ಬೆಂಗಳೂರು : ಆಗಸ್ಟ್ 28 ಕ್ಕೆ ದೊಡ್ಡಬಳ್ಳಾಪುರ ದಲ್ಲಿ ಸರ್ಕಾರದ ಸಾಧನೆಯ ಜನೋತ್ಸವವನ್ನು ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಅವರು ಇಂದು ಬೆಳಿಗ್ಗೆ ತಮ್ಮ ನಿವಾಸದ ಬಳಿ ಮಾಧ್ಯಮವರೊಂದಿಗೆ ಮಾತನಾಡಿದರು.ಸರ್ಕಾರದ ಸಾಧನೆಯನ್ನು ಜನರಿಗೆ ತಲುಪಿಸಲು ರಾಜ್ಯದ ಐದು ಕಡೆಗಳಲ್ಲಿ ಜನೋತ್ಸವ ನಡೆಸಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಜುಲೈ 28 ಕ್ಕೆ ಆಗಬೇಕಿದ್ದ ಜನೋತ್ಸವವನ್ನು ಅನಿವಾರ್ಯ ಕಾರಣಗಳಿಂದ ರದ್ದು ಮಾಡಲಾಗಿತ್ತು.10 -15 ದಿನಗಳಿಂದ ಈ ಭಾಗದ ಜನರ ಒತ್ತಾಯ ಹೆಚ್ಚಾಗಿದೆ. ಬೇರೆ ಕಡೆ ಸಮಾವೇಶ ಮಾಡಲು ಜನ ಒಪ್ಪಲಿಲ್ಲ. ನಾವು ಸಾಕಷ್ಟು ತಯಾರಿ ನಡೆಸಿದ್ದು ದೊಡ್ಡಬಳ್ಳಾಪುರ ದಿಂದಲೇ ಜನೋತ್ಸವ ಪ್ರಾರಂಭವಾಗಬೇಕು.ಮೊದಲ ಹೆಜ್ಜೆ ಇಟ್ಟಿದ್ದೇವೆ.ಇಲ್ಲಿಂದಲೇ ಜನೋತ್ಸವ ಆರಂಭ ಆಗಲಿ ಆಗಲಿ ಎಂದು ನಮಗಿಂತಲೂ ಹೆಚ್ಚಿನ ಧೃಢ ನಿರ್ಧಾರ ಅವರದಾಗಿದೆ. ಅವರ ಉತ್ಸಾಹ ನಿರ್ಣಯಕ್ಕೆ ತಲೆಬಾಗಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದರು.ಜನೋತ್ಸವದ ಬಗ್ಗೆ ಇಂದು ವರಿಷ್ಠ ರೊಂದಿಗೆ ಮಾತನಾಡಿ ತಿಳಿಸಲಾಗುವುದು ಎಂದರು.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy