ಮಧುಗಿರಿ: ತಾಲೂಕಿನ ದೊಡ್ಡೇರಿ ಹೋಬಳಿ ಬಣಗಾರ ಹಳ್ಳಿ ಮತ್ತು ಪೆಮ್ಮನಹಳ್ಳಿ ಮಾರ್ಗದಲ್ಲಿ ಸೇತುವೆ ಕುಸಿದು ಕಾರಣ.ಸುಮಾರು 40 ಮನೆಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ.ಎರಡು ಕಡೆಯಿಂದಲೂ ಸಂಚಾರ ಸ್ಥಗಿತಗೊಂಡಿದ್ದು, ಪೇಮ್ಮೇನಹಳ್ಳಿ ಶಾಲಾ ಮಕ್ಕಳು ನಾಲ್ಕು ದಿನದಿಂದ ಶಾಲೆಗೆ ಬರದೆ ಸೇತುವೆ ಬಳಿ ಬಂದು ಮನೆಗೆ ವಾಪಸ್ ಹೋಗುತ್ತಿರುವ ಘಟನೆ ನಡೆದಿದೆ.
ಹಿರಿಯರು ಆಸ್ಪತ್ರೆಗೆ ಹೋಗಲು ಸಾಧ್ಯವಾಗದ ಸ್ಥಿತಿ ಇಲ್ಲಿ ನಿರ್ಮಾಣವಾಗಿದೆ. ಈ ಸಂಬಂಧ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯ ಮುಖಂಡ ರವಿ ಯಾದವ್, ಒಂದುವಾರದಿಂದ ಮಕ್ಕಳು ಶಾಲೆಗೆ ಹೋಗುತ್ತಿಲ್ಲ, ಸೇತುವೆ ಕೊಚ್ಚಿ ಹೋಗಿದೆ, ತುಂಬಾನೇ ರಭಸದಿಂದ ನೀರು ಹರಿಯುತ್ತಿದೆ. ಮಕ್ಕಳನ್ನು ರಭಸವಾಗಿ ಹರಿಯುತ್ತಿರುವ ಹಳ್ಳ ದಾಟಿಸುವುದು ತುಂಬಾನೆ ಅಪಾಯಕಾರಿ. ಈ ವಿಚಾರಅರಿತು ಮಕ್ಕಳ ಪೋಷಕರು ಶಾಲೆಗೆ ಕಳುಹಿಸುತ್ತಿಲ್ಲ. ನಮ್ಮ ಊರಿಗೆ ಇದುವರೆಗೂ ಯಾವ ಅಧಿಕಾರಿಗಳು ಸಹ ಬಂದಿಲ್ಲ. ದಯಮಾಡಿ ಸಂಬಂಧಪಟ್ಟ ಇಲಾಖೆಯವರು ಬಂದು ಇಲ್ಲಿರುವ ಸಮಸ್ಯೆಯನ್ನು ಬಗೆಹರಿಸಿಲ್ಲ ಎಂದು ಮಾಧ್ಯಮ ಮೂಲಕ ತಮ್ಮ ಅಳಲು ತೋಡಿಕೊಂಡರು.
ಶಾಲಾ ಮಕ್ಕಳು ಮಾತನಾಡಿ, ಶಾಲೆಗೆ ಹಾದುಹೋಗುವ ದಾರಿ ಸಂಪೂರ್ಣ ಜಲಾವೃತಗೊಂಡಿದ್ದು, ಇದರಿಂದ ಶಾಲೆಗೆ ತೆರಳಲು ಆಗುತ್ತಿಲ್ಲ, ನಮ್ಮ ವಿದ್ಯಾಭ್ಯಾಸಕ್ಕೆ ತುಂಬಾ ತೊಂದರೆಯಾಗುತ್ತಿದೆ. ದಯಮಾಡಿ ಇಲಾಖೆ ಸಂಬಂಧಪಟ್ಟವರು ನಮ್ಮ ಊರಿಗೆ ಸುಸಜ್ಜಿತವಾದ ಸೇತುವೆ ಮಾಡಿಸಬೇಕು ಎಂದು ಒತ್ತಾಯಿಸಿದರು.
ಕಳೆದ 15ದಿನಗಳಿಂದ ಈ ಸಮಸ್ಯೆ ಎದುರಾಗಿದೆ. ಇಲ್ಲಿಯವರೆಗೂ ಯಾವ ಶಾಸಕರು ಜನಪ್ರತಿನಿಧಿಗಳು ಸಂಬಂಧಪಟ್ಟ ಅಧಿಕಾರಿಗಳು ಬಂದು ಸಮಸ್ಯೆ ಬಗೆಹರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ಹಿರಿಯೂರು ಶಾಲಾ ಮಕ್ಕಳು , ಹಳ್ಳದ ಪಕ್ಕದಲ್ಲಿ ನಿಂತು ನ್ಯಾಯಕ್ಕಾಗಿ ಘೋಷಣೆ ಕೂಗುತ್ತಾ ಜನಪ್ರತಿನಿಧಿಗಳಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಹಿಡಿಶಾಪ ಹಾಕಿದರು.
ವರದಿ: ಅಬಿದ್ ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz