nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಟ್ಲದಲ್ಲಿ ಮೊಳಗಿದ ಸಂಗೀತದ ಸುಮಧುರ ಸ್ವರ: ವೈಭವದಿಂದ ಜರುಗಿದ ‘ಸ್ವರ ಸಿಂಚನ ಸಂಗೀತೋತ್ಸವ–2026’

    September 8, 2026

    ತುಮಕೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಹೊಸ ದಿಗಂತ’ ಅಭಿವಿನ್ಯಾಸ ಕಾರ್ಯಕ್ರಮ ಯಶಸ್ವಿ

    September 8, 2026

    ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ

    September 7, 2026
    Facebook Twitter Instagram
    ಟ್ರೆಂಡಿಂಗ್
    • ವಿಟ್ಲದಲ್ಲಿ ಮೊಳಗಿದ ಸಂಗೀತದ ಸುಮಧುರ ಸ್ವರ: ವೈಭವದಿಂದ ಜರುಗಿದ ‘ಸ್ವರ ಸಿಂಚನ ಸಂಗೀತೋತ್ಸವ–2026’
    • ತುಮಕೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಹೊಸ ದಿಗಂತ’ ಅಭಿವಿನ್ಯಾಸ ಕಾರ್ಯಕ್ರಮ ಯಶಸ್ವಿ
    • ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ
    • ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
    • ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!
    • ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ
    • ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!
    • ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಯಗಡ ಜಿಲ್ಲೆಯಲ್ಲಿ ಭಯೋತ್ಪಾದನೆಯ ಭಾರಿ ಸಂಚು: ದೋಣಿಗಳಲ್ಲಿ ಎಕೆ-47 ಸೇರಿದಂತೆ ಹಲವು ಶಸ್ತ್ರಾಸ್ತ್ರಗಳು ಪತ್ತೆ
    ರಾಷ್ಟ್ರೀಯ ಸುದ್ದಿ August 18, 2022

    ರಾಯಗಡ ಜಿಲ್ಲೆಯಲ್ಲಿ ಭಯೋತ್ಪಾದನೆಯ ಭಾರಿ ಸಂಚು: ದೋಣಿಗಳಲ್ಲಿ ಎಕೆ-47 ಸೇರಿದಂತೆ ಹಲವು ಶಸ್ತ್ರಾಸ್ತ್ರಗಳು ಪತ್ತೆ

    By adminAugust 18, 2022No Comments2 Mins Read
    maharastra

    ಮಹಾರಾಷ್ಟ್ರದ ರಾಯಗಡ ಜಿಲ್ಲೆಯಲ್ಲಿ ಭಯೋತ್ಪಾದನೆಯ ಭಾರಿ ಸಂಚು ಬಯಲಾಗಿದೆ. ಜಿಲ್ಲೆಯಲ್ಲಿ ಎರಡು ಅನುಮಾನಾಸ್ಪದ ದೋಣಿಗಳು ಪತ್ತೆಯಾಗಿದ್ದು, ದೋಣಿಗಳಲ್ಲಿ ಎಕೆ-47 ಸೇರಿದಂತೆ ಹಲವು ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ. ಸಧ್ಯ ಈ ದೋಣಿಗಳನ್ನು ಪೊಲೀಸರು ವಶಪಡಿಸಿಕೊಂಡು, ತನಿಖೆ ಆರಂಭಿಸಿದ್ದಾರೆ.

    ಪೊಲೀಸರು ರಾಯಗಢದಲ್ಲಿ ಮೊದಲನೆಯ ದೋಣಿಯನ್ನು ಶ್ರೀವರ್ಧನ್ ತೆಹಸಿಲ್‌ನ ಹರಿಹರೇಶ್ವರ ಬೀಚ್‌ನಲ್ಲಿ ಮತ್ತು ಎರಡನೆಯದು ಭರನ್ ಖೋಲ್ ದಡದಲ್ಲಿ ಪತ್ತೆಯಾಗಿವೆ.ಹರಿಹರೇಶ್ವರ ಕಡಲತೀರದಲ್ಲಿ ಪತ್ತೆಯಾದ ಬೋಟ್‌ನಲ್ಲಿ 3 ಎಕೆ-47 ಪತ್ತೆಯಾಗಿದ್ದು, ಇನ್ನೊಂದು ಬೋಟ್‌ನಲ್ಲಿ ಲೈಫ್ ಜಾಕೆಟ್‌ಗಳು ಮತ್ತು ಕೆಲವು ದಾಖಲೆಗಳು ಪತ್ತೆಯಾಗಿವೆ. ಹೀಗಾಗಿ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.  ಸದ್ಯ ಈ ಬೋಟ್ ಗಳ ಮಾಲೀಕರು ಯಾರು, ಇಲ್ಲಿಗೆ ಹೇಗೆ ತಲುಪಿದ್ದಾರೆ ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ.

    ಭದ್ರತಾ ಕಂಪನಿಯೊಂದಿಗೆ ಸಂಪರ್ಕ?

    ಪ್ರಾಥಮಿಕ ಮಾಹಿತಿ ಪ್ರಕಾರ ಇದು ಒಮಾನ್ ದೇಶದ ಭದ್ರತಾ ಬೋಟ್ ಆಗಿದ್ದು, ರಾಯಗಢ ಕರಾವಳಿಗೆ ಬಂದಿದೆ. ಇದೀಗ ನಿರುಪಯುಕ್ತವಾಗಿರುವ ಈ ಬೋಟ್‌ನಿಂದ ಎಕೆ-47 ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದರೆ ಈ ಬಗ್ಗೆ ಪೊಲೀಸರು ಇನ್ನೂ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಕೇಂದ್ರೀಯ ಸಂಸ್ಥೆಗಳಿಗೆ ಮಾಹಿತಿ ನೀಡಲಾಗಿದ್ದು, ಅವರು ಕೂಡ ತನಿಖೆಯ ಮೇಲೆ ನಿಗಾ ಇರಿಸಿದ್ದಾರೆ. ಮಾಹಿತಿಯ ಪ್ರಕಾರ, ಈ ಬೋಟ್ ಬಹುರಾಷ್ಟ್ರೀಯ ಕಂಪನಿಯೊಂದಿಗೆ ಸಂಪರ್ಕ ಹೊಂದಿದೆ, ಇದನ್ನು ಕಂಪನಿಯು ಜೀ ನ್ಯೂಸ್ ಜೊತೆಗಿನ ವಿಶೇಷ ಸಂಭಾಷಣೆಯಲ್ಲಿ ಖಚಿತಪಡಿಸಿದೆ. ಆದರೆ, ಮಹಾರಾಷ್ಟ್ರ ಎಟಿಎಸ್ ಘಟನಾ ಸ್ಥಳಕ್ಕೆ ತಲುಪಿದ್ದು, ದೋಣಿಯನ್ನು ತನಿಖೆ ನಡೆಸಲಾಗುತ್ತಿದೆ.

    ಈ ಸಂಸ್ಥೆಯು ಕಡಲ ಭದ್ರತೆಗೆ ಸಂಬಂಧಿಸಿದೆ ಎಂದು ಕಂಪನಿಯು ತಿಳಿಸಿದೆ ಮತ್ತು ಈ ಒಂದು ದೋಣಿ ಸಮುದ್ರದಲ್ಲಿ ಉರುಳಿಬಿದ್ದಿದೆ ಅದನ್ನು ರಾಯಗಢದಲ್ಲಿ ವಶಪಡಿಸಿಕೊಳ್ಳಲಾಗಿದೆ. ಕಂಪನಿಯ ಹಿರಿಯ ಅಧಿಕಾರಿಗಳು ಆಡಳಿತದೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಕಂಪನಿ ತಿಳಿಸಿದೆ. ಗುರುವಾರ ಸಂಜೆಯೊಳಗೆ ಈ ಬಗ್ಗೆ ಸದನಕ್ಕೆ ತಿಳಿಸುವಂತೆ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರು ಗೃಹ ಸಚಿವರಿಗೆ ಸೂಚಿಸಿದ್ದಾರೆ. ರಾಯಗಡ ಜಿಲ್ಲಾ ಪೊಲೀಸ್ ಪಡೆ ಸ್ಥಳಕ್ಕೆ ಧಾವಿಸಿದ್ದು, ಈ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ.

