ಮಧುಗಿರಿ: ಬಗುರ್ ಹುಕುಂ ಸಮಿತಿಯ ಸದಸ್ಯರಿಗೆ ಸಮಿತಿಯಿಂದ ಸಾಗುವಳಿ ಚೀಟಿ ನೀಡುವ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ ಎಂದು ಬಗರ್ ಹುಕುಂ ಸಮಿತಿ ನಾಮಿನಿ ಸದಸ್ಯ ಪ್ರಸನ್ನ ಕುಮಾರ್ ಆರೋಪಿಸಿದ್ದಾರೆ.
ಸಭೆಯನ್ನು ಬಹಿಷ್ಕರಿಸಿದ ಬಳಿಕ ಪಟ್ಟಣದ ತಹಶೀಲ್ದಾರ್ ಕಚೇರಿಯ ಮುಂಭಾಗದಲ್ಲಿ ಮಾತನಾಡಿದ ಅವರು, ತಹಶೀಲ್ದಾರ್ ಅವರು ಸಮಿತಿ ಸದಸ್ಯರನ್ನು ವಿಶ್ವಾಸಕ್ಕೆ ಪಡೆಯುತ್ತಿಲ್ಲ. ಮೀಟಿಂಗ್ ವಿಫಲವಾಗಿದೆ. ಶಾಸಕರು ಒಳ್ಳೆಯ ಮನುಷ್ಯರಿದ್ದು ಅವರ ಸಹನೆಯನ್ನು ಹಾಲಿ ಶಾಸಕರು, ಅಧಿಕಾರಿಗಳು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಸರ್ಕಾರದಿಂದ ನಾಮಿನಿ ಸದಸ್ಯರನ್ನು ನೇಮಿಸಿದ್ದು, ನಮಗೆ ಬೆಲೆ ಇಲ್ಲದಂತಾಗಿದೆ. ಅರ್ಜಿ ನೀಡಿದ ರೈತರ ಮಾಹಿತಿಯೇ ಇಲ್ಲವಾಗಿದೆ. ಈ ಬಗ್ಗೆ ಸಚಿವ ಆರ್.ಅಶೋಕ್ ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ ನೀಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಬಗರ್ ನಾಮಿನಿ ಸದಸ್ಯರಾದ ನಾರಣಪ್ಪ, ಉಮಾದೇವಿ ಚೌಡಪ್ಪ ಮತ್ತಿತರ ಹಾಜರಿದ್ದರು.
ವರದಿ: ಅಬಿದ್, ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz