nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    February 6, 2026

    ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ

    February 6, 2026

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026
    Facebook Twitter Instagram
    ಟ್ರೆಂಡಿಂಗ್
    • ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
    • ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ
    • ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ
    • ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ
    • ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ
    • ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ
    • 18 ತಿಂಗಳಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮೊದಲ ಹಂತ ಪೂರ್ಣ: ಡಿ.ಕೆ.ಶಿವಕುಮಾರ್
    • ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗದಗ; ಮಳೆ ಆರ್ಭಟಕ್ಕೆ 40 ಮನೆಗಳು ಜಲಾವೃತ
    ರಾಜ್ಯ ಸುದ್ದಿ September 6, 2022

    ಗದಗ; ಮಳೆ ಆರ್ಭಟಕ್ಕೆ 40 ಮನೆಗಳು ಜಲಾವೃತ

    By adminSeptember 6, 2022No Comments2 Mins Read
    gadaga

    ಗದಗ, ಸೆಪ್ಟೆಂಬರ್‌, 06: ಗದಗ ಜಿಲ್ಲೆಯಲ್ಲಿ ಮಳೆರಾಯ ಆರ್ಭಟಿಸಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ವರುಣನ ಅಬ್ಬರಕ್ಕೆ ಜಿಲ್ಲೆಯ ಮಜ್ಜೂರಿನಲ್ಲಿ 40ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ಪರಿಣಾಮ ಜನರು ಗುಡ್ಡದಲ್ಲಿ ವಾಸ ಮಾಡುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ. ಶಿರಹಟ್ಟಿ ತಾಲೂಕಿನ ಮಜ್ಜೂರು ಗ್ರಾಮದ ಮಕ್ಕಳು, ವೃದ್ಧರು, ಮಹಿಳೆಯರು ಗುಡ್ಡದಲ್ಲಿ ವಾಸ ಮಾಡುತ್ತಿದ್ದಾರೆ.

    ಮನೆಗಳು ಸಂಪೂರ್ಣ ಜಲಾವೃತವಾಗಿದ್ದು, ಬೇರೆ ಯಾವುದೇ ದಾರಿಯಿಲ್ಲದೇ ಜನರು ಮಕ್ಕಳ್ಳನ್ನು ಕರೆದುಕೊಂಡು ಗುಡ್ಡದಲ್ಲಿ ವಾಸ ಮಾಡಲು ಹೋಗಿದ್ದಾರೆ. ಅಲ್ಲದೇ ರಾತ್ರಿಯಿಡಿ ತತ್ತು ಅನ್ನ ಇಲ್ಲದೇ ಪರದಾಡಿದ್ದಾರೆ. ಆದರೂ ಕೂಡ ನೆರವಿಗೆ ಸ್ಥಳೀಯ ಅಧಿಕಾರಿಗಳು ಇತ್ತ ತಲೆ ಹಾಕುತ್ತಿಲ್ಲ ಎಂದು ಜನರು ಆಕ್ರೋಶ ಹೊರಹಾಕಿದರು.


    Provided by
    Provided by

    ಇನ್ನು ಮುಂಡರಗಿ ತಾಲೂಕಿನ ಡಂಬಳ ಗ್ರಾಮಕ್ಕೂ ಕೆರೆ ನೀರು ನುಗ್ಗಿದ ಪರಿಣಾಮ ಕೆವಿಜಿ ಬ್ಯಾಂಕ್, ಬಿಸಿಎಂ ಹಾಸ್ಟಲ್ ಜಲಾವೃತಗೊಂಡಿವೆ. ನರಗುಂದ ತಾಲೂಕಿನ ಕುರ್ಲಗೇರಿ ಗ್ರಾಮಕ್ಕೆ ಬೆಣ್ಣೆ ಹಳ್ಳದ ನೀರು ನುಗ್ಗಿ ಬಹುತೇಕ ಮನೆಗಳು ಜಲಾವೃತವಾಗಿವೆ. ಮನೆಯಲ್ಲಿದ್ದ ಧಾನ್ಯಗಳು, ಗೃಹೋಪಯೋಗಿ ವಸ್ತುಗಳು ಸಂಪರ್ಣ ಹಾನಿಯಾಗಿವೆ. ಅಪಾಯದ ಮಟ್ಟ ಮೀರಿ ಉಕ್ಕಿ ಹರಿಯುತ್ತಿರುವ ಬೆಣ್ಣೆ ಹಳ್ಳ ರೈತರು ಬೆಳೆದ ಬೆಳೆಗಳಿಗೆ ಹಾನಿ ಮಾಡಿದೆ.

    ಕುರ್ಲಗೇರಿ ಗ್ರಾಮದ ಸೇತುವೆ ಜಲಾವೃತ

    ಬೆಣ್ಣೆ ಹಳ್ಳ ಉಕ್ಕಿ ಹರಿಯುತ್ತಿದ್ದು ನರಗುಂದ ತಾಲೂಕಿನ ಕುರ್ಲಗೇರಿ ಗ್ರಾಮದ ಸೇತುವೆ ಜಲಾವೃತ ಆಗಿದೆ. ಪರಿಣಾಮ ನರಗುಂದ – ಗದಗ ಸಂಚಾರ ಸ್ಥಗಿತಗೊಂಡಿದೆ. ಮತ್ತೊಂದೆಡೆ ರೋಣ ತಾಲೂಕಿನ ಯಾವಗಲ್ ಗ್ರಾಮದ ಬಳಿಯ ಸೇತುವೆ ಮುಳುಗಡೆಯಾಗಿ, ರೋಣ – ನರಗುಂದ ಸಂಪರ್ಕ ಕಡಿತಗೊಂಡಿದೆ.

    ಮನೆ ಗೋಡೆ ಕುಸಿತ, ವ್ಯಕ್ತಿ ಸಾವು

    ಹಾವೇರಿ ಜಿಲ್ಲೆಯಲ್ಲಿಯೂ ಭಾರೀ ಮಳೆ ಸುರಿದ ಪರಿಣಾಮ, ಶಿಶುವಿನಹಾಳ ಗ್ರಾಮದಲ್ಲಿ ಮನೆ ಕುಸಿದು 32 ವರ್ಷದ ಬಸವನಗೌಡ ಎಂಬುವವರು ಸಾವನ್ನಪ್ಪಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಮೃತ ಬಸನಗೌಡ‌ ತಂದೆ ಶಿವನಗೌಡ ಹಾಗೂ ತಾಯಿ ಕಾಶೆವ್ವ ಅವರನ್ನು ರಕ್ಷಣೆ ಮಾಡಿದ್ದಾರೆ. ಮಲಗಿದ್ದ ಸಂದರ್ಭದಲ್ಲಿ ಬಸನಗೌಡ ಅವರ ಮೇಲೆ ಮನೆ ಗೋಡೆ ಬಿದ್ದ ಪರಿಣಾಮ ಅವರು ತೀವ್ರ ಗಾಯಗೊಂಡಿದ್ದರು. ಈ ವೇಳೆ ಸ್ಥಳೀಯರು ಬಸನಗೌಡ ಅವರನ್ನು ಶಿಗ್ಗಾವಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಚಿಕಿತ್ಸಗೆಂದು ಹುಬ್ಬಳ್ಳಿಯ ಕಿಮ್ಸ್‌ಗೆ ಕರೆದೊಯ್ಯುವ ಸಂದರ್ಭದಲ್ಲಿ ಬಸನಗೌಡ ಮೃತ ಪಟ್ಟಿದ್ದಾರೆ.

    ಜಿಲ್ಲೆಯ ಸವಣೂರು ತಾಲೂಕಿನ ಸಿದ್ದಾಪುರ ಗ್ರಾಮದ ರಸ್ತೆಗಳು ಕೆರೆಯಂತಾಗಿ ವಾಹನ ಸವಾರರು ಪರದಾಡಿದ್ದಾರೆ. ಸುಮಾರು ವರ್ಷಗಳ ಬಳಿಕ ಸಿದ್ದಾಪುರದ ಈಶ್ವರ ಕೆರೆ ತುಂಬಿ ಹರಿಯುತ್ತಿದೆ. 404 ಎಕರೆ ವಿಸ್ತೀರ್ಣದಲ್ಲಿರುವ ಕೆರೆ ತುಂಬಿದ್ದು, ಹೆಚ್ಚವರಿ ನೀರು ಗ್ರಾಮಕ್ಕೂ ನುಗ್ಗಿದೆ. 40 ವರ್ಷಗಳ ಬಳಿಕ ಕೆರೆ ಕೊಡಿ ಬಿದ್ದಿರುವ ಹಿನ್ನೆಲೆ ಗ್ರಾಮಸ್ಥರು ಹೈರಾಣಾಗಿದ್ದಾರೆ.

    ಈಶ್ವರ ದೇವಸ್ಥಾನ ಜಲಾವೃತ

    ಇನ್ನು ಕೊಪ್ಪಳದಲ್ಲಿಯೂ ಸುರಿದ ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಜನರು ಮನೆಯಿಂದ ಹೊರಬರಲು ಹಿಂದೇಟು ಹಾಕುತ್ತಿದ್ದಾರೆ. ಜಿಲ್ಲೆಯ ಯರೇಹಂಚಿನಾಳ ಗ್ರಾಮದಲ್ಲಿ ಮನೆಗಳು ಕುಸಿಯುತ್ತಲೇ ಇದ್ದು, ಅಲ್ಲಿನ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಕುಕನೂರು ತಾಲೂಕಿನ ವೀರಾಪುರ ಗ್ರಾಮದಲ್ಲಿರುವ ಈಶ್ವರ ದೇವಸ್ಥಾನವೂ ಕೂಡ ಸಂಪೂರ್ಣ ಜಲಾವೃತವಾಗಿದೆ. ದೇವಸ್ಥಾನದ ಸುತ್ತಲೂ ಹಳ್ಳದ ನೀರು ತುಂಬಿದ್ದು, ಸುತ್ತಮುತ್ತಲಿನ ಜನರು ತತ್ತರಿಸಿ ಹೋಗಿದ್ದಾರೆ.

    55 ವರ್ಷದ ನಾಗಮ್ಮ ಶವವಾಗಿ ಪತ್ತೆ

    ಗದಗ ತಾಲೂಕಿನ ನಾಗಾವಿ ಗ್ರಾಮದ ಬಳಿ ಧಾರಾಕಾರ ಮಳೆಗೆ ರಸ್ತೆ ಕುಸಿದಿದೆ. ಸುಮಾರು 60-70 ಅಡಿ ಯಷ್ಟು ರಸ್ತೆ ಕುಸಿದಿದ್ದು, ದೊಡ್ಡ ಕಂದಕದ ಉಂಟಾಗಿದೆ. ಆದ್ದರಿಂದ ನಾಗಾವಿ ಗ್ರಾಮದಿಂದ ಮಲಿಂಗಾಪುರ, ಕಬಲಾಯದಕಟ್ಟೆ, ಬೆಳದಡಿ ತಾಂಡ, ಹತ್ತಿಕಟ್ಟಿ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ದೇವರಹಳ್ಳದ ಪ್ರವಾಹದಲ್ಲಿ ‌ಕೊಚ್ಚಿಕೊಂಡು ಹೋಗಿದ್ದ ಮಹಿಳೆ ಶವವಾಗಿ ಪತ್ತೆ ಆಗಿದ್ದಾಳೆ. ಇದೀಗ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂಡರಗಿ ತಾಲೂಕಿನ ಹಳ್ಳಿಕೇರಿ ಗ್ರಾಮದ ವ್ಯಾಪ್ತಿಯ ಹಳ್ಳದಲ್ಲಿ ಮಹಿಳೆ ಶವ ಪತ್ತೆ ಆಗಿದೆ. ಮೃತ ಮಹಿಳೆಯನ್ನು 55 ವರ್ಷದ ನಾಗಮ್ಮ ಎಂದು ಗುರುತಿಸಲಾಗಿದೆ. ಜಮೀನು ಕೆಲಸಕ್ಕೆ ಹೋಗಿ ಬರುವಾಗ ಹಳ್ಳದ ರಭಸಕ್ಕೆ ನಾಗಮ್ಮನವರು ಕೊಚ್ಚಿಕೊಂಡು ಹೋಗಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ

    February 6, 2026

    ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ

    February 6, 2026

    18 ತಿಂಗಳಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮೊದಲ ಹಂತ ಪೂರ್ಣ: ಡಿ.ಕೆ.ಶಿವಕುಮಾರ್

    February 6, 2026

    Comments are closed.

    Our Picks

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    February 6, 2026

    ಶಿರಾ: ಈಡಿಗ ಸಮುದಾಯದ ಕುಲಕಸುಬಾದ ಸೇಂದಿ ಮಾರಾಟವನ್ನು ಈ ಸಮುದಾಯದ ಜೀವನಕ್ಕೆ ಮಾರ್ಗೋಪಾಯಕ್ಕಾಗಿ ಪರ್ಯಾಯ ವ್ಯವಸ್ಥೆ ಮಾಡದೆ ನಿಷೇಧಿಸಿದ್ದು, ಪುನಃ…

    ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ

    February 6, 2026

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026

    ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ

    February 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.