nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು | ಮುಳ್ಳೂರು ಗ್ರಾಮವನ್ನು ಹೋಬಳಿ ಕೇಂದ್ರ ಮಾಡಲು ಪ್ರಯತ್ನಿಸಲಾಗುವುದು: ಶಾಸಕ ಅನಿಲ್ ಕುಮಾರ್

    November 4, 2025

    ಬೀದಿಬದಿ ವ್ಯಾಪಾರಸ್ಥರ ಸುರಕ್ಷತೆಗೆ ಕ್ರಮವಹಿಸುವಂತೆ ಸದಸ್ಯರ ಆಗ್ರಹ

    November 4, 2025

    ಕೊರಟಗೆರೆ ಬಸ್ ಗಾಗಿ ಪರದಾಟ:   ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ವಿರುದ್ಧ ಹೆಚ್ಚಾದ ಜನಾಕ್ರೋಶ

    November 4, 2025
    Facebook Twitter Instagram
    ಟ್ರೆಂಡಿಂಗ್
    • ಸರಗೂರು | ಮುಳ್ಳೂರು ಗ್ರಾಮವನ್ನು ಹೋಬಳಿ ಕೇಂದ್ರ ಮಾಡಲು ಪ್ರಯತ್ನಿಸಲಾಗುವುದು: ಶಾಸಕ ಅನಿಲ್ ಕುಮಾರ್
    • ಬೀದಿಬದಿ ವ್ಯಾಪಾರಸ್ಥರ ಸುರಕ್ಷತೆಗೆ ಕ್ರಮವಹಿಸುವಂತೆ ಸದಸ್ಯರ ಆಗ್ರಹ
    • ಕೊರಟಗೆರೆ ಬಸ್ ಗಾಗಿ ಪರದಾಟ:   ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ವಿರುದ್ಧ ಹೆಚ್ಚಾದ ಜನಾಕ್ರೋಶ
    • ತೆಂಗಿನ ಗರಿ ತೆಗೆಯುವ ವೇಳೆ ವಿದ್ಯುತ್ ಸ್ಪರ್ಶ:  ರೈತ ಸಾವು
    • ತೆಲಂಗಾಣ | ಭೀಕರ ರಸ್ತೆ ಅಪಘಾತ: 24 ಸಾವು, ಎಂಟು ಮಂದಿಗೆ ಗಾಯ
    • ವಿದ್ಯುತ್ ಸ್ಪರ್ಶದಿಂದ ಆನೆಗಳು ಸಾವು: ತನಿಖೆಗೆ ಸಚಿವ ಈಶ್ವರ ಬಿ ಖಂಡ್ರೆ ಆದೇಶ
    • ಮಾತಿನ ಮಲ್ಲಿ ಮಲ್ಲಮ್ಮ ಬಿಗ್ ಬಾಸ್ ನಿಂದ ಔಟ್ ಆಗಿದ್ದು ಹೇಗೆ?
    • ಎಲ್ಲ ಆರೋಪಗಳನ್ನು ನಿರಾಕರಿಸಿದ ನಟ ದರ್ಶನ್ ಮತ್ತು ಇತರ ಆರೋಪಿಗಳು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕ್ರೀಡೆಗಳಲ್ಲಿ ಗ್ರಾಮೀಣ ಭಾಗದ ಜನರೇ ಹೆಚ್ಚಿನ ಸಾಧನೆ ಮಾಡಿದ್ದಾರೆ: ಗ್ರಾ.ಪಂ. ಅಧ್ಯಕ್ಷ ಮಲ್ಲಣ್ಣ
    ಕೊರಟಗೆರೆ September 29, 2022

    ಕ್ರೀಡೆಗಳಲ್ಲಿ ಗ್ರಾಮೀಣ ಭಾಗದ ಜನರೇ ಹೆಚ್ಚಿನ ಸಾಧನೆ ಮಾಡಿದ್ದಾರೆ: ಗ್ರಾ.ಪಂ. ಅಧ್ಯಕ್ಷ ಮಲ್ಲಣ್ಣ

    By adminSeptember 29, 2022No Comments2 Mins Read
    dasara kridakoota

    ಕೊರಟಗೆರೆ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ,  ಹುಲೀಕುಂಟೆ ಗ್ರಾಮ ಪಂಚಾಯತ್ ಇವರ ವತಿಯಿಂದ ದಸರಾ  ಅಂಗವಾಗಿ ಸರ್ಕಾರದ ಆದೇಶದ ಪಾಲನೆಯಂತೆ ಹುಲೀಕುಂಟೆ ನಾರಾಯಣಸ್ವಾಮಿ ಕ್ರೀಡಾ ಮೈದಾನದಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜಿಸಲಾಗಿತ್ತು.

    ತಾಪಂ ಕಾರ್ಯನಿರ್ವಹಣಾ ಅಧಿಕಾರಿ ದೊಡ್ಡಸಿದ್ದಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,  ಗ್ರಾಮೀಣಾ ಭಾಗದ ಕ್ರೀಡಾ ಪಟುಗಳಿಗೆ ಕ್ರೀಡೆಯ ಮೇಲೆ ಆಸಕ್ತಿಯೇ ಕಡಿಮೆಯಾಗಿದೆ. ಕ್ರೀಡಾ ಚಟುವಟಿಕೆಗಳಲ್ಲಿ ಯುವಕರು ತೊಡಗದೇ ದೈಹಿಕ ಹಾಗೂ ಮಾನಸಿಕವಾಗಿ, ಸದೃಡರಾಗದೆ, ಕೆಟ್ಟ ಅಭ್ಯಾಸಗಳಿಗೆ ಬಲಿಯಾಗುತ್ತಿದ್ದಾರೆ  ಎಂದರು.


    Provided by
    Provided by

    ಯುವಕರಿಗೆ  ಕಬಡ್ಡಿ, ಖೋಖೋ, ಕುಸ್ತಿ, ಎತ್ತಿನಗಾಡಿ ಓಟ ಇನ್ನೂ ಮುಂತಾದ ಕ್ರೀಡೆಗಳನ್ನು ಗ್ರಾಮೀಣ ಮಟ್ಟದಲ್ಲಿ ಗ್ರಾಮ ಪಂಚಾಯತ್ ನವರು ಆಯೋಜನೆ ಮಾಡಬೇಕು. ಈ ಮೂಲಕ  ಕ್ರೀಡಾ ಆಸಕ್ತಿಯನ್ನು ಹೆಚ್ಚಿಸಿ ಎಂದು ಅವರು ಹೇಳಿದರು.

    ಹುಲೀಕುಂಟೆ ಗ್ರಾಮ ಪಂಚಾಯತ್  ಅಧ್ಯಕ್ಷ ಮಲ್ಲಣ್ಣ ಮಾತನಾಡಿ, ದೇಶದ ಕ್ರೀಡೆಗಳಲ್ಲಿ ಗ್ರಾಮೀಣ ಭಾಗದ ಜನರೇ ಹೆಚ್ಚಿನ ಸಾಧನೆ ಮಾಡಿದ್ದಾರೆ. ಹೀಗಾಗಿ ಕ್ರೀಡೆ ಮೇಲೆ ಇರುವಂತಹ ಆಸಕ್ತಿಯನ್ನು ಗ್ರಾಮೀಣ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಹೊರಹಾಕಿ ಎಂದು ಹೇಳಿದರು.

    ಜಿಲ್ಲಾ ಪಂಚಾಯ್ತಿ ಎಂಜಿನಿಯರ್ ರವಿಕುಮಾರ್ ಮಾತನಾಡಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಸುತ್ತಿರುವ ಈ ಕ್ರೀಡಾಕೂಟವು ಕೇವಲ ಗ್ರಾಮೀಣ ಭಾಗಕ್ಕೆ ಮೀಸಲಾಗಬಾರದು, ಇಲ್ಲಿನ ಪ್ರತಿಭೆಗಳು ತಾಲ್ಲೂಕು, ಜಿಲ್ಲೆ ಸೇರಿದಂತೆ ರಾಜ್ಯಮಟ್ಟದಲ್ಲಿ ಗುರುತಿಸಿ ಕೊಳ್ಳಬೇಕು. ಯಾರಿಗೆ ಗೊತ್ತು ಇಲ್ಲಿರುವ ಪ್ರತಿಭೆಗಳು ಮುಂದೊಂದು ದಿನ  ದೇಶದ ಮಟ್ಟದಲ್ಲಿ ಗುರುತಿಸಿಕೊಂಡು ದೇಶಕ್ಕೆ ಕೀರ್ತಿ ಇರಬಹುದು ಆದ್ದರಿಂದ ಗ್ರಾಮೀಣ ಭಾಗದ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿ ಎಂದು ತಿಳಿಸಿದರು.