    ದೇಶದ ಕಡಲ ಗಡಿಯ ಮೂಲಕ ಉಗ್ರರು ಒಳನುಸುಳುವ ಅಪಾಯ ಯಾವಾಗಲೂ ಇರುತ್ತದೆ. 26/11ರ ಮುಂಬೈ ದಾಳಿಯ ಸಂದರ್ಭದಲ್ಲೂ ಪಾಕ್ ಭಯೋತ್ಪಾದಕರು ಸಮುದ್ರದ ಮೂಲಕ ಭಾರತದೊಳಗೆ ನುಸುಳಿ ಮುಂಬೈನಲ್ಲಿ ಅತಿ ದೊಡ್ಡ ಭಯೋತ್ಪಾದಕ ದಾಳಿ ನಡೆಸಿದ್ದರು. 2008 ರಲ್ಲಿ ನಡೆದ ಈ ದಾಳಿಯಲ್ಲಿ, ತಾಜ್ ಹೋಟೆಲ್ ಸೇರಿದಂತೆ ಮುಂಬೈನ ಜನನಿಬಿಡ ಪ್ರದೇಶಗಳಲ್ಲಿ ಭಯೋತ್ಪಾದಕರು ವ್ಯವಸ್ಥಿತ ರೀತಿಯಲ್ಲಿ ದಾಳಿ ನಡೆಸಿದ್ದರು. ಉಗ್ರರ ದಾಳಿಯಲ್ಲಿ 160 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹೀಗಿರುವಾಗ ಈ ಅನುಮಾನಾಸ್ಪದ ಬೋಟ್ ಪತ್ತೆಯಾದ ನಂತರ ಮಹಾರಾಷ್ಟ್ರದಿಂದ ದೆಹಲಿಯವರೆಗೂ ಸಂಚಲನ ಮೂಡಿಸಿದ್ದು, ರಾಜ್ಯ ಆಡಳಿತದಿಂದ ಕೇಂದ್ರ ತನಿಖಾ ಸಂಸ್ಥೆಯವರೆಗೂ ಎಚ್ಚೆತ್ತುಕೊಂಡಿದೆ. ಈಗ ಈ ವಿಷಯವನ್ನು ಕೂಲಂಕುಷವಾಗಿ ತನಿಖೆ ಆರಂಭವಾಗಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ವಿಟ್ಲದಲ್ಲಿ ಮೊಳಗಿದ ಸಂಗೀತದ ಸುಮಧುರ ಸ್ವರ: ವೈಭವದಿಂದ ಜರುಗಿದ ‘ಸ್ವರ ಸಿಂಚನ ಸಂಗೀತೋತ್ಸವ–2026’

    September 8, 2026

    ವಿಟ್ಲ: ಮಕ್ಕಳಲ್ಲಿ ಪ್ರತಿಭೆ, ಶಿಸ್ತು, ಸಂಸ್ಕಾರ ಮತ್ತು ಸಾಂಸ್ಕೃತಿಕ ಅಭಿರುಚಿಯನ್ನು ಬೆಳೆಸುವ ಸದುದ್ದೇಶದಿಂದ ವಿಟ್ಲ ಸ್ವರ ಸಿಂಚನ ಸಂಗೀತ ಶಾಲೆ…

    ತುಮಕೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಹೊಸ ದಿಗಂತ’ ಅಭಿವಿನ್ಯಾಸ ಕಾರ್ಯಕ್ರಮ ಯಶಸ್ವಿ

    September 8, 2026

    ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ

    September 7, 2026

    ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.