ಮಧುಗಿರಿ: ಶ್ರೀ ಜಗದ್ಗುರು ರೇಣುಕಾಚಾರ್ಯರ, ಶ್ರೀಜಗಜ್ಯೋತಿ ಬಸವೇಶ್ವರ ಜಯಂತೋತ್ಸವ ಹಾಗೂ ಕಾಶಿ ವಿಶ್ವನಾಥ ಸ್ವಾಮಿ ಸಮುದಾಯ ಭವನದ ಭೂಮಿ ಪೂಜೆ ಕಾರ್ಯ ಮತ್ತು ಜನಜಾಗೃತಿ ಧರ್ಮ ಕಾರ್ಯಕ್ರಮವು ಕನಪ ನಾಯಕನಳ್ಳಿ ಗ್ರಾಮದಲ್ಲಿ ಏರ್ಪಡಿಸಲಾಗಿತ್ತು.
ಗಂಗೆ ಪೂಜೆ, ಗಣಪತಿ ಪೂಜೆ, ವಾಚನ ನಾಂದಿ ಪೂಜೆ, ಪಂಚಕಲಸ ಪೂಜೆ ಹಾಗೂ ದೇವರಿಗೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ನೆರವೇರಿತು.
ಶ್ರೀ ಕಾಶಿ ವಿಶ್ವನಾಥ ಸ್ವಾಮಿ ದೇವರಿಗೆ ರುದ್ರಾಭಿಷೇಕ ಪೂಜೆ, ನವಗ್ರಹ ಶಾಂತಿ ಪೂಜೆ, ಉಮಾ ಮಹೇಶ್ವರಿ ಪ್ರಧಾನ ಕಲಶ ಪೂಜೆ, ಶ್ರೀ ವಿಶ್ವನಾಥ ಸ್ವಾಮಿಗೆ ತುಂಬಾ ಅಭಿಷೇಕ ಬಿಲ್ವಾರ್ಚನೆ ಹಾಗೂ ರಾಜ ಪ್ರಚಾರ ಪೂಜೆ ಮಂಗಳಾರತಿ ತೀರ್ಥ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮಿಗಳು ಮತ್ತು ಶ್ರೀ ರಂಭಾಪುರಿ ಖಾಸ ಶಾಖ ಮಠ ಶ್ರೀ ಕ್ಷೇತ್ರ ಸಿದ್ದರಬೆಟ್ಟ ಇವರ ದಿವ್ಯ ಸಾನಿಧ್ಯದಲ್ಲಿ ನೆರವೇರಿಸಲಾಯಿತು.
ವರದಿ: ದೊಡ್ಡೇರಿ ಮಹಾಲಿಂಗಯ್ಯ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz