ಮಧುಗಿರಿ : ಶಾಲೆ ಮುಗಿದ ನಂತರ ಆಟೋದಲ್ಲಿ ಹಿಂದಿರುಗುತ್ತಿದ್ದ ವೇಳೆ ಆಟೋದಿಂದ ಆಯತಪ್ಪಿ ಬಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪಟ್ಟಣದ ಲಿಂಗೇನಹಳ್ಳಿ ಸಮೀಪ ಮಂಗಳವಾರ ಸಂಜೆ ನಡೆದಿದೆ.
ಪಟ್ಟಣದ ವಿವೇಕಾನಂದ ವಿದ್ಯಾಮಂದಿರ ಶಾಲೆಯ ಮೂರನೇ ತರಗತಿಯ 9 ವರ್ಷದ ವಿದ್ಯಾರ್ಥಿ ಕುಶಲ್ ಮೃತಪಟ್ಟ ದುರ್ದೈವಿ.
ಶಾಲೆ ಮುಗಿಸಿಕೊಂಡು ಬೆಂಕಿಪುರದಲ್ಲಿರುವ ಮನೆಗೆ ಹಿಂದಿರುಗುತ್ತಿದ್ದಾಗ ಮೂಡ್ಲಪ್ಪ ಹೋಟೆಲ್ ಬಳಿ ವಿದ್ಯಾರ್ಥಿ ಆಟೋದಿಂದ ಇಳಿಯುವುದಕ್ಕೂ ಮುಂಚೆ ಆಟೋ ಮುಂದಕ್ಕೆ ಚಲಿಸಿದ್ದು, ಈ ವೇಳೆ ವಿದ್ಯಾರ್ಥಿ ಆಯಾ ತಪ್ಪಿ ಬಿದ್ದಿದ್ದು, ಆಟೋದ ಹಿಂಬದಿ ಚಕ್ರ ವಿದ್ಯಾರ್ಥಿಯ ತಲೆ ಮೇಲೆ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಮೃತ ವಿದ್ಯಾರ್ಥಿಯ ತಾಯಿ ಸರೋಜಮ್ಮ ಮರುವೇಕೆರೆ ಗ್ರಾಮದ ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ. ತಂದೆ ಅಶ್ವತಪ್ಪನ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.
ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹವನ್ನು ತಂದಾಗ ವಿದ್ಯಾರ್ಥಿಯ ಕುಟುಂಬಸ್ಥರ ಆಕ್ರಂದ ಮುಗಿಲು ಮುಟ್ಟಿತು. ಈ ಘಟನೆಗೆ ಸಂಬಂಧಿಸಿ ಮಧುಗಿರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಸ್ಥಳ ಪರಿಶೀಲಿಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ…
ವರದಿ : ಅಬಿದ್ ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy