ಕೊರಟಗೆರೆ: ತುಮಕೂರು ಉಪವಿಭಾಗಾಧಿಕಾರಿ ಅಜಯ್ ಕುಮಾರ್ ಅವರು ಸರ್ಕಾರಿ ಕಚೇರಿಯಲ್ಲಿ ಸಾರ್ವಜನಿಕರನ್ನು ಹೊರಗಿಟ್ಟು ಕಚೇರಿಯೊಳಗೆ ತನ್ನ ಹುಟ್ಟು ಹುಟ್ಟು ಹಬ್ಬ ಆಚರಣೆ ಮಾಡಿಕೊಂಡ ಘಟನೆ ನಡೆದಿದ್ದು, ಘಟನೆ ವಿರುದ್ಧ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.
ಉಪವಿಭಾಗಾಧಿಕಾರಿ ಅಜಯ್ ಕುಮಾರ್ ಅವರು ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಉಪ ವಿಭಾಗಾಧಿಕಾರಿ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ದಲಿತ ಮುಖಂಡ ಜೆಟ್ಟಿ ಅಗ್ರಹಾರ ನಾಗರಾಜು ಒತ್ತಾಯಿಸಿದ್ದಾರೆ.
ಎಸಿ ವಿರುದ್ಧ ಶಿಸ್ತು ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿರುವ ಸಾಮಾಜಿಕ ಹೋರಾಟಗಾರ ಜೆಟ್ಟಿ ಅಗ್ರಹಾರ ನಾಗರಾಜ್, ಹುಟ್ಟುಹಬ್ಬ ಆಚರಣೆಯಲ್ಲಿ ಭಾಗಿಯಾದ ಜಿಲ್ಲಾಮಟ್ಟದ ಎಲ್ಲಾ ಅಧಿಕಾರಿಗಳ ವಿರುದ್ಧ ಸರ್ಕಾರಕ್ಕೆ ಕ್ರಮವಹಿಸಲು ಒತ್ತಾಯಿಸಿದ್ದಾರೆ.
ವಿಶ್ವ ಮಾನವ ಹಕ್ಕುಗಳ ಹೋರಾಟಗಾರರಾದ ಕೊರಟಗೆರೆ ನವೀನ್ ಕುಮಾರ್ ಮಾತನಾಡಿ, ಮಳೆಯಿಂದಾಗಿ ಜನರು ಸಾಕಷ್ಟು ಸಂಕಷ್ಟಕ್ಕೀಡಾಗಿದ್ದಾರೆ. ಬೆಳೆ ಪರಿಹಾರ, ಮನೆಗಳ ದುರಸ್ತಿ ಕ್ರಮಕ್ಕೆ ಮುಂದಾಗದೇ ಉಪವಿಭಾಗಾಧಿಕಾರಿಯವರು ಕಚೇರಿ ವೇಳೆಯಲ್ಲಿ ಸರ್ಕಾರಿ ಕಚೇರಿಯಲ್ಲಿಯೇ ಹುಟ್ಟುಹಬ್ಬ ಆಚರಣೆಯಲ್ಲಿ ತೊಡಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರ್ತವ್ಯಲೋಪ ಎಸಗಿರುವ ಉಪವಿಭಾಗಾಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿಗಳು ಕೂಡಲೇ ಕ್ರಮವಹಿಸುವಂತೆ ಸಾಮಾಜಿಕ ಹೋರಾಟಗಾರರಾದ ನವೀನ್ ಕುಮಾರ್ ಮತ್ತು ಅಗ್ರಹಾರ ನಾಗರಾಜು ಒತ್ತಾಯಿಸಿದ್ದಾರೆ.
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy