚ್ಚೆತ್ತುಕೊಂಡು ಕಾರ್ಯಪ್ರವೃತ್ತರಾಗುತ್ತಾರಾ ಕಾದು ನೋಡಬೇಕಾಗಿದೆ.
    ಅಗ್ರಹಾರ ಸ್ಥಳೀಯ ಸುರೇಂದ್ರಬಾಬು ಮಾತನಾಡಿ, 2009 ರಲ್ಲಿ ಈ ಕೆರೆಯನ್ನು ಸಣ್ಣ ನೀರಾವರಿ ಇಲಾಖೆ ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಕುಡಿಯುವ ನೀರಿಗಾಗಿ ಉಸ್ತುವಾರಿ ವಹಿಸಿಕೊಂಡರು. ಪ್ರಸ್ತುತ ಕೆರೆ ಏರಿ 10ರಿಂದ 15ಕಡೆ ಬಿರುಕು ಬಿಟ್ಟಿದೆ. ಹಾಗೂ ಕಾಡು ಪ್ರಾಣಿಗಳ ವಾಸಸ್ಥಳವಾಗಿದೆ. ಗಿಡ ಮರಗಳು ಬೆಳೆದು ನಿಂತು ದೊಡ್ಡ ಕಾಡಾಗಿ ಮಾರ್ಪಟ್ಟಿದೆ. ಈ ಕೆರೆ ಒಡೆದರೆ 1,200ಎಕರೆ ಜಮೀನು, 150 ಎಕರೆ ಅಡಕೆ ತೋಟ ಸಂಪೂರ್ಣ ನೀರು ಪಾಲಾಗುತ್ತೆ. ಅಲ್ಲದೇ 4 ರಿಂದ 5 ಊರಿನ ಗ್ರಾಮಸ್ಥರು ಹಾಗೂ ಜಾನುವಾರುಗಳು ನಿರಾಶ್ರಿತರಾಗುತ್ತಾರೆ. 25ಲಕ್ಷ ಟೆಂಡರ್ ಆಗಿದೆ ಎಂದರು.

    ಇವರು ಕೆಲಸ ಮಾಡಿಸುವುದು ಯಾವಾಗ ಎಂದರೆ, ಈ ಕೆರೆ ಒಡೆದು ಸುತ್ತ ಮುತ್ತಲಿನ ಪ್ರದೇಶವೆಲ್ಲಾ ಕೊಚ್ಚಿ ಹೋದ ಮೇಲೆ. ಆಮೇಲೆ ರೈತರು ಬಂದು ನಮ್ಮ ಜಾಗವನ್ನು ಹುಡುಕಲು 3 ರಿಂದ 4 ವರ್ಷ ಆಗತ್ತೆ. ಅಧಿಕಾರಿಗಳಲ್ಲಿ ಮತ್ತೊಮ್ಮೆ ಬೇಡಿಕೊಳ್ಳುತ್ತೇನೆ. ಈ ಕೆರೆ ಯಾವ ಇಲಾಖೆಗೆ ಬರತ್ತೋ ಅದು ನಮಗೆ ಗೊತ್ತಿಲ್ಲಾ. ಈಗಲಾದರೂ ಎಚ್ಚೆತ್ತು ರೈತರ ಜೀವನ ಹಾಳಾಗುವುದಕ್ಕಿಂತ ಮುಂಚೆ ಸರಿಯಾಗಿ ಕಾರ್ಯ ನಿರ್ವಹಿಸಿ. ಎಷ್ಟು ಮನವಿ ಸಲ್ಲಿಸಿದರು ಇಲ್ಲಿಗೆ ಯಾವ ಅಧಿಕಾರಿಯು ಬಂದಿಲ್ಲ. ತಹಶೀಲ್ದಾರ್ ಒಬ್ಬರು ಬಂದು ಹೋದರು ಅಷ್ಟೆ, ಇವರು ರೈತರೆಲ್ಲ ಸತ್ತ ಮೇಲೆ ಬರುತ್ತಾರೋ ಗೊತ್ತಿಲ್ಲಾ ಎಂದರು.

    ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಂದೀಶ್ ಅಗ್ರಹಾರ ಮಾತನಾಡಿ, 2008-09ರಲ್ಲಿ ಆಗಿನ ಶಾಸಕರಾಗಿದ್ದ ಡಾ.ಜಿ.ಪರಮೇಶ್ವರ್ ಅವರು ಕುಡಿಯುವ ನೀರಿನ ಉದ್ದೇಶದಿಂದ ಆಯ್ಕೆ ಮಾಡಿಕೊಂಡರು. ಆದರೆ ಇತ್ತೀಚಿನ ದಿನಗಳಲ್ಲಿ ಎಲ್ಲಾ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಮ್ಮ ಕಣ್ಣಿಗೆ ಮಣ್ಣೆರಚಿ ನಮಗೆ ಮೋಸ ಮಾಡಿದ್ದಾರೆ. ಆವತ್ತಿನ ಕಾಲಕ್ಕೆ ನಾವು 5 ಸಾವಿರ ಕ್ವಿಂಟಾಲ್ನಿಂದ 8 ಸಾವಿರ ಕ್ವಿಂಟಾಲ್ ವರೆಗೂ ರಾಜ್ಯ ಸರ್ಕಾರದ ಬಿತ್ತನೆ ಬೀಜ ನಿಗಮಕ್ಕೆ ಕೊಡುತ್ತಾ ಬಂದಿದ್ದೇವೆ. ಇವತ್ತು ಸರ್ಕಾರ ಕೊಡುವ 2-3 ಕೆ.ಜಿ. ಅಕ್ಕಿಗೋಸ್ಕರ ಕಾಯುತ್ತಾ ಕುಳಿತುಕೊಳ್ಳುವ ಪರಿಸ್ಥಿತಿ ಬಂದಿದೆ. 2008 ರಿಂದ ಇವತ್ತಿನ ವರೆಗೂ ಯಾರೊಬ್ಬ ಅಧಿಕಾರಿಯೂ ಕೂಡಾ ಕೆರೆಯ ಏರಿ ಮೇಲೆ ಬಂದೇ ಇಲ್ಲ ಎಂದರು.

    ವಿನಯ್ ಕುಮಾರ್ ಅಗ್ರಹಾರ ಗ್ರಾಮಸ್ಥ ಮಾತನಾಡಿ, ಇದು ಅಗ್ರಹಾರದ ಕೆರೆ ಎಂತ ಮಾತ್ರ ಹೆಸರುವಾಸಿ, ಆದರೆ ಇದರಿಂದ ಯಾವುದೇ ಅನುಕೂಲವನ್ನು ನಾವು ಪಡೆದುಕೊಂಡಿಲ್ಲ. ಆದರೆ ಈಗ ಈ ಕೆರೆಯಿಂದ ಅನಾನುಕೂಲವಾಗುವ ಭಯ ಆಗ್ತಾ ಇದೆ. ಕೆರೆ ಒಡೆದರೆ ಕೆಳ ಭಾಗದಲ್ಲಿರುವ ಎಲ್ಲಾ ಜನರು, ರೈತರ ಜಮೀನುಗಳು ಹಾಗು ಜಾನುವಾರುಗಳಿಗೆ ಬಹುಡೊಡ್ಡ ಅನಾಹುತವಾಗಲಿದೆ. ತಕ್ಷಣ ಸಂಬಂಧಪಟ್ಟ ಇಂಜಿನಿಯರ್ ಗಳು ಕ್ರಮ ಕೈಗೊಳ್ಳಬೇಕು ಎಂದರು.

    ತಹಶೀಲ್ದಾರ್ ಮಾತನಾಡಿ, ಕೆರೆ ಸಮಸ್ಯೆ ಬಗ್ಗೆ ಇದೇ ತಿಂಗಳು 8ನೇ ತಾರೀಖು ನಮಗೆ ಸಾರ್ವಜನಿಕರಿಂದ ದೂರು ಬರತ್ತೆ, ಅದೇ ದಿನ ಸಂಜೆ ನಮ್ಮ ಕಂದಾಯ ಅಧಿಕಾರಿಗಳೊಂದಿಗೆ ಹೋಗಿ ಸ್ಥಲ ಪರಿಶೀಲನೆ ನಡೆಸಿದಾಗ ಬಿರುಕು ಬಿಟ್ಟಿರುವುದು ಕಂಡು ಬಂದಿರುತ್ತದೆ. ತಕ್ಷಣ ನಾನು ಎಂಐಇಡಬ್ಲ್ಯೂ ಮಾಹಿತಿ ಕಳಿಸಿದ್ದೆ. ಮಾರನೇ ದಿನ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ ಇದು ಸಾರ್ವಜನಿಕರಿಗೆ ತಿಳಿದಿಲ್ಲ. ಈ ವಾರದಲ್ಲೇ ಒಂದು ಸಭೆಯನ್ನು ನಡೆಸಿ ಕ್ರಮ ಕೈಗೊಳ್ಳುತ್ತೇವೆಎಂದು ತಿಳಿಸಿದರು.

    ಅದೇನೇ ಆಗಲಿ ಪ್ರಿಯ ವೀಕ್ಷಕರೇ ಜಾನುವಾರುಗಳಿಗೆ ಜೀವ ನದಿಯಾಗಿರುವ ಈ ಅಗ್ರಹಾರ ಕೆರೆಯನ್ನು ಉಳಿಯುವಂತೆ ಮಾಡುವ ಕೆಲಸ ಅಧಿಕಾರಿಗಳು ಮಾಡುವಂತಾಗಲಿ ಎಂಬುದೇ ನಮ್ಮ ಆಶಯ.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ .

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026

    ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

    August 22, 2026

    Comments are closed.

    Our Picks

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಸೇವಾ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಬೀಳ್ಕೊಡುಗೆ

    August 29, 2026

    ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ನೇರಳೆಕೆರೆ ವೃತ್ತದ ನೇರಳೆಕೆರೆ ಗೇಟ್ ಅಂಗನವಾಡಿ ಕೇಂದ್ರದಲ್ಲಿ, ಆಗಸ್ಟ್–2026ರ ಅಂತ್ಯಕ್ಕೆ ಗೌರವ ಸೇವೆಯಿಂದ ವಯೋನಿವೃತ್ತಿ…

    (ಬಳ್ಳಿ ಕಾಡು ಹಣ್ಣು ) ಬ್ಲ್ಯಾಕ್ ಬೆರಿ ಬೀಜಗಳ ರಹಸ್ಯ ಮತ್ತು ಅವುಗಳ ಅದ್ಭುತ ಆರೋಗ್ಯ ಪ್ರಯೋಜನಗಳು….

    August 29, 2026

    ಸರಗೂರು: 9ನೇ ವಾರ್ಡ್ ಅಭಿವೃದ್ಧಿಗೆ ₹55 ಲಕ್ಷ ಅನುದಾನ; ಚಿಕ್ಕದೇವಮ್ಮ ದೇವಸ್ಥಾನ ರಸ್ತೆ ಅಭಿವೃದ್ಧಿಗೆ ವಿಶೇಷ ಆದ್ಯತೆ

    August 29, 2026

    ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್

    August 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.