    ಗ್ರಾಪಂ ಅಭಿವೃದ್ಧಿ ಅಧಿಕಾರಿ ಪೃಥ್ವಿಭಾ ಮಾತನಾಡಿ, ಸರ್ಕಾರ ಪ್ರತಿಯೊಂದು ಗ್ರಾಮ ಪಂಚಾಯತ್ ವತಿಯಿಂದ ಕ್ರೀಡಾಕೂಟ ಆಯೋಜನೆ ಮಾಡಲು ಆದೇಶಿಸಿದೆ. ಅದರಂತೆ  ನಮ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯಿಂದ ದಸರಾ ಮಹೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ, ಗ್ರಾಪಂ ವ್ಯಾಪ್ತಿಯ ಎಲ್ಲಾ ಗ್ರಾಮದವರು ಕ್ರೀಡೆಯಲ್ಲಿ ಆಸಕ್ತಿ ಭಾಗವಹಿಸಿ ಎಂದರು.

    ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಅನ್ನಪೂರ್ಣಮ್ಮ, ಎಇಇ ರವಿಕುಮಾರ್, ಗ್ರಾಪಂ ಮಾಜಿ ಅಧ್ಯಕ್ಷ ರಮೇಶ್, ಫ್ರೆಂಡ್ಸ್ ಗ್ರೂಪ್ ಅಧ್ಯಕ್ಷ ರವಿಕುಮಾರ್, ಕಂದಾಯ ಇಲಾಖೆಯ ಸಿಬ್ಬಂದಿ ಸದಸ್ಯರು, ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಹಾಜರಿದ್ದರು.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬೀದಿಬದಿ ವ್ಯಾಪಾರಸ್ಥರ ಸುರಕ್ಷತೆಗೆ ಕ್ರಮವಹಿಸುವಂತೆ ಸದಸ್ಯರ ಆಗ್ರಹ

    November 4, 2025

    ಕೊರಟಗೆರೆ ಬಸ್ ಗಾಗಿ ಪರದಾಟ:   ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ವಿರುದ್ಧ ಹೆಚ್ಚಾದ ಜನಾಕ್ರೋಶ

    November 4, 2025

    ಕನ್ನಡನಾಡು ಸಂಪನ್ಮೂಲ ಹಾಗೂ ಸಂಸ್ಕೃತಿಯಲ್ಲಿ ಶ್ರೀಮಂತ: ತಹಶೀಲ್ದಾರ್ ಮಂಜುನಾಥ್ ಕೆ.

    November 2, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು | ಮುಳ್ಳೂರು ಗ್ರಾಮವನ್ನು ಹೋಬಳಿ ಕೇಂದ್ರ ಮಾಡಲು ಪ್ರಯತ್ನಿಸಲಾಗುವುದು: ಶಾಸಕ ಅನಿಲ್ ಕುಮಾರ್

    November 4, 2025

    ಸರಗೂರು:  ತಾಲೂಕಿನ ಮುಳ್ಳೂರು ಗ್ರಾಮವನ್ನು ಹೋಬಳಿ ಕೇಂದ್ರವನ್ನಾಗಿ ಮಾಡಲು ಪ್ರಯತ್ನ ಮಾಡಲಾಗುವುದು ಎಂದು ಶಾಸಕ, ಅರಣ್ಯ ಮತ್ತು ವಸತಿ ವಿಹಾರ…

    ಬೀದಿಬದಿ ವ್ಯಾಪಾರಸ್ಥರ ಸುರಕ್ಷತೆಗೆ ಕ್ರಮವಹಿಸುವಂತೆ ಸದಸ್ಯರ ಆಗ್ರಹ

    November 4, 2025

    ಕೊರಟಗೆರೆ ಬಸ್ ಗಾಗಿ ಪರದಾಟ:   ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ವಿರುದ್ಧ ಹೆಚ್ಚಾದ ಜನಾಕ್ರೋಶ

    November 4, 2025

    ತೆಂಗಿನ ಗರಿ ತೆಗೆಯುವ ವೇಳೆ ವಿದ್ಯುತ್ ಸ್ಪರ್ಶ:  ರೈತ ಸಾವು

    November 4, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.