ಬಾಗಲಕೋಟೆ : ಮಕ್ಕಳ ಕಳ್ಳರೆಂದು ಭಾವಿಸಿ ಜನರು ಕಾರು ಬೆನ್ನತ್ತಿದ್ದು, ತಪ್ಪಿಸಿಕೊಳ್ಳುವಾಗ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿಯಾದ ಘಟನೆ ಜಿಲ್ಲೆಯ ಬೀಳಗಿಯಲ್ಲಿ ನಡೆದಿದೆ.
ಮಕ್ಕಳ ಕಳ್ಳರೆಂದು ಭಾವಿಸಿ ಜನರು ಕಾರೊಂದನ್ನು ಬೆನ್ನತ್ತಿದ್ದಾರೆ. ಈ ವೇಳೆ ಭಯಗೊಂಡ ಕಾರಿನವರು ತಪ್ಪಿಸಿಕೊಳ್ಳುವ ವೇಳೆ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ.
ಬೀಳಗಿಯಿಂದ ಗ್ರಾಮದ ಜನರು ಬೈಕ್ ನಲ್ಲಿ ಕಾರು ಬೆನ್ನತ್ತಿದ್ದಾರೆ. ಈ ವೇಳೆ ತಪ್ಪಿಸಿಕೊಳ್ಳುವಾಗ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿಯಾಗಿದೆ. ಘಟನೆಯಲ್ಲಿ ದೇವರಾಜ ಭಾರತಿ, ಜಯದೀಪ ಜಗದಾಳೆ, ಮೊಹಮ್ಮದ್ ಇಲಿಯಾಸ್ಗೆ ಗಾಯಗಳಾಗಿದ್ದು ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


