ಪಾವಗಡ: ತಾಲ್ಲೂಕಿನ ಯ.ನಾ. ಹೊಸಕೋಟೆ ಹೋಬಳಿಯ ತಿಪ್ಪಯ್ಯನದುರ್ಗ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಬಿಜೆಪಿ ಮುಖಂಡ ಕೃಷ್ಣ ನಾಯ್ಕ ಬ್ಯಾಗ್ ವಿತರಣೆ ಮಾಡಿದರು.
ಬಳಿಕ ಮಾತನಾಡಿದ ಕೃಷ್ಣ ನಾಯ್ಕ ಅವರು, ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳು ಬಡ ವಿದ್ಯಾರ್ಥಿಗಳು ಆಗಿರುತ್ತಾರೆ ಎಂದು ತಿಳಿದು ಈ ಬ್ಯಾಗ್ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು.
ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಉಮೇಶ್, ಬಿಜೆಪಿ ಮಂಡಲ ಅಧ್ಯಕ್ಷ ರವಿಶಂಕರ್ ನಾಯ್ಕ, ಮಂಡಲ ಉಪಾಧ್ಯಕ್ಷ ನಾರಾಯಣಪ್ಪ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಅಶೋಕ್, ರೈತ ಮೋರ್ಚಾ ಅಧ್ಯಕ್ಷ ಕೋಟೆಶ್ವರ್ ರೆಡ್ಡಿ, ಎಸ್ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ರವಿ ನಾಯ್ಕ ಮತ್ತು ಪ್ರಸಾದ್ ಬಾಬು, ಯುವ ಮುಖಂಡ ವಸಂತ್ ನಾಯ್ಕ, ಬಿಜೆಪಿ ಕಾರ್ಯಕರ್ತ ಹರೀಶ್ ನಾಯ್ಕ ಹಾಗೂ ಊರಿನ ಗ್ರಾಮಸ್ಥರು ಹಾಜರಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz