ಮಧುಗಿರಿ: ಜಲಜೀವನ್ ಮಿಷನ್ ಅಡಿ ನಡೆಸುತ್ತಿರುವ ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡುವಂತೆ ಶಾಸಕ ಎಂ.ವಿ.ವೀರಭದ್ರಯ್ಯ ಸೂಚಿಸಿದರು.
ತಾಲ್ಲೂಕಿನ ಕಸಬ ವ್ಯಾಪ್ತಿಯ ಕಂಬದಹಳ್ಳಿ ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜಮೆಯಡಿಯಲ್ಲಿ 49 ಲಕ್ಷ ರೂ ವೆಚ್ಚದ ಓವರ್ ಹೆಡ್ ಟ್ಯಾಂಕ್ ಕಾಮಗಾರಿಗೆ ಗುದ್ದಲಿ ಪೂಜೆ ನೇರವೇರಿಸಿ ಮಾತನಾಡಿದ ಅವರು. ಕೇಂದ್ರ ಸರಕಾರದ ಯೋಜನೆಯಾಗಿದ್ದು, ಗ್ರಾಮದ ಪ್ರತಿ ಮನೆ ಮನೆಗೂ ಕೊಳಾಯಿ ನೀರು ಸರಬರಾಜು ಮಾಡಲಾಗುತ್ತದೆ. ಯಾದಗಿರಿ ಮೂಲದ ಗುತ್ತಿಗೆದಾರ ಬಸವರಾಜು ಗೌಡ ರವರು ಆನ್ ಲೈನ್ ಮೂಲಕ ಟೆಂಡರ್ ಪಡೆದಿದ್ದು ಉತ್ತಮವಾದ ಕಾಮಗಾರಿಯನ್ನು ನಡೆಸುವಂತೆ ಸೂಚಿಸಿದರು.
ಪುರಸಭಾ ಸದಸ್ಯರಾದ ಎಂ.ಆರ್.ಜಗನ್ನಾಥ್, ಎಂ.ಎಸ್.ಚಂದ್ರಶೇಖರ್ ಬಾಬು, ಜೆಡಿಎಸ್ ಮುಖಂಡ ತುಂಗೋಟಿ ರಾಮಣ್ಣ, ತಾಪಂ ಮಾಜಿ ಸದಸ್ಯ ನಾಗಭೂಷಣ್, ಗುಂಡಗಲ್ಲು ಶಿವಣ್ಣ, ಗ್ರಾಪಂ ಅಧ್ಯಕ್ಷ ರವಿಕುಮಾರ್, ರವೀಶಾರಾಧ್ಯ, ತಿಮ್ಮಣ್ಣ, ಡಿ.ವಿ.ಹಳ್ಳಿ ಪ್ರಭು, ಎಇಇ ರಾಮದಾಸು ಹಾಗೂ ಗ್ರಾಮಸ್ಥರು ಇದ್ದರು.
ವರದಿ: ಅಬಿದ್ ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy