ಮಧುಗಿರಿ: ಸೋದೇನಹಳ್ಳಿ ಅಂಬೇಡ್ಕರ್ ವಸತಿ ಶಾಲೆ ಜಲದಿಗ್ಬಂಧನವಾದ ಪರಿಣಾಮ ಮೇಲಾಧಿಕಾರಿ ರವರ ಆದೇಶದಂತೆ ಮೂರು ದಿನಗಳ ಕಾಲ ರಜೆ ಘೋಷಿಸಲಾಗಿದೆ.
ಅಂಬೇಡ್ಕರ್ ವಸತಿ ಶಾಲೆ ಶಾಲೆಯ ಸುತ್ತ ನೀರು ತುಂಬಿದ್ದು, ಚಂದ್ರಗಿರಿಯ ಪಂಚಾಯಿತಿ ಅಧ್ಯಕ್ಷರಾದ ಭಾಗ್ಯಮ್ಮ ತಿಮ್ಮಯ್ಯನವರು ಭೇಟಿ ನೀಡಿ ಜೆಸಿಬಿ ಮುಖಾಂತರ ನೀರು ಹೊರಗಡೆ ಹಾಕಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಜಲದಿಗ್ಬಂಧನವಾದ ಹಿನ್ನೆಲೆಯಲ್ಲಿ ಪ್ರಾಂಶುಪಾಲ ರಾಜಶೇಖರ್ ಅವರು, ಮುನ್ನೆಚ್ಚರಿಕೆ ಕ್ರಮವಾಗಿ ಮೇಲಾಧಿಕಾರಿಗಳ ಸೂಚನೆಯಂತೆ ಶಾಲೆಗೆ ಮೂರು ದಿನ ರಜೆ ಘೋಷಿಸಿದ್ದಾರೆ.
ತುಮಕೂರು ಜಿಲ್ಲೆಗೆ ಒಳಪಡುವ ಸುತ್ತಮುತ್ತಲಿನ ಗ್ರಾಮಗಳಿಂದ ವಿದ್ಯಾಭ್ಯಾಸಕ್ಕಾಗಿ ಈ ಶಾಲೆಗೆ ವಿದ್ಯಾರ್ಥಿಗಳು ಆಗಮಿಸುತ್ತಾರೆ. ಇಲ್ಲಿನ ವಿದ್ಯುತ್ ಕಂಬಗಳು ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವರದಿ: ದೊಡ್ಡೇರಿ ಮಹಾಲಿಂಗಯ್ಯ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy