nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

    July 17, 2026

    ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ

    July 17, 2026

    ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?

    July 17, 2026
    Facebook Twitter Instagram
    ಟ್ರೆಂಡಿಂಗ್
    • ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ
    • ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ
    • ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?
    • ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ
    • ತುಮಕೂರು: ಜುಲೈ 22ರಂದು ಉದ್ಯಮಶೀಲತೆ ತಿಳುವಳಿಕೆ ಶಿಬಿರ
    • ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮೀನುಗಾರಿಕೆ ತರಬೇತಿ ಕೇಂದ್ರ ಸ್ಥಾಪಿಸಲು ಕ್ರಮ: ಶಾಸಕ ಸಿ.ಬಿ.ಸುರೇಶ್ ಬಾಬು
    • ಕೊರಟಗೆರೆ: ವಿಷಪೂರಿತ ಆಹಾರ ಸೇವನೆ: 59 ಕುರಿಗಳ ಸಾವು
    • ತುಮಕೂರು: ಜು.18 ರಿಂದ 26ರವರೆಗೆ ಗಮಕ ಹಬ್ಬ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಲಿತ ನೌಕರೆ ತಂದ ಚಾ ತಿಂಡಿ ತಿನ್ನಲ್ಲ:  ಗ್ರಾ.ಪಂ. ಸದಸ್ಯೆ ವಿರುದ್ಧ ಜಾತಿ ನಿಂದನೆ ಆರೋಪ
    ಪಾವಗಡ September 20, 2022

    ದಲಿತ ನೌಕರೆ ತಂದ ಚಾ ತಿಂಡಿ ತಿನ್ನಲ್ಲ:  ಗ್ರಾ.ಪಂ. ಸದಸ್ಯೆ ವಿರುದ್ಧ ಜಾತಿ ನಿಂದನೆ ಆರೋಪ

    By adminSeptember 20, 2022No Comments2 Mins Read
    ck pura

    ಪಾವಗಡ: ದಲಿತ ನೌಕರೆ ತಂದ ತಿಂಡಿ, ಚಾ ಕಾಫಿ ಇವರ ಗಂಟಲಲ್ಲಿ ಇಳಿಯಲ್ವಂತೆ? ನೀನು ಚಾ ತಿಂಡಿ ತಂದ್ರೆ, ನಾನು ತಿನ್ನಲ್ಲ ಎಂದು ಜಾತಿಯ ಹೆಸರೆತ್ತಿ ದಲಿತ ನೌಕರರೊಬ್ಬರನ್ನು  ಗ್ರಾಮ ಪಂಚಾಯತ್ನ ಸದಸ್ಯೆ ನಿಂದಿಸಿರುವ ಘಟನೆ ತಾಲೂಕು ನಿಡಗಲ್ ಹೋಬಳಿ ಸಿ.ಕೆ.ಪುರ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.

    ಹರಿಹರಪುರ  ಸದಸ್ಯೆ ಅರುಂಧತಿ ನಾಗಲಿಂಗಪ್ಪ ಅವರ ವಿರುದ್ಧ ಈ ಗಂಭೀರ ಆರೋಪ ಕೇಳಿ ಬಂದಿದ್ದು, ಗ್ರಾಮ ಪಂಚಾಯತ್ ಸಭೆಗಳು ನಡೆದಾಗ ನೌಕರೆ ದಲಿತ ಹೆಣ್ಣು ಮಗಳಾದ ಧಾಮಸ ಅವರು, ಹೊಟೇಲ್ ನಿಂದ ತಿಂಡಿ ತಂದು ಕೊಟ್ಟಾಗ ನೀನು ತಂದ ಊಟ ತಿಂಡಿಯನ್ನು ನಾವು ತಿನ್ನುವುದಿಲ್ಲ, ಎಂದು ಜಾತಿಯ ಹೆಸರೆತ್ತಿ ಅವಮಾನಿಸಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವುದೇ ಅಲ್ಲದೇ ಅವರ ಸದಸ್ಯತ್ವವನ್ನು ರದ್ದುಪಡಿಸಬೇಕು ಎಂಬ ಆಕ್ರೋಶ ಕೇಳಿ ಬಂದಿದೆ.

    ಘಟನೆಯ ಹಿನ್ನೆಲೆ:

    ತಾಲೂಕು ನಿಡಗಲ್ ಹೋಬಳಿ ಸಿ.ಕೆ.ಪುರ ಗ್ರಾಮ ಪಂಚಾಯಿತಿಯಲ್ಲಿ ಮಾರಣ್ಣ ಎಂಬುವವರು 15 ವರ್ಷಗಳ ಹಿಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿ ದೀಪಗಳನ್ನು ಅಳವಡಿಸಲು ನೇಮಕ ಮಾಡಿಕೊಂಡಿದ್ದರು. ಮಾರಣ್ಣ ಎಂಬವರು ಕಂಬ ಹತ್ತಿ ಲೈಟ್ ಹಾಕುವ ಈಸಂದರ್ಭದಲ್ಲಿ ವಿದ್ಯುತ್ ಶಾಕ್ ಹೊಡೆದು ದಾರುಣವಾಗಿ ಮೃತಪಟ್ಟಿದ್ದರು. ಹೀಗಾಗಿ ಅವರ ಬಡ ಕುಟುಂಬಕ್ಕೆ ಅನುಕಂಪದ ಆಧಾರದಲ್ಲಿ ಕೆಲಸ ನೀಡಲಾಯಿತು. ಮಾರಪ್ಪನವರ ಪತ್ನಿ ಜಯಮ್ಮನವರು ಮಾರಪ್ಪನವರ ಕೆಲಸವನ್ನು ನಿರ್ವಹಿಸಲು ಆರಂಭಿಸಿದ್ದರು.  ಎರಡು ವರ್ಷಗಳ ಹಿಂದೆ ಜಯಮ್ಮನವರಿಗೆ ಅನಾರೋಗ್ಯವಾಗಿದ್ದರಿಂದಾಗಿ ಅವರ ಮಗಳಾದ ದಾಮಸ ಅವರು ಪಂಚಾಯತ್ ಅಧ್ಯಕ್ಷರು, ಗ್ರಾಮಸ್ಥರ ಒಪ್ಪಿಗೆಯಿಂದಲೇ ಜಯಮ್ಮನವರ ಕೆಲಸವನ್ನು ಮಾಡುತ್ತಿದ್ದಾರೆ.

    ಗ್ರಾಮ ಪಂಚಾಯತ್ ಸಭೆ ನಡೆದಾಗ ದಾಮಸ ಅವರು ಸದಸ್ಯರಿಗೆ ಹೊಟೇಲ್ ನಿಂದ ತಿಂಡಿ ಮತ್ತು ಕಾಫಿ, ಊಟ ತರುತ್ತಿದ್ದರು. ಆದರೆ ಅರುಂಧತಿ ನಾಗಲಿಂಗಪ್ಪ ಅವರು ಧಾಮಸ ಅವರಿಗೆ ಜಾತಿ ನಿಂದನೆ ಮಾಡಿ, ಮನಸ್ಸಿಗೆ ಆಘಾತವನ್ನುಂಟು ಮಾಡಿದ್ದಾರೆ. ಜಾತಿಯ ಬೇಧವನ್ನು ತಲೆಯಲ್ಲಿ ತುಂಬಿಕೊಂಡವರು, ಅಸ್ಪೃಶ್ಯತೆಯನ್ನು ಪ್ರತಿಪಾದಿಸುವವರು ಸದಸ್ಯರಾಗಿದ್ದು, ಸಂವಿಧಾನದ ವಿರುದ್ಧ ಮನಸ್ಥಿತಿಯವರು ಸದಸ್ಯರಾಗಲು ಅನರ್ಹರು ಅವರ ಸದಸ್ಯತ್ವ ರದ್ದುಪಡಿಸಬೇಕು ಎಂಬ ಆಕ್ರೋಶ ಕೇಳಿ ಬಂದಿದೆ.

    ಘಟನೆ ಸಂಬಂಧ ಡಿ. ಎಸ್. ಎಸ್. ಸಂಚಾಲಕರಾದ ಹನುಮಂತರಾಯಪ್ಪ ಆಕ್ರೋಶ ವ್ಯಕ್ತಪಡಿಸಿದ್ದು, ಜಾತಿ ನಿಂದನೆ ಮಾಡಿದವರ ಮೇಲೆಕಾನೂನು ಕ್ರಮ ಕೈಗೊಳ್ಳಬೇಕು. ಅಂಥವರ ಸದಸ್ಯತ್ವವನ್ನು ರದ್ದು ಮಾಡಬೇಕು. ಸಂಬಂಧಪಟ್ಟ ಮೇಲಾಧಿಕಾರಿಗಳು ಇದನ್ನು ಸೂಕ್ಷ್ಮ ವಾಗಿ ಪರಿಶೀಲನೆ ಮಾಡಿ ಸೂಕ್ತ ಕಾನೂನು ರೀತಿಯ ಕ್ರಮ ಜರುಗಿಸಿ ನ್ಯಾಯ ದೊರಕಿಸಿ ಕೊಡಬೇಕು ಎಂದು ಮನವಿ ಮಾಡಿದ್ದಾರೆ.

    ವರದಿ: ರಾಮಪ್ಪ ಸಿ.ಕೆ.ಪುರ ಪಾವಗಡ ತಾಲೂಕು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    ವಿಶೇಷಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು: ಪಾವಗಡ ಶಾಸಕ ಎಚ್.ವಿ. ವೆಂಕಟೇಶ್

    July 7, 2026

    ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ

    July 4, 2026

    ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

    July 17, 2026

     ರಾಘವೇಂದ್ರ ಅಡಿಗ ಎಚ್ಚೆನ್. ‘ಪುಣ್ಯಕೋಟಿ’ ಹಾಡನ್ನು ಕೇಳದ ಕಿವಿಗಳೆ ಇಲ್ಲ ಎನ್ನಬಹುದು. ಅಂತಹ “ಪುಣ್ಯಕೋಟಿ” ಹಾಡನ್ನು ಖ್ಯಾತ ಕಾದಂಬರಿಕಾರ, ಬರಹಗಾರ,…

    ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ

    July 17, 2026

    ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?

    July 17, 2026

    ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ

    July 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.