ಬೆಂಗಳೂರು : ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತಿ ಕ್ಷೇತ್ರಗಳ ಮರು ವಿಂಗಡಣೆ ಮತ್ತು ಮೀಸಲು ನಿಗದಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮತ್ತೆ 12 ವಾರಗಳ ಕಾಲಾವಕಾಶ ನೀಡಿದೆ.
ರಾಜ್ಯದ 31 ಜಿಲ್ಲಾಪಂಚಾಯತ್ ಮತ್ತು 239 ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ, ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳು ಸೇರಿದಂತೆ ಎಲ್ಲಾ ರೀತಿಯ ಮೀಸಲಾತಿಯನ್ನು 12 ವಾರದೊಳಗೆ ಮರು ನಿಗದಿಪಡಿಸಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ.
ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ಮುಂದಾಗಿರುವುದನ್ನು ಪ್ರಶ್ನಿಸಿ ಚುನಾವಣಾ ಆಯೋಗ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ.
ಈ ಅರ್ಜಿ ಹಂಗಾಮಿ ಮುಖ್ಯ ನ್ಯಾ.ಅಲೋಕ್ ಅರಾಧೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಈ ವೇಳೆ ಸರ್ಕಾರದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಮರು ವಿಂಗಡಣೆಗೆ ಆಯೋಗವು ಕಾಲಾವಕಾಶ ಕೋರಿದ್ದಕ್ಕೆ 12 ವಾರ ಸಮಯ ನೀಡುವಂತೆ ಕೋರಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


