nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ

    May 16, 2026

    ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು

    May 16, 2026

    ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!

    May 16, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ
    • ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು
    • ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!
    • ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ
    • ಮಧುಗಿರಿ:  ಮೇ ನಲ್ಲಿ 2 ತಿಂಗಳ ಪಡಿತರ ವಿತರಣೆ
    • ಸಿದ್ದರಾಮಯ್ಯ ಸರ್ಕಾರಕ್ಕೆ 3 ವರ್ಷ: ಮೇ 19ರಂದು ತುಮಕೂರಿನಲ್ಲಿ ಸಾಧನಾ ಸಮಾವೇಶ
    • ಕೆರೆಯ ಮಣ್ಣೆತ್ತಲು ರೈತರಿಗೆ ಅಡ್ಡಿಪಡಿಸುವಂತಿಲ್ಲ: ಜಿಲ್ಲಾಧಿಕಾರಿಗೆ ವಿ.ಸೋಮಣ್ಣ ಸೂಚನೆ
    • ಗುರು ಶಿಷ್ಯರು: ಈ ದಿನದ ಕಥೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನಸಾಮಾನ್ಯರ ಪರ ಸಂಸತ್ತಿನಲ್ಲಿ ಧ್ವನಿಯೆತ್ತುವೆ : ವೀರೇಂದ್ರ ಹೆಗ್ಗಡೆ
    ರಾಜ್ಯ ಸುದ್ದಿ August 13, 2022

    ಜನಸಾಮಾನ್ಯರ ಪರ ಸಂಸತ್ತಿನಲ್ಲಿ ಧ್ವನಿಯೆತ್ತುವೆ : ವೀರೇಂದ್ರ ಹೆಗ್ಗಡೆ

    By adminAugust 13, 2022No Comments2 Mins Read
    belthagady

    ಬೆಳ್ತಂಗಡಿ, ಅ.13- ತಾಲೂಕು ಹಾಗೂ ರಾಜ್ಯದಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಿದ ತಮ್ಮ ಯೋಚನೆ ಹಾಗೂ ಯೋಜನೆಗಳನ್ನು ರಾಷ್ಟ್ರಮಟ್ಟದಲ್ಲಿ ವಿಸ್ತರಿಸಲಾಗುವುದು ಎಂದು ಧರ್ಮಾಧಿಕಾರಿ, ರಾಜ್ಯಸಭೆ ಸದಸ್ಯ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

    ಧರ್ಮಸ್ಥಳದ ವಸಂತಮಹಲ್ ಬಳಿ ರಾಜ್ಯಸಭಾ ಸದಸ್ಯರ ಅಧಿಕೃತ ಕಾರ್ಯಾಲಯದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೃಷಿಕರು ಹಾಗೂ ಅಡಿಕೆ ಬೆಳೆಗಾರರು ಅನೇಕ ಸಮಸ್ಯೆಗಳಿಂದ ಹತಾಶರಾಗಿದ್ದಾರೆ. ಅವರ ಬಗ್ಗೆ ಸಂಸತ್‍ನಲ್ಲಿ ಧ್ವನಿ ಎತ್ತುವುದಲ್ಲದೆ, ರೈತರು ಹಾಗೂ ಜನಸಾಮಾನ್ಯರ ಸಮಸ್ಯೆಗಳ ಪರಿಹಾರಕ್ಕೆ ಶ್ರದ್ಧೆ, ನಿಷ್ಠೆ ಮತ್ತು ಪ್ರಾಮಾಣಿಕವಾಗಿ ಪ್ರಯತ್ನಿಸುವೆ ಎಂದು ಭರವಸೆ ನೀಡಿದರು.


    Provided by
    Provided by

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ರಾಜ್ಯದಲ್ಲಿ ಏಳು ಸಾವಿರ ಸಾಮಾನ್ಯ ಸೇವಾ ಕೇಂದ್ರಗಳನ್ನು ಈಗಾಗಲೆ ಪ್ರಾರಂಭಿಸಿದ್ದು, ಜನಸಾಮಾನ್ಯರಿಗೆ ಆಧಾರ್ ಕಾರ್ಡ್, ಆರೋಗ್ಯ ವಿಮೆ, ನೆರೆ-ಬರ ಪರಿಹಾರ, ಕೂಲಿ ಕಾರ್ಮಿಕರಿಗೆ ಇ-ಶ್ರಮ ಕಾರ್ಡ್ , ಆಯುಷ್ಮಾನ್ ಕಾರ್ಡ್ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗಿದೆ.

    ಧರ್ಮಸ್ಥಳದ ಮಂಜುನಾಥನ ಬಗ್ಗೆ ದೃಢ ನಂಬಿಕೆ ಎಲ್ಲರಲ್ಲಿದೆ. ದೇವಸ್ಥಾನದಲ್ಲಿ ಧಾರ್ಮಿಕ ಪರಂಪರೆ, ಶಿಸ್ತು, ಸ್ವಚ್ಛತೆ, ಸಂಪ್ರದಾಯ ಹಾಗೂ ಕಾಲ ಕಾಲಕ್ಕೆ ನಡೆಯಬೇಕಾದ ಕಟ್ಟುಕಟ್ಟಳೆಗಳನ್ನು ವ್ಯವಸ್ಥಿತವಾಗಿ ಮಾಡಲಾಗುತ್ತದೆ.

    ಗ್ರಾಮೀಣಾಭಿವೃದ್ಧಿ ಯೋಜನೆ ಮೂಲಕ ಗ್ರಾಮೀಣ ಪ್ರದೇಶದಲ್ಲಿ ತಂತ್ರಜ್ಞಾನದ ಅಳವಡಿಕೆ ಹಾಗೂ ಮಹಿಳಾ ಸಬಲೀಕರಣ, ನಿರುದ್ಯೋಗ ಸಮಸ್ಯೆ ನಿವಾರಣೆಗೆ ವಿಶೇಷ ಒತ್ತು ನೀಡಿದ್ದು ಇದು ಯಶಸ್ವಿಯಾಗಿದೆ. ರಾಜ್ಯಸಭಾ ಸದಸ್ಯನಾದರೂ ತನ್ನ ಆಹಾರ-ವಿಹಾರ, ಆಚಾರ -ವಿಚಾರ, ಧರಿಸುವ ಧಿರಿಸು, ಶಿಷ್ಟಾಚಾರದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದರು.

    ಶಾಸಕ ಹರೀಶ್ ಪೂಂಜ ಮಾತನಾಡಿ, ರಾಜ್ಯ ಸಭೆ ಹಿರಿಯ ಹಾಗೂ ಅನುಭವಿ ಸದಸ್ಯರ ವೇದಿಕೆಯಾಗಿದ್ದು ಪ್ರಧಾನಿ ನರೇಂದ್ರ ಮೋದಿಯವರೆ ಹೆಗ್ಗಡೆಯವರ ಸೇವೆ, ಸಾಧನೆ ಮತ್ತು ವರ್ಚಸ್ಸನ್ನು ಗಮನಿಸಿ ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನ ಮಾಡಿದ್ದಾರೆ.

    ಸಾಮಾನ್ಯವಾಗಿ ಸಂಸದರ ಕಾರ್ಯಾಲಯ ಜಿಲ್ಲಾ ಕೇಂದ್ರದಲ್ಲಿಯೂ, ಶಾಸಕರ ಕಾರ್ಯಾಲಯ ತಾಲೂಕು ಕೇಂದ್ರದಲ್ಲಿಯೂ ಇರುತ್ತದೆ. ಆದರೆ, ಧರ್ಮಸ್ಥಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಸದರ ಕಾರ್ಯಾಲಯ ಆರಂಭವಾಗಿರುವುದು ದೇಶದಲ್ಲೇ ಇದು ಪ್ರಥಮ ಹಾಗೂ ಐತಿಹಾಸಿಕ ಘಟನೆಯಾಗಿದೆ. ಇದುವೆ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಎಂದು ಬಣ್ಣಿಸಿದರು.

    ಒಬ್ಬರು ರಾಜ್ಯಸಭಾ ಸದಸ್ಯರು, ಮೂರು ಮಂದಿ ಶಾಸಕರು ಹಾಗೂ ಅತಿ ಹೆಚ್ಚು ಅಂದರೆ 81 ಗ್ರಾಮಗಳನ್ನು ಹೊಂದಿರುವ ಬೆಳ್ತಂಗಡಿ ತಾಲೂಕು ಸರ್ವ ರೀತಿಯಿಂದಲೂ ವಿಶಿಷ್ಟವಾಗಿದೆ ಮೆಚ್ಚುಗೆ ವ್ಯಕ್ತ ಪಡಿಸಿದರು.

    ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪ ಸಿಂಹ ನಾಯಕ್, ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಎಸ್.ಡಿ. ಸಂಪತ್ ಸಾಮ್ರಾಜ್ಯ ಶಿರ್ತಾಡಿ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಮೂಡಬಿದ್ರೆ, ಎಸ್‍ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಎಸ್. ಸತೀಶ್ಚಂದ್ರ, ಕಾರ್ಯ ನಿರ್ವಹಣಾಕಾರಿ ಎಂ.ವೈ. ಹರೀಶ್, ಪೂರಣವರ್ಮ ಸಂಸದರ ಆಪ್ತಕಾರ್ಯದರ್ಶಿ ಕೆ.ಎನ್. ಜನಾರ್ದನ್ ಗ್ರಾಮಾಭಿವೃದ್ಧಿ ಯೋಜನೆಯ ಶಿವಕುಮಾರ್ ಮತ್ತು ಸುಷ್ಮಾ ಉಪಸ್ಥಿತರಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?

    May 13, 2026

    4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?

    May 10, 2026

    ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

    May 10, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ

    May 16, 2026

    ಮಧುಗಿರಿ: ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ವೀರಾಪುರ ಗ್ರಾಮದ ದಲಿತ ಛಲವಾದಿ ಸಮುದಾಯದವರು ತಮ್ಮ ಪೂರ್ವಿಕರ ಸಮಾಧಿಗಳ ಬಳಿ ಪೂಜಾ…

    ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು

    May 16, 2026

    ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!

    May 16, 2026

    ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ

    May 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.