ಮಧುಗಿರಿ: ಕರ್ನಾಟಕ ರಾಜ್ಯ ಪೊಲೀಸ್ ತುಮಕೂರು ಜಿಲ್ಲೆ ಮಧುಗಿರಿ ಉಪವಿಭಾಗ ಮಧುಗಿರಿ ಪೊಲೀಸ್ ಠಾಣೆ ವತಿಯಿಂದ ಪಿ.ಎಸ್.ಐ ರಮೇಶ್ ರವರ ನೇತೃತ್ವದಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಆಚರಿಸಲಾಯಿತು.
ಮಧುಗಿರಿ ಪಟ್ಟಣದ ವಿವಿಧ ಕಡೆ ಜಾಗೃತಿ ಮೂಡಿಸುವ ಮೂಲಕ ಮಾನವ ಕಳ್ಳಸಾಗಾಣಿಕೆ ವಿರುದ್ಧ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭ ಮಾತನಾಡಿದ ಪಿ.ಎಸ್.ಐ ರಮೇಶ್ ಕುಮಾರ್, ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಬೇಕು. ಆಟೋದಲ್ಲಿ ಅಥವಾ ನಡೆದುಕೊಂಡು ಹೋಗಬೇಕಾದರೆ ಅಥವಾ ಯಾವುದೇ ಸಾರ್ವಜನಿಕ ರಸ್ತೆಗಳಲ್ಲಿ ಯಾರಾದರೂ ಮಕ್ಕಳನ್ನು ಅಥವಾ ಮಹಿಳೆಯರನ್ನು ಬಲವಂತವಾಗಿ ವಾಹನದಲ್ಲಿ ಕರೆದುಕೊಂಡು ಹೋಗುತ್ತಿರುವುದು ಕಂಡು ಬಂದರೆ, ಪೊಲೀಸ್ ಠಾಣೆ ಕಂಟ್ರೋಲ್ ನಂಬರ್ 112 ಕರೆ ಮಾಡಿ ಮಾಹಿತಿ ನೀಡಿ. ತಕ್ಷಣವೇ ಬಂದು ರಕ್ಷಣೆ ಮಾಡುತ್ತೇವೆ ಎಂದರಲ್ಲದೇ, ಸಾರ್ವಜನಿಕರಿಗೆ ಸಲಹೆ ಸೂಚನೆ ನೀಡಿದರು.
ವರದಿ: ದೊಡ್ಡೇರಿ ಮಹಾಲಿಂಗಯ್ಯ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